ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿ ಹೋರಾಟ ನಿರಂತರ
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಮಾವೇಶಕ್ಕೆ ಚಾಲನೆ ರ್ಯಾಲಿಯಲ್ಲಿ ಪ್ಲೇ ಕಾರ್ಡ್ ತೋರಿಸದಂತೆ ಪೊಲೀಸರ ಆಕ್ಷೇಪ
Team Udayavani, Jul 26, 2022, 5:51 PM IST
ಗಂಗಾವತಿ: ವಿಶ್ವದ ಇತಿಹಾಸ ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್ ಸರಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್ ಕಟ್ಟೆ ಹೇಳಿದರು.
ಅವರು ಕರ್ನೂಲ್ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದ ಇತಿಹಾಸ ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014ರಿಂದ ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.
ರಾಜ್ಯ ಮುಖಂಡ ಸಫìರಾಜ್ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿ ಗಳನ್ನು ಬಂಧಿಸಬೇಕು. ಎಲ್ಲ ಸಮಸ್ಯೆಗಳ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್ ಕುಂಬ್ರಾ, ಚಾಂದ ಸಲ್ಮಾನ್, ನಾಸೀರಾ, ಅತೀಕುರ್ ರಹೆಮಾನ್ ಸೇರಿ ಅನೇಕರಿದ್ದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ 2022-23ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ್ಯಾಲಿ ನಡೆಸುವ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಭ್ರಷ್ಟಾಚಾರ ನಡೆದಿರುವುದು, ಪಿಎಸ್ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ. ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.