ರೌಡಿಸೀಟರ್‌ಗಳ ಮನಪರಿವರ್ತನೆಗಾಗಿ ಠಾಣೆಯಲ್ಲಿ ಪರೇಡ್ :ಎಸ್ಪಿ ಟಿ.ಶ್ರೀಧರ


Team Udayavani, Dec 21, 2021, 6:33 PM IST

NK STRINGERS

ಗಂಗಾವತಿ: ಕಾರಣಾಂತರಗಳಿಂದ ಮತ್ತು ಪರಿಸ್ಥಿತಿಯ ಒತ್ತಡ ಹಿನ್ನೆಲೆಯಲ್ಲಿ ಕೆಲ ವ್ಯಕ್ತಿಗಳು ರೌಡಿಸೀಟರ್ ಆಗಿರುತ್ತಾರೆ ಅಥವಾ ಅಪರಾಧವೆಸಗಿರುತ್ತಾರೆ. ಇವರನ್ನು ಪರಿವರ್ತನೆ ಮಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸದಾ ಇವರ ಮೇಲೆ ನಿಗಾ ಇಟ್ಟು ಪ್ರತಿ ಮೂರು ತಿಂಗಳಿಗೊಮ್ಮೆ ಇಲಾಖೆಯ ಮೇಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಲಾಗುತ್ತದೆ.

ಅಪರಾಧಿಗಳಲ್ಲಿ ಮನಪರಿವರ್ತನೆಯಾಗಿದ್ದರೆ ಇಲಾಖೆಯ ನಿಯಮಗಳಂತೆ ಅವರನ್ನು ರೌಡಿ ಸೀಟರ್ ಅಥವಾ ಎಂಒಬಿ ಪಟ್ಟಿಯಿಂದ ಕೈ ಬಿಡಲಾಗುತ್ತದೆ ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಹೇಳಿದರು.
ಅವರು ನಗರಠಾಣೆ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ದಾಖಲೆಯಲ್ಲಿರುವ ರೌಡಿ ಸೀಟರ್ ಮತ್ತು ಹಳೆಯ ಅಪರಾಧಿಗಳ (ಎಂಒಬಿ) ಪರೇಡ್ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಸೈನಿಕರ ತ್ಯಾಗ ಸ್ಮರಣೀಯ: ಕುಂಟೋಜಿಶ್ರೀ

ಈ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ೧೪೦೦ ರೌಡಿಸೀಟರ್ ಮತ್ತು ಹಳೆಯ ಅಪರಾಧಿಗಳಿದ್ದರು. ಅವರ ನಡತೆ ಹಾಗೂ ಸದ್ಯದ ಜೀವನ ಶೈಲಿಯನ್ನು ಗಮನಿಸಿ ಸುಮಾರು ೩೫೦ ಜನರನ್ನು ರೌಡಿಸೀಟರ್ ಮತ್ತು ಹಳೆಯ ಅಪರಾಧಿಗಳ ಪಟ್ಟಿಯಿಂದ ಕೈ ಬಿಡಲಾಗಿದೆ. ಕೆಲವರು ಸನ್ನಿವೇಶ ಒತ್ತಡಕ್ಕೆ ಮಣಿದು ರೌಡಿಸೀಟರ್ ಅಥವಾ ಅಪರಾಧಿಗಳಾಗಿರುತ್ತಾರೆ.

ಪೊಲೀಸ್ ಇಲಾಖೆ ನಿರಂತರವಾಗಿ ಇವರ ಮೇಲೆ ಮತ್ತು ಇವರ ವಿರುದ್ಧ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಕೇಸ್‌ಗಳ ವಿಚಾರಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪಟ್ಟಿಯಿಂದ ತೆಗೆಯಲಾಗುತ್ತದೆ. ಇನ್ನೂ ಕೆಲವರು ಪದೇ ಪದೇ ಅಪರಾಧವೆಸಗುತ್ತಿರುವ ಮಾಹಿತಿಯನ್ನು ಇಲಾಖೆ ಪಡೆದು ಅವರ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳಂತೆ ಕೇಸ್ ಹಾಕಲಾಗುತ್ತದೆ.

ಸದ್ಯ ಗಂಗಾವತಿ ನಗರ ಠಾಣೆಯಲ್ಲಿ ೨೫೨ ಮತ್ತು ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ೭೫ ರೌಡಿ ಸೀಟರ್‌ಗಳಿದ್ದು ಎಲ್ಲರ ಪರಾಮರ್ಸೆ ಮಾಡಲಾಗುತ್ತಿದೆ. ಇವರಲ್ಲಿ ಕೆಲವರ ಮೇಲೆ ಒಂದು ಕೇಸ್ ದಾಖಲಾಗಿರುತ್ತದೆ ನಂತರ ಇವರು ಯಾವುದೇ ಗಲಾಟೆ ಸೇರಿ ಅಹಿತಕರ ಘಟನೆಗಳಲ್ಲಿ ಪಾಲ್ಗೊಂಡಿರುವುದಿಲ್ಲ ಎಂದು ತನಿಖಾಧಿಕಾರಿಗಳು ಗಮನಿಸಿ ವರದಿ ನೀಡಿದರೆ ಅವರನ್ನು ಪಟ್ಟಿಯಿಂದ ಕೈ ಬಿಡಲು ಅವಕಾಶವಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಪೊಲೀಸ್ ಅಧಿಕಾರಿಗಳಾದ ವೆಂಕಟಸ್ವಾಮಿ, ಉದಯರವಿ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.