ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ?

Team Udayavani, Apr 1, 2023, 5:09 PM IST

ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ದೋಟಿಹಾಳ: ಹೈದ್ರಾಬಾದ್‌-ಕರ್ನಾಟಕ ಯುವಶಕ್ತಿ ಸಂಘದವರು ಗ್ರಾಮದ ಮೂರು ಪ್ರಮುಖ ಬೇಡಿಕೆ ಈಡೇರಿಗಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮಾಡಿದರು. ಈ ವೇಳೆ ತಾತ್ಕಾಲಿಕವಾಗಿ ರಸ್ತೆ ಮಧ್ಯ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೋರಾಟಗಾರರಿಗೆ ಲಿಖೀತ ಭರವಸೆ ನೀಡಿದ ಕಾರಣ ಇಂದು ರಸ್ತೆಯ ಮಧ್ಯೆ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿದರು.

ಕಳೆದ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಕೆಲಸ ಇಂದು ಒಂದು ಹಂತಕ್ಕೆ ಬಂದಿದೆ. ಆದರೆ ರಸ್ತೆ ಅಗಲೀಕರಣದ ನಿಮಯ ಪಾಲಿಸದೇ ಮತ್ತು ದೋಟಿಹಾಳ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ಯಾವುದೇ ಕಾರಣಕ್ಕೂ ಪೈಪ್‌ ಹಾಕಲು ನಮ್ಮ ಒಪ್ಪಿಗೆ ಇಲ್ಲ. ರಸ್ತೆ ಅಗಲೀಕರಣ ಮಾಡಿ ಎರಡು ಕಡೆ ಚರಂಡಿ ನಿರ್ಮಿಸಿ ಎಂದು ಜಿಲ್ಲಾಧಿಕಾರಿ, ಸಿಇಒ, ಲೋಕೋಪಯೋಗಿ ಇಲಾಖೆಗೆ 2018ರಲ್ಲಿ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿರಲಿಲ್ಲ.

ಕಾಮಗಾರಿ ಸ್ಥಳಕ್ಕೆ ದೋಟಿಹಾಳ ಗ್ರಾಮದ ಮಹಿಳೆಯರು ಆಗಮಿಸಿ ಯಾವುದೇ ಕಾರಣಕ್ಕೂ ರಸ್ತೆ ಮಧ್ಯೆ ಪೈಪ್‌ ಹಾಕಲು ಬಿಡುವುದಿಲ್ಲ. ರಸ್ತೆ ಪಕ್ಕದಲ್ಲಿ ಚರಂಡಿ ಮಾಡಿ. ರಸ್ತೆ ಮಧ್ಯೆ ಪೈಪ್‌ ಹಾಕಿದರೆ ತೊಂದರೆಯಾಗುತ್ತದೆ. ಇದರ ಬಗ್ಗೆ ಈಗಾಗಲೇ ತಹಶೀಲ್ದಾರ್‌ ಅವರಿಗೆ ಮನವಿ ನೀಡಲಾಗಿದೆ. ಈ ವೇಳೆ ಪರಿಸ್ಥಿತಿ ಕೈಮೀರುವ ಲಕ್ಷಣಗಳು ತಿಳಿದ ಪಿಎಸ್‌ಐ ಮೌನೇಶ ರಾಠೊಡ್‌ ಅವರು ಇದು ಸರಕಾರದ ಕೆಲಸವಾಗಿದೆ.

ಸರಕಾರದ ಕೆಲಸಕ್ಕೆ ತೊಂದರೆ ಮಾಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಮಹಿಳೆಯರು ಜೆಸಿಬಿ ಹತ್ತಿರ ಹೋಗಿ ನಿಂತರು. ಪರಿಸ್ಥಿತಿ ಕೈಮೀರುವ ಲಕ್ಷಣ ತಿಳಿದು ಲಾಠಿ ಬೀಸಿ ಕೆಲವರನ್ನು ವಶಕ್ಕೆ ಪಡೆದುಕೊಂಡರು.

ಮಹಿಳೆಯರ ಆರೋಪ: ರಸ್ತೆ ಕಾಮಗಾರಿ ನಿಯಮ ಉಲ್ಲಂಘಿಸಿ ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕುತ್ತಿರುವುದನ್ನು ಪಶ್ನಿಸಿದರೆ ಪೊಲೀಸರು ಗ್ರಾಮಸ್ಥರನ್ನೇ ವಶಕ್ಕೆ ಪಡೆಯುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ ? ಎಂದು ಅಧಿಕಾರಿಗಳಿಗೆ ಮಹಿಳೆಯರು ಪ್ರಶ್ನೆ ಮಾಡಿದರು.

ಇದಕ್ಕೆ ಬೆಲೆ ಕೊಡದ ಅಧಿಕಾರಿಗಳು ರಸ್ತೆಯ ಮಧ್ಯೆ ಪೈಪ್‌ ಹಾಕಿ ಹೊರಟು ಹೋದ ಅಧಿಕಾರಿಗಳು. ಇದರ ಬಗ್ಗೆ ವಿಚಾರಿಸಲು ತಹಶೀಲ್ದಾರ್‌ ರಾಘವೇಂದ್ರರಾವ್‌ ಕುಲಕರ್ಣಿ ಅವರನ್ನು ಸಂಪರ್ಕಿಸಿದರು ಅವರು ಕರೆ ಸ್ವೀಕರಿಸುತ್ತಿಲ್ಲ.ಸರಕಾರದ ನಿಯಮದ ಪ್ರಕಾರ ರಸ್ತೆ ಅಗಲೀಕರಣ ಮಾಡಿ. ಎರಡು ಕಡೇ ಚರಂಡಿ ನಿರ್ಮಿಸಬೇಕಾದ ಅಧಿಕಾರಿಗಳು ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕಿದ್ದಾರೆ. ನಮ್ಮ ಸಮಸ್ಯೆ ಕೇಳುವರು ಯಾರು ಎಂದು ದೋಟಿಹಾಳ ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡರು.

ತಹಶೀಲ್ದಾರ್‌ ಅವರ ಆದೇಶದ ಮೇರೆಗೆ ಕೆಲಸ ನೀಡುವ ಸ್ಥಳಕ್ಕೆ ಬಂದೋಬಸ್ತ್ ನೀಡಿದ್ದೇವೆ. ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸಿದ ಕಾರಣ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದೇವೆ.
ಮೌನೇಶ ರಾಠೊಡ, ಪಿಎಸ್‌ಐ ಕುಷ್ಟಗಿ

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ಕೃಷಿ ಸೇವಾ ಸಹಕಾರಿ ಸಂಘಗಳಿಗೆ ಮುಚ್ಚುವ ಭೀತಿ?

ಗಂಗಾವತಿ: ಕೃಷಿ ಸೇವಾ ಸಹಕಾರಿ ಸಂಘಗಳಿಗೆ ಮುಚ್ಚುವ ಭೀತಿ?

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Karadi sanganna

Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.