Vijayendra ಬಿಜೆಪಿ ಸಾರಥ್ಯ; ಕಾಂಗ್ರೆಸ್‌ಗೆ ಹೆಚ್ಚಿನ ಲೋಕಸಭಾ ಸ್ಥಾನ:ಸಚಿವ ತಂಗಡಗಿ

ಸರ್ವರ ಏಳ್ಗೆ ಬಯಸುವ ಲಿಂಗಾಯತ ಸಮುದಾಯದ ಆಶೀರ್ವಾದ ಕಾಂಗ್ರೆಸ್ ಮೇಲಿದೆ

Team Udayavani, Nov 13, 2023, 5:40 PM IST

1-saasda

ಗಂಗಾವತಿ: ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆಲ್ಲುವ ಬಿಜೆಪಿ ಹೈಕಮಾಂಡ್ ಉದ್ದೇಶ ಈಡೇರುವುದಿಲ್ಲ. ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಿದ ತತ್ ಕ್ಷಣವೇ ರಾಜ್ಯದ ವೀರಶೈವ ಲಿಂಗಾಯತರು ಬಿಜೆಪಿಗೆ ವಿಮುಖರಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ರಾಜ್ಯದ ಸಮಗ್ರ ಪ್ರಗತಿಗೆ ಕೈಜೋಡಿಸಿದ್ದು ಇದು ಲೋಕಸಭಾ ಚುನಾವಣೆಯವರೆಗೂ ಮುಂದುವರಿಯಲಿದೆ ಎಂದು ಕನ್ನಡ ಸಂಸ್ಕೃತಿ  ಸಚಿವ ಶಿವರಾಜ್ ಎಸ್.  ತಂಗಡಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆ ನಡೆದು 6 ತಿಂಗಳು ಕಳೆದರೂ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನನ್ನು ನೇಮಕ ಮಾಡದಷ್ಟು ರಾಜ್ಯ ಬಿಜೆಪಿ ಮೇಲೆ ಪ್ರಧಾನಮಂತ್ರಿ ಮತ್ತು ಗೃಹ ಸಚಿವರು ಹಾಗೂ ಪಕ್ಷದ ಹೈಕಮಾಂಡ್ ನಿರ್ಲಕ್ಷ್ಯ ಹೊಂದಿದ್ದಾರೆ. ಕಾಂಗ್ರೆಸ್ ಒತ್ತಾಯದ ಹಿನ್ನೆಲೆಯಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳಲು ಇದೀಗ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ನೇಮಕ ಮುಖಂಡರಾದ ಸಿ.ಟಿ.ರವಿ, ಬಸನಾಗೌಡ ಪಾಟೀಲ್ ಯತ್ನಾಳ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ರಮೇಶ ಜಿಗಜಿಣಗಿ, ಚಂದ್ರಕಾಂತ ಬೆಲ್ಲದ್, ಕೆ.ಎಸ್.ಈಶ್ವರಪ್ಪ, ಬಿ.ಸೋಮಣ್ಣ ಸೇರಿ ಬಹುತೇಕ ಹಿರಿಯರಿಗೆ ಇಷ್ಟವಿಲ್ಲ. ಸ್ವತಃ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ನೇಮಕ 3 ವರ್ಷಕ್ಕೆ ಸೀಮಿತ ಎಂದು ಹೇಳುವ ಮೂಲಕ ಅಪಸ್ವರವೆತ್ತಿದ್ದಾರೆ. ಪ್ರಧಾನಮಂತ್ರಿಗಳು ತಮ್ಮ ಸ್ಥಾನದ ಪರಿವೆ ಇಲ್ಲದೇ ಕರ್ನಾಟಕದ ಚುನಾವಣೆಯ ಸಂದರ್ಭದಲ್ಲಿ 46 ಭಾರಿ ಭೇಟಿ ನೀಡಿ ಪ್ರಚಾರ ಮಾಡಿದರೂ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ವಿಫಲರಾದ ಸಂದರ್ಭದಲ್ಲಿಯೇ ಕೇಂದ್ರ ಬಿಜೆಪಿ ಹೈಕಮಾಂಡ್ ಹಾಗೂ ಸಂಘ ಪರಿವಾರದವವರು ಸ್ಥಳೀಯ ನಾಯಕರ ಬಗ್ಗೆ ನಿರ್ಲಕ್ಷ್ಯ ಹೊಂದಿದ್ದು ವಿಪಕ್ಷ ನಾಯಕನ ಸ್ಥಾನಕ್ಕೆ ಜೆಡಿಎಸ್ ನ ಎಚ್.ಡಿ.ಕುಮಾರ ಸ್ವಾಮಿಯನ್ನು ಬಿಜೆಪಿಯವರು ಒಪ್ಪಿಕೊಂಡರೂ ಆಶ್ಚರ್ಯವಿಲ್ಲ ಎಂದರು.

ಬಿ.ಎಸ್.ಯಡಿಯೂರಪ್ಪನವರ ಹೋರಾಟದ ಜೀವನದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತರು ಸೇರಿ ಅನೇಕ ವರ್ಗಗಳ ಬೆಂಬಲವಿತ್ತು. ವಿಜಯೇಂದ್ರ ಬಿಎಸ್‌ವೈ ಅವರ ಪುತ್ರ ಎನ್ನುವ ಮಾತ್ರಕ್ಕೆ ರಾಜ್ಯಾಧ್ಯಕ್ಷರಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಗೆಲ್ಲಲಿದ್ದು ಬಿಜೆಪಿ ಏನೇ ಮಾಡಿದರೂ ನಮ್ಮ ಗ್ಯಾರಂಟಿ ಯೋಜನೆಗಳ ಮುಂದೆ ಗೆಲ್ಲಲು ಸಾಧ್ಯವಿಲ್ಲ. ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷದಲ್ಲಿ ಸಮುದಾಯ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸಿದಂತೆ ಲೋಕಸಭಾ ಚುನಾವಣೆಯಲ್ಲೂ ಬೆಂಬಲಿಸುವ ನಿರೀಕ್ಷೆ ಇದೆ ಎಂದರು.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.