![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Oct 20, 2022, 3:06 PM IST
ದೋಟಿಹಾಳ: ಜುಮಲಾಪುರ ಗ್ರಾ.ಪಂ. ವ್ಯಾಪ್ತಿಯ ಮುದ್ದಲಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಆಕಸ್ಮಿಕವಾಗಿ ಭೇಟಿ ನೀಡಿದ ಕುಷ್ಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ್ ಅವರು ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟನ್ನು ಪರೀಕ್ಷಿಸಿ ಮಕ್ಕಳೊಂದಿಗೆ ಕುಳಿತು ತಾವು ಬಿಸಿ ಊಟದ ರುಚಿಯನ್ನು ಸವಿದರು.
ನಂತರ ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಲಾ ಮುಖ್ಯ ಗುರುಗಳಿಂದ ಹಾಗೂ ಬಿಸಿಯೂಟದ ಅಡುಗೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
ಇದೆ ವೇಳೆ ಶಾಲಾ ಮುಖ್ಯೋಪಾಧ್ಯಾಯ ರುದ್ರಪ್ಪ ಮಾತನಾಡಿ, ನಮ್ಮ ಶಾಲೆಗೆ ನೀರಿನ ವ್ಯವಸ್ಥೆ ಇಲ್ಲದ ಕಾರಣ ಕೂಡಲೇ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಉಪಸ್ಥಿತರಿದ್ದ ಜುಮಾಪೂರ ಪಿಡಿಓ ದೊಡ್ಡಪ್ಪ ನಾಯ್ಕ ಅವರಿಗೆ ಕೂಡಲೇ ಈ ಶಾಲೆಯಲ್ಲಿರುವ ಕೈ ಬೋರ್ವೆಲ್ ಮೋಟಾರ್ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ಐ.ಇ.ಸಿ. ಸಂಯೋಜಕ ದೇವರಾಜ ಪತ್ತಾರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ದೊಡ್ಡಪ್ಪ ನಾಯ್ಕ, ಗ್ರಾ.ಪಂ. ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ತಾಂತ್ರಿಕ ಸಹಾಯಕ ಪ್ರಕಾಶ ಸಜ್ಜನ್, ಬಿ.ಎಫ್.ಟಿ. ಸಿದ್ದಯ್ಯ, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಇದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.