Tungabhadra; ಕ್ರಸ್ಟ್ ಗೇಟ್ ತುಂಡಾಗಲು ಆಡಳಿತದ ನಿರ್ಲಕ್ಷ್ಯವೇ ಕಾರಣ: ಹಾಲಪ್ಪ ಆಚಾರ್
Team Udayavani, Aug 11, 2024, 11:28 AM IST
ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನ ಚೈನ್ ತುಂಡಾಗಿರುವುದಕ್ಕೆ ರಾಜ್ಯ ಸರಕಾರದ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಸರ್ಕಾರದ ವಿರುದ್ದ ಗುಡುಗಿದರು.
ತುಂಗಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ಗೇಟ್ ಸ್ಥಿತಿ ಅವಲೋಕಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 19 ನೇ ಗೇಟ್ ಕ್ರಸ್ಟ್ ಗೇಟ್ ಅಲ್ಲಿ ಉಳಿದಿಲ್ಲ. ಕಿತ್ತುಕೊಂಡು ಹೋಗಿದೆ. ಇದರಿಂದ ರೈತ ಸಮೂಹ ತುಂಬಾ ಆತಂಕದಲ್ಲಿದೆ. ಇದನ್ನು ನೋಡಿದರೆ ರಾಜ್ಯದಲ್ಲಿ ಆಡಳಿತ ಜವಾಬ್ದಾರಿ ಹಳಿ ತಪ್ಪಿದೆ ಎನಿಸುತ್ತದೆ.
ಜಲಾಶಯ ನಂಬಿ 10 ಲಕ್ಷ ಎಕರೆ ರೈತರು ಜೀವನ ನಡೆಸುತ್ತಿದ್ದಾರೆ. ಇದರಿಂದ ರೈತರಿಗೆ ಬಹಳ ಆಘಾತವಾಗಿದೆ. ರೈತರ ತಲೆ ಮೇಲೆ ರಾಜ್ಯ ಸರಕಾರ ಬಂಡೆ ಎಳೆದಿದೆ. ಪ್ರತಿ ವರ್ಷ ಗೇಟ್ ಮೆಂಟೇನನ್ಸ್ ಮಾಡುವ ಕೆಲಸ ಸರಕಾರದ ಜವಾಬ್ದಾರಿ. ಆದರೆ, ಅಧಿಕಾರಿಗಳು, ಆಡಳಿತ ವ್ಯವಸ್ಥೆಯ ಅಸಡ್ಡೆಯಿಂದ ಈ ಸಮಸ್ಯೆ ತಲೆದೂರಿದೆ ಎಂದರು.
ಕೂಡಲೇ ಇಡೀ ಸರಕಾರ ಸ್ಥಳದಲ್ಲಿ ಕುಳಿತು ಸಮಸ್ಯೆ ಬಗೆಹರಿಸಬೇಕು. ಗೇಟ್ ಅಳವಡಿಕೆಯ ಪ್ರಯತ್ನ ಮಾಡಬೇಕು. ಇದಲ್ಲದೇ ರೈತರಿಗೆ ನೀರು ಉಳಿಸುವ ಪ್ರಯತ್ನ ಮಾಡಬೇಕು. ಇಲ್ಲದಿದ್ದರೇ ಈ ಭಾಗದ ರೈತರೊಂದಿಗೆ ಸೇರಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವೈದ್ಯ ಬಸವರಾಜ ಕ್ಯಾವಟರ್, ಚಂದ್ರು ಹಲಗೇರಿ, ಗಣೇಶ ಹೊರತಟ್ನಾಳ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.