ಸಸ್ಯಾಭಿವೃದ್ಧಿ ಕ್ಷೇತ್ರಕ್ಕೂ ನೀರಿಲ್ಲ

ಮಾವಿನ ಗಿಡಗಳಿಗೆ 15 ದಿನಕ್ಕೊಮ್ಮೆ ಟ್ಯಾಂಕರ್‌ನಿಂದ ನೀರು ಪೂರೈಕೆ

Team Udayavani, May 18, 2019, 2:11 PM IST

kopala-tdy-2..

ಕುಷ್ಟಗಿ: ನೀರಲೂಟಿಯ ತೋಟಗಾರಿಕೆ ಇಲಾಖೆಯ ಫಾರ್ಮ್ನಲ್ಲಿ ಒಣಗುತ್ತಿರುವ ಮಾವಿನ ಗಿಡಗಳು.

ಕುಷ್ಟಗಿ: ಭೀಕರ ಬರಗಾಲದಿಂದಾಗಿ ಅಂತರ್ಜಲ ಕುಸಿತಗೊಂಡ ಪರಿಣಾಮ ತಾಲೂಕಿನ ನೀರಲೂಟಿಯ ಸಸ್ಯಾಭಿವೃದ್ಧಿ ಕ್ಷೇತ್ರ ಹಾಗೂ ವಿವಿಧ ಜಾತಿಯ ಮುನ್ನೂರಕ್ಕೂ ಹೆಚ್ಚು ಮಾವಿನ ಗಿಡಗಳಿರುವ ತೋಟಗಾರಿಕಾ ಫಾರ್ಮ್ನ್ನು ಉಳಿಸಿಕೊಳ್ಳುವುದು ತೋಟಗಾರಿಕೆ ಇಲಾಖೆಗೆ ಸವಾಲಾಗಿದೆ.

ನೀರಲೂಟಿ ವ್ಯಾಪ್ತಿಯ ತೋಟಗಾರಿಕೆಯ ಇಲಾಖೆಯ 40 ಎಕರೆ ಫಾರ್ಮ್ನಲ್ಲಿ ವಿವಿಧ ಜಾತಿಯ ಮಾವಿನ ಗಿಡಗಳಿವೆ. ಸದ್ಯದ ಬೇಸಿಗೆಯಲ್ಲಿ ಈ ಗಿಡಗಳಿಗೆ ನೀರುಣಿಸುವುದು ಕಷ್ಟಕರವಾಗಿದ್ದು, ತೋಟಗಾರಿಕೆ ಇಲಾಖೆ ಟ್ಯಾಂಕರ್‌ ಮೂಲಕ ನೀರುಣಿಸಿ ಗಿಡಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದೆ. ಮಧ್ಯಾಹ್ನ ನೀರು ಆವಿಯಾಗುತ್ತದೆ ಎಂದು ರಾತ್ರಿ ವೇಳೆ ತಂಪು ವಾತಾವರಣದಲ್ಲಿ ಟ್ಯಾಂಕರ್‌ ಮೂಲಕ ನೀರುಣಿಸಲಾಗುತ್ತಿದೆ. ತೋಟದ ಐದು ಕಡೆ ನಿರ್ಮಿಸಿರುವ ತೊಟ್ಟಿಗೆ ಟ್ಯಾಂಕರ್‌ ಮೂಲಕ ನೀರು ತಂದು ಹಾಕಲಾಗುತ್ತದೆ. ಸಣ್ಣ ಗಿಡಗಳಿಗೆ ಸಿಬ್ಬಂದಿ ನೀರು ಹೊತ್ತು ಹಾಕಿದರೆ, ದೊಡ್ಡ ಗಿಡಗಳಿಗೆ ಟ್ಯಾಂಕರ್‌ನಿಂದ ನೀರುಣಿಸುವ ಕೆಲಸ ಕಳೆದ ಅಕ್ಟೋಬರ್‌ನಿಂದಲೇ ನಡೆದಿದೆ. ತಾಪಮಾನ ಹೆಚ್ಚಾಗಿರುವ ಕಾರಣ 30ಕ್ಕೂ ಅಧಿಕ ಮಾವಿನ ಗಿಡಗಳು ಒಣಗಿವೆ. ವಾರದಲ್ಲಿ ಮಳೆಯಾಗದಿದ್ದರೆ ಇನ್ನೂ 10ಕ್ಕೂ ಅಧಿಕ ಗಿಡಗಳು ಒಣಗುವ ಸಾಧ್ಯತೆಯಿದೆ. ಬಹುತೇಕ ಮಾವಿನ ಗಿಡಗಳ ಎಲೆಗಳು ಬಾಡಿವೆ.

ಆದಾಯ ಶೂನ್ಯ: ಭೂಮಿಯ ತೇವಾಂಶ ಹಿಡಿದಿಡಲು ಬಯೋಮಿಕ್ಸ್‌ ಗಿಡಗಳಿಗೂ ಉಪಚರಿಸಲಾಗಿದೆ. ಹೂವು ಉದುರುದಂತೆ ಸಕಾಲಿಕವಾಗಿ ಅಗತ್ಯ ಔಷಧ ಸಿಂಪರಣೆ ಕ್ರಮ ಕೈಗೊಳ್ಳಲಾಗಿದ್ದರೂ ಹೂವು ಹೆಚ್ಚು ಪ್ರಮಾಣದಲ್ಲಿ ನಿಂತಿಲ್ಲ. ಮಿಡಿಗಾಯಿ, ಕಾಯಿ ಬಲಿಯುವ ಹಂತದಲ್ಲಿ ತೇವಾಂಶ ಸಾಕಾಗದೇ ಗಿಡದಲ್ಲಿ ಒಣಗಿದ್ದು, ಕಾಯಿ ಬಲಿಯುವ ಹೊತ್ತಿಗೆ ಉದುರಿ ಬಿದ್ದಿವೆ. ಲಕ್ಷಾಂತರ ಆದಾಯದ ನೀರಿಕ್ಷೆ ಈ ಹಂಗಾಮಿನಲ್ಲಿ ಹುಸಿಯಾಗಿದೆ. 2016-17ರಲ್ಲಿ ಮಾವು ಇಳುವರಿ 2.47 ಲಕ್ಷ ರೂ. ಟೆಂಡರ್‌ ಆಗಿತ್ತು. 2017-18ರಲ್ಲಿ 1.47 ಲಕ್ಷ ರೂ. ಪ್ರಸಕ್ತ ವರ್ಷದಲ್ಲಿ ಆದಾಯ ಶೂನ್ಯವಾಗಿದೆ.

ಈ ತೋಟಗಾರಿಕೆ ಫಾರ್ಮ್ ತಾಲೂಕಿನ ಹುಲಿಯಾಪೂರ ಕೆರೆಗೆ ಹೊಂದಿಕೊಂಡಿದ್ದು, ಆದರೆ ಕೆರೆಯಲ್ಲಿರುವ ಲವಣಾಂಶದ ನೀರು ತೋಟಗಾರಿಕಾ ಬೆಳೆಗೆ ಯೋಗ್ಯವಾಗಿಲ್ಲ. ಹೀಗಾಗಿ ಅಂತರ್ಜಲವನ್ನು ಅವಲಂಭಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಇಲ್ಲಿಯವರೆಗೂ ಹಂತ ಹಂತವಾಗಿ ಕೊರೆಯಿಸಿದ 12 ಕೊಳವೆಬಾವಿಗಳು ವಿಫಲವಾಗಿವೆ. ಅದರಲ್ಲಿ ಕೇವಲ ಒಂದು ಕೊಳವೆಬಾವಿಯಲ್ಲಿ ಒಂದಿಂಚು ನೀರು ಲಭ್ಯವಿದ್ದು, ಈ ನೀರು ಸಸ್ಯಾಭಿವೃದ್ಧಿಗೆ ಸಾಲುವುದಿಲ್ಲ.

•ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.