Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ
Team Udayavani, Sep 30, 2024, 2:24 PM IST
ಕೊಪ್ಪಳ: ಸಾರಿಗೆ ಸಂಸ್ಥೆಗಳಿಗೆ ಹಣ ಬಾಕಿ ವಿಚಾರದಲ್ಲಿ ಬಿಜೆಪಿ ಟ್ವೀಟ್ ಮಾಡಿದ ವಿಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಸವಾಲು ಹಾಕಿದ್ದಾರೆ.
ಸಾರಿಗೆ ಸಂಸ್ಥೆಗಳಿಗೆ ಸರ್ಕಾರದಿಂದ 7625 ಕೋಟಿ ಹಣ ಬಾಕಿ ಬಗ್ಗೆ ಬಿಜೆಪಿ ಟ್ವೀಟ್ ಮಾಡಿತ್ತು. ಇದಕ್ಕೆ ಉತ್ತರಿಸಿದ ಸಚಿವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಅವರಿಗೆ ಏನು ತಿಳುವಳಿಕೆಯಿಲ್ಲ. ಹಾಗಾಗಿ ಅವರು ಟ್ವೀಟ್ ಮಾಡಿದ್ದಾರೆ. 2023 ರಲ್ಲಿ ನಮಗೆ ಅಧಿಕಾರ ಕೊಟ್ಟು 5900 ಕೋಟಿ ಸಾಲ ಇಟ್ಟು ಹೋಗಿದ್ದರು. ಬಿಎಂಟಿಸಿ ಹೊರತುಪಡಿಸಿ ಒಂದು ಬಸ್ ಕೂಡ ಖರೀದಿ ಮಾಡಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ 6300 ಬಸ್ ಖರೀದಿಸುವ ಪ್ರಕ್ರಿಯೆ ಆರಂಭವಾಗಿದೆ. 9000 ನೇಮಕಾತಿ ನಡೆಯುತ್ತಿದೆ. ಬಿಜೆಪಿಯಿಂದ ಹೇಳಿಸಿಕೊಳ್ಳು ಅವಶ್ಯಕತೆ ನಮಗೆ ಇಲ್ಲ ಎಂದರು.
ನಮ್ಮ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿಯವರಿಗೆ ಅವರು ನನ್ನ ಎದುರಿಗೆ ಬಂದು ಮಾತನಾಡಲು ಹೇಳಿ. ಬರಿ ಟ್ವೀಟ್ ಮಾಡುವುದನ್ನು ಬಿಟ್ಟು ಎದುರು ಬಂದು ಚರ್ಚೆ ಮಾಡಲಿ. ಇದು ನನ್ನ ನೇರ ಸವಾಲು. ಸದನದಲ್ಲಿಯೇ ಚರ್ಚೆಗೆ ಬರಲಿ. ಈಗಾಗಲೇ ಹಲವು ಬಾರಿ ಉತ್ತರ ಕೊಟ್ಟಿರುವೆ. ಸವಾಲಿಗೆ ಬಂದರೆ ಸದನದಲ್ಲೇ ಉತ್ತರ ಕೊಡುವೆ. ಶಕ್ತಿ ಯೋಜನೆಯಿಂದ ನಮ್ಮ ಇಲಾಖೆ ಆದಾಯ ಹೆಚ್ಚಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಕಾರ್ಮಿಕರಿಗೆ ಗ್ರ್ಯಾಚುಟಿ ಹಣ ಬಾಕಿ ವಿಚಾರಕ್ಕೆ ಮಾತನಾಡಿದ ಅವರು, ಕಾರ್ಮಿಕರಿಗೆ ನೀಡಬೇಕಾಗಿದ್ದ ಹಣ ಬಾಕಿಯಿದೆ. ಅದನ್ನು ಬಿಟ್ಟು ಹೋಗಿದ್ದು ಬಿಜೆಪಿಯವರು. ಆರೋಪ ಮಾಡಿದವರೇ ಆರೋಪಿಗಳು. ನಮಗೆ 1600 ಕೋಟಿ ರೂ. ಶಕ್ತಿ ಯೋಜನೆಯಡಿ ಹಣ ಬರಬೇಕು. ಸಿಎಂ ಹಣ ಕೊಡುವುದಾಗಿ ಹೇಳಿದ್ದಾರೆ ಎಂದರು.
ಸಾರಿಗೆ ನೌಕರರ ಪ್ರತಿಭಟನೆ ವಿಚಾರಕ್ಕೆ ಮಾತನಾಡಿದ ಅವರು, ಯೂನಿಯನ್ ಲೀಡರ್ ಜೊತೆ ಮಾತನಾಡಿದ್ದೇನೆ. ಅವರಿಗೆ ಕೊಡುವುದು ಕೊಡಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Mangaluru: ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಸಮ್ಮಾನ
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.