5 ಗಂಟೆಯೊಳಗೆ ಚಿನ್ನಾಭರಣ ಕದ್ದ ಕಳ್ಳರನ್ನು ಬಂಧಿಸಿದ ಪೊಲೀಸರು
Team Udayavani, Jun 16, 2023, 7:55 PM IST
ಗಂಗಾವತಿ: ನಗರದ ಸತ್ಯನಾರಾಯಣ ಪೇಟೆಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ನಗರ ಠಾಣೆಯ ಪೊಲೀಸರು 5 ಗಂಟೆಯೊಳಗೆ ಭೇದಿಸಿ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.
ನಗರದ ಸತ್ಯನಾರಾಯಣ ಪೇಟೆಯಲ್ಲಿರುವ ವಹೇದ್ ಶೇಖ್ ಎನ್ನುವರು ನಿವಾಸದಲ್ಲಿ ಸುಮಾರು 5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನವನ್ನು ಕಳ್ಳರು ಕದ್ದು ಪರಾರಿಯಾಗಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ನಗರ ಪೊಲೀಸರು 5 ಗಂಟೆಯೊಳಗೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವುದಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಕಳ್ಳರನ್ನು ಬಂಧಿಸಲು ಎಸ್ಪಿ ಯಶೋಧ ಒಂಟಿಗೋಡು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ ಹಾಗೂ ಪಿಐ ಅಡಿವೇಶ ಗುದಿಗೊಪ್ಪ ನೇತೃತತ್ವದಲ್ಲಿ ತಂಡ ರಚಿಸಿಕೊಂಡು ತನಿಖೆಯ ಮೂಲಕ ಇಬ್ಬರು ಚಿನ್ನ ಕದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳತನ ಆರೋಪದಲ್ಲಿ ಫರಹಬಾನು ಹುಸೇನ್ ಸಾಬ ಇಸ್ಲಾಂಪೂರು ಮತ್ತು ಟಿಪ್ಪುಸುಲ್ತಾನ ಮೌಲಾಸಾಬ ಮಾನ್ವಿ ಎಂಬ ಆರೋಪಿಗಳನ್ನು ಬಂಧಿಸಿ ಅವರಿಂದ ಚಿನ್ನಾಭರಣ,ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ,
ಪೊಲೀಸ್ ಸಿಬಂದಿಗಳಾದ ವಿಶ್ವನಾಥ, ಚಿರಂಜೀವಿ, ಮರಿಶಾಂತಗೌಡ,ಸುಭಾಷ್, ರಾಘವೇಂದ್ರ, ಮೈಲಾರಪ್ಪ,ಪರಸಪ್ಪ, ಹಾಗೂ ವಾಹನ ಚಾಲಕ ಶಿವಕುಮಾರ್ ತನಿಖಾ ತಂಡದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.