ಬಿಜೆಪಿ ಯೂಸ್​ ಆ್ಯಂಡ್​ ಥ್ರೋ ಮಾಡುತ್ತೆ: ಶಿವರಾಜ ತಂಗಡಗಿ


Team Udayavani, Dec 26, 2022, 6:09 PM IST

ಬಿಜೆಪಿ ಯೂಸ್​ ಆ್ಯಂಡ್​ ಥ್ರೋ ಮಾಡುತ್ತೆ: ಶಿವರಾಜ ತಂಗಡಗಿ

ಕೊಪ್ಪಳ: ಯೂಸ್ ಆ್ಯಂಡ್ ಥ್ರೋ ಮಾಡುವವರು ಯಾರಾದ್ರೂ ಇದ್ರೆ ಅದು ಬಿಜೆಪಿ ಪಕ್ಷದವರು ಎನ್ನುವುದಕ್ಕೆ ಜನಾರ್ದನ ರೆಡ್ಡಿ ಅವರೇ ಒಂದು ಉದಾಹರಣೆ. ರೆಡ್ಡಿ ಅವರನ್ನು ಬೇಕಾದಾಗ ಬಳಸಿಕೊಂಡು ಈಗ ಕೈ ಬಿಟ್ಟಿದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಅವರಿಗೆ ನಾನು ಶುಭಾಶಯ ತಿಳಿಸುವೆ. ಆದರೆ, ಜನಾರ್ದನ ರೆಡ್ಡಿ ಅವರು ಬಿಜೆಪಿಯನ್ನು ನಂಬಿದ್ದರು. ಬಿಜೆಪಿ ಅವರನ್ನು ಬಳಸಿಕೊಂಡು ಕೈ ಬಿಟ್ಟಿದೆ. ಬಿಜೆಪಿ ಒಂದು ತರ ಅವಕಾಶವಾದಿಗಳಿದ್ದಂತೆ, ಅವಕಾಶ ಇದ್ದಾಗ ಯಾರನ್ನು ಬಳಕೆ ಮಾಡಿಕೊಳ್ಳಲು ಅವರು ಯೋಚಿಸಲ್ಲ. ಒಂದು ಕಾಲದಲ್ಲಿ ಜನಾರ್ದನ ರೆಡ್ಡಿ ಅವರು ಬರ್ತಾರೆ ಎಂದರೆ ದೆಹಲಿ ಹಾಗೂ ರಾಜ್ಯ ನಾಯಕರು ಕಾದು ಸ್ವಾಗತ ಕೋರುತ್ತಿದ್ದರು. ಈಗ ಅವರ ಕೆಲಸ ಮುಗಿದಿದೆ. ಜನಾರ್ದನ ರೆಡ್ಡಿ ಅವರನ್ನು ಹೇಗೆಲ್ಲಾ ಉಪಯೋಗಿಸಿಕೊಳ್ಳಬೇಕೋ ಹಾಗೆ ಉಪಯೋಗಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಬರಲು ರೆಡ್ಡಿ ಅವರು ಕಾರಣರಾಗಿದ್ದರು ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾವು ಐದು ಜನ ಶಾಸಕರನ್ನು ಬಳಕೆ ಮಾಡಿಕೊಂಡು ಅಧಿಕಾರವನ್ನು ಪಡೆಯಿತು. ಆಮೇಲೆ ಕೈ ಬಿಟ್ಟಿತು. ಆ ನಂತರ ಯಡಿಯೂರಪ್ಪ ಅವರನ್ನು ಪಕ್ಷ ಬಳಸಿಕೊಂಡು ಕೈ ಬಿಟ್ಟರು. ಅವರು ಹೋರಾಟ ಮಾಡಿದ್ದವರು. ಪಕ್ಷಕ್ಕಾಗಿ ದುಡಿದವರು. ಅವರನ್ನೂ ಬಿಜೆಪಿ ಕೈ ಬಿಟ್ಟಿತು. ಈಚೆಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು 16 ಜನ ಶಾಸಕರನ್ನು ಖರೀದಿ ಮಾಡಿತು. ಸರ್ಕಾರ ಅಧಿಕಾರಕ್ಕೆ ತಂದ ಬಳಿಕ ಹೆಚ್. ವಿಶ್ವನಾಥ, ಆರ್ ಶಂಕರ್, ನಾಗೇಶ, ಪ್ರತಾಪಗೌಡ ಪಾಟೀಲ್ ಅವರನ್ನು ಉಪಯೋಗಿಸಿಕೊಂಡು ಕೈ ಬಿಟ್ಟಿದೆ. ಬಿಜೆಪಿ ಪಕ್ಷ ಕಟ್ಟಿದ ಎಲ್.ಕೆ. ಅಡ್ವಾನಿ ಅವರು ಈಗ ಏಲ್ಲಿದ್ದಾರೆ ? ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದಕ್ಕೆ ಬಿಜೆಪಿಯವರು ಒಂದು ರೀತಿ ಅವಕಾಶವಾದಿಗಳು ಎಂದರು.

ಬಿಜೆಪಿಯವರು ಯೂಸ್ ಎಂಡ್ ಥ್ರೋ ಸಂಸ್ಕೃತಿ ನಮಗೆ ಮೊದಲೇ ಗೊತ್ತಾಯಿತು. ನಮ್ಮನ್ನು ಅವರು ಅನರ್ಹ ಮಾಡಿದರು. ಆದರೆ ಜನಾರ್ದನ ರೆಡ್ಡಿ ಅವರಿಗೆ ಈಗ ಗೊತ್ತಾಗಿದೆ. ಬಿಜೆಪಿಯಲ್ಲಿ ಕೆಲಸ ಮುಗಿಯವ ವರೆಗೂ ಮಾತ್ರ ಮಾಮಾ ಎನ್ನುವಂತ ಸಂಸ್ಕೃತಿಯಿದೆ ಎಂದರಲ್ಲದೇ, ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿಯಲ್ಲಿ ಅನ್ಯಾಯವಾಗಿದೆ. ಹಾಗಾಗಿ ಹೊಸ ಪಕ್ಷ ಕಟ್ಟಿದ್ದಾರೆ ಎಂದು ನನಗೆ ಅನಿಸುತ್ತದೆ. ಹೊಸ ಪಕ್ಷ ಈಗತಾನೇ ಉದಯವಾಗಿದೆ. ಅವರ ಪ್ರಚಾರ ವೈಖರಿ ಮೇಲೆ ಮುಂದೆ ಎಲ್ಲ ನಿರ್ಧಾರವಾಗುತ್ತದೆ. ಆದರೆ ರೆಡ್ಡಿ ಅವರು ಬಿಜೆಪಿಗೆ ಒಂದು ಪಾಠವನ್ನಂತೂ ಕಲಿಸುತ್ತಾರೆ ಎಂದುಕೊಂಡಿದ್ದೇನೆ ಎಂದರು.

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರ ಸ್ಪರ್ಧೆ ನಮಗೆ ಏನೂ ಸಮಸ್ಯೆ ಆಗಲ್ಲ. ಜಿಲ್ಲೆಯ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಗೆಲ್ಲಲಿದ್ದಾರೆ. ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರು ಹಿಂದೆ ಸ್ಪರ್ಧಿಸಿದ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಹೇಳಿದ್ದಾರೆ. ಈಗಾಗಲೇ ಅವರು ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಎನ್ನುವುದು ನಿರ್ಧಾರ ಮಾಡಲಿದೆ. 2023ರ ಚುನಾವಣೆಯಲ್ಲಿ ಯಾರ ಉಸಿರು ನಿಲ್ಲುತ್ತೆ ಎನ್ನುವುದು ಜನ ನಿರ್ಧಾರ ಮಾಡ್ತಾರೆ ಎಂದು ಬಿಎಸ್‌ವೈ ಹೇಳಿಕೆಗೆ ಟಾಂಕ್ ನೀಡಿದರು.

ಕೊಪ್ಪಳ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳ ಚುನಾವಣೆಯ ಆಕಾಂಕ್ಷಿ ಅಭ್ಯರ್ಥಿಗಳ ಸಭೆ ಕರೆದಿದ್ದೇವೆ. ಎಲ್ಲ ಬ್ಲಾಕ್ ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ. ಜಿಲ್ಲಾ ವೀಕ್ಷಕರಾಗಿ ಶರಣಪ್ಪ ಸುಣಗಾರ ಆಗಮಿಸಲಿದ್ದು, ಅವರು ಆಕಾಂಕ್ಷಿತರ ಹಾಗೂ ಮುಖಂಡರ ಅಭಿಪ್ರಾಯ ಪಡೆಯಲಿದ್ದಾರೆ. ಜಿಲ್ಲೆಯ ಆಕಾಂಕ್ಷಿಗಳಿಗೆ ಸಭೆಯಲ್ಲಿ ಮಾತನಾಡಲು ಅವಕಾಶವಿದೆ. ಕೆಪಿಸಿಸಿ ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು, ಜಿಲ್ಲೆಯ ಪದಾಧಿಕಾರಿಗಳಿಗೆ ಈ ಸಭೆಗೆ ಪಾಲ್ಗೊಳ್ಳುವಲ್ಲಿ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.