![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
ಕೊಪ್ಪಳ: ಕೋವಿಡ್ ಸೋಂಕಿನಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆ
Team Udayavani, May 29, 2020, 3:12 PM IST
![ಕೊಪ್ಪಳ: ಕೋವಿಡ್ ಸೋಂಕಿನಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆ](https://www.udayavani.com/wp-content/uploads/2020/05/kopp-620x348.jpg)
ಕೊಪ್ಪಳ: ಜಿಲ್ಲೆಯಲ್ಲಿ ಇಬ್ಬರು ಕೋವಿಡ್-19 ಸೋಂಕಿತರು ಗುಣಮುಖರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡಲಾಯಿತು.
ಪಿ-1174 ಯುವತಿ ಹಾಗೂ ಪಿ-1175 ಎಂಬ ಯುವಕನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ತಂಡವು ಚಪ್ಪಾಳೆ ತಟ್ಟುವ ಮೂಲಕ ಬಿಡುಗಡೆ ಮಾಡಿದರು.
ಪಿ-1174 ಮಹಿಳೆಯು ಕೊಪ್ಪಳ ತಾಲೂಕಿನ ನೆಲೋಗಿಪುರ ನಿವಾಸಿಯಾಗಿದ್ದು ಇವರು ಮಹಾರಾಷ್ಟ್ರದ ಮುಂಬೈನಿಂದ ಕೊಪ್ಪಳಕ್ಕೆ ಮೇ.15 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದರು. ಪಿ- 1175 ಎಂಬ ಯುವಕ ಕೊಪ್ಪಳ ನಗರದ ಪದಕಿ ಲೇಔಟ ನಿವಾಸಿಯಾಗಿದ್ದು ಈತನು ತಮಿಳುನಾಡಿನ ಚೆನ್ನೈನಿಂದ ಕೊಪ್ಪಳಕ್ಕೆ ಮೇ.15 ರಂದು ಆಗಮಿಸಿದ್ದರು.
ಇವರು ಜಿಲ್ಲೆಗೆ ಬಂದ ತಕ್ಷಣ ಜಿಲ್ಲಾಡಳಿತ ಗಂಟಲು ದ್ರವ ಪಡೆದು ಪ್ರಯೋಗಾಲಯ ಕ್ಕೆ ರವಾನೆ ಮಾಡಿತ್ತು. ಇವರ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ 14 ದಿನ ಚಿಕಿತ್ಸೆ ನೀಡಿದ್ದು ಅವರು ಗುಣಮುಖರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವರನ್ನು ಬಿಡುಗಡೆ ಮಾಡಿದೆ.
ಇವರು ಮನೆಯಲ್ಲಿ ಇನ್ನೂ 14 ದಿನ ಕ್ವಾರೆಂಟೈನ್ ನಡೆಸುವಂತೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 4 ಜನರಿಗೆ ಸೋಂಕು ದೃಢಪಟ್ಟಿತ್ತು. ಇಬ್ಬರು ಗುಣಮುಖರಾಗಿದ್ದು ಇನ್ನೂ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತದೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.