Water Scarcity: ಹನಿ.. ಹನಿ.. ನೀರಿಗೂ ತತ್ವಾರ!

ಬೇಸಿಗೆ ಆರಂಭಕ್ಕಿಂತ ಮೊದಲೇ ನೀರಿನ ಸಮಸ್ಯೆ..!

Team Udayavani, Feb 22, 2024, 10:42 AM IST

3-dotihala

ದೋಟಿಹಾಳ: ಬೇಸಿಗೆ ಆರಂಭವಾಗಿದ್ದೇ ತಡ ತಾಲೂಕಿನ ಗಡಿಭಾಗದ ಹಳ್ಳಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಜನರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.

ಜುಮಲಾಪೂರ ಗ್ರಾಪಂ ಇದ್ಲಾಪೂರದಲ್ಲಿ ಕಳೆದ ಒಂದು ವಾರದಿಂದ ನೀರಿನ ಸಮಸ್ಯೆ ಕಾಡುತ್ತಿದೆ. ಹೊಸ ಬಡಾವಣೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇಲ್ಲಿ ಕಳೆದ 15 ದಿನಗಳಿಂದ ಜನರಿಗೆ ಸರಿಯಾಗಿ ನೀರು ಸಿಗುತ್ತಿಲ್ಲ. ನೀರಿಗಾಗಿ ಜನ ಹೊಲಗದ್ದೆಗಳಿಗೆ ಅಲೆದಾಡುವಂತಾಗಿದೆ.

ಇಲ್ಲಿ ಒಂದು ನೀರಿನ ಟ್ಯಾಂಕ್‌ ಸಹ ಇಲ್ಲ. ನಲ್ಲಿ ನೀರು ಬಂದರೇ ಮಾತ್ರ ಜನರು ನೀರು ಹಿಡಿಯಬೇಕು. ಇಲ್ಲ ಊರ ಮುಂದೇ ಇರುವ ಕೈ ಬೋರ್‌ ಹೊಡೆದು ನೀರು ತರಬೇಕು. ಗ್ರಾಮದಲ್ಲಿ ಹಾಕಲಾದ ನಳಗಳ ಪೈಪ್‌ಗ್ಳು ಒಡೆದು ಹೋಗಿವೆ ಎನ್ನುತ್ತಾರೆ ಗ್ರಾಮಸ್ಥರು.

ಗಂಟೆಗೊಂದು ಕೊಡ: ನೀರಿನ ಸಮಸ್ಯೆ ಇರುವುದರಿಂದ ಜನರು ಗ್ರಾಮದ ಮುಂದೇ ಇರುವ ಕೈ ಬೋರಿಗೆ ಬರುತ್ತಿದ್ದಾರೆ. ನೀರಿನ ಅಂತರ್ಜಲ ಕಡಿಮೆ ಇರುವುದರಿಂದ ಗಂಟೆಗೊಂದು ಬಿಂದಿಗೆ ತುಂಬುತ್ತವೆ. ಕೈ ಬೋರ್‌ ಒಡೆದು ಮಹಿಳೆಗೆ ಸುಸ್ತಾಗುತ್ತಿದ್ದಾರೆ. ಈ ಮಧ್ಯ ನೀರಿಗಾಗಿ ಆಗಮಿಸಿ ಜನರು ಗಂಟೆಗಟ್ಟಲೆ ನೀರಿಗಾಗಿ ಬಿಸಿಲಿನಲ್ಲಿ ಕುಳಿತು ಕಾಯಬೇಕು.

ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಸರಿಯಾಗಿ ನಡೆದಿಲ್ಲ. ಕೆಲವು ಕಡೆಗಳಲ್ಲಿ ಹನಿ ಹನಿಯಾಗಿ ನೀರು ಬರುತ್ತದೆ. ಇನ್ನೂ ಕೆಲವು ಕಡೆಗಳಲ್ಲಿ ನೀರೇ ಬರುವುದಿಲ್ಲ. ಕಳೆದ 15 ದಿನಗಳಿಂದ ಗ್ರಾಮದ ಜನರು ಈ ಕೈ ಬೋರಿನಿಂದ ಗಂಟೆಗಟ್ಟಲೆ ಕಾದು ನೀರಿ ಒಯ್ಯುತ್ತಿದ್ದಾರೆ. ಬೆಳಗಿನಿಂದ ಸಂಜೆಯವರೆಗೆ ಜನ ನೀರಿಗಾಗಿ ಕಾಯುವಂತಾಗಿದೆ ಎಂದು ಅಲವತ್ತುಕೊಳ್ಳುತ್ತಾರೆ.

ಸಾಮಾನ್ಯವಾಗಿ ರೈತಾಪಿ ಜನ ಇರುವುದರಿಂದ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು, ನೀರಿಗಾಗಿ ಕಾಯುವ ಪರಿಸ್ಥಿತಿ ಇದೆ. ಇನ್ನೂ ಕೆಲವರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ ನೀರಿಗಾಗಿ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಗ್ರಾಮದಲ್ಲಿ ಸುಮಾರು 100ಕ್ಕೂ ಮನೆಗಳಿದ್ದು, ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬೇಸಿಗೆ ಆರಂಭದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಗಮನಹರಿಸಬೇಕು ಎನ್ನುವುದು ಸಾರ್ವಜನಿಕರ ಕಳಕಳಿಯಾಗಿದೆ.

ಬೋರ್‌ ಹೊಡೆದು ಹೊಟ್ಟೆ ನೋವು

ಕಳೆದ ಒಂದು ವಾರದಿಂದ ನೀರಿನ ಸಮಸ್ಯೆಯಾಗಿದೆ. ಈ ಮೊದಲು 15 ದಿನಗಳಿಂದ ನೀರಿನ ಸಮಸ್ಯೆಯಾಗಿತ್ತು. ಆಗ 2-3 ದಿನ ನೀರು ಬಂದವು. ಈಗ ಮತ್ತೆ ನೀರಿನ ಸಮಸ್ಯೆಯಾಗಿದೆ. ಕೈಬೋರ್‌ ಒಡೆದು ಸಾಕಾಗಿದೆ. ಹೊಟ್ಟೆ ನೋವು ಬರುತ್ತಿದೆ ಎಂದು ಅಲವತ್ತು ಕೊಳ್ಳುತ್ತಾರೆ ಇದ್ಲಾಪೂರ ಹೊಸ ಬಡಾವಣೆಯ ಮಹಿಳೆ ದೇವಮ್ಮ.

ಬಿಸಿಯೂಟಕ್ಕೂ ಪರದಾಟ

ಶಾಲಾ ಮಕ್ಕಳ ಬಿಸಿಯೂಟಕ್ಕೂ ನೀರಿನ ಸಮಸ್ಯೆ ಕಾಡುತ್ತಿದೆ. ಗ್ರಾಮದ ಜನರಿಗೆ ಮಾತ್ರ ನೀರಿನ ಸಮಸ್ಯೆವಿಲ್ಲ. ಮಧ್ಯಾಹ್ನದ ಬಿಸಿಯೂಟ ಅಡುಗೆ ಮಾಡಲು ನೀರಿಲ್ಲ. ಶಾಲಾ ಮಕ್ಕಳು ತೋಟಗಳಿಗೆ ಹೋಗಿ ನೀರು ತರುತ್ತಾರೆ ಎಂದು ಹೇಳುತ್ತಾರೆ ಶಾಲಾ ಮಕ್ಕಳು.

ಇದ್ಲಾಪೂರದಲ್ಲಿ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ತಾಲೂಕು ಗ್ರಾಮೀಣ ಕುಡಿಯುವ ನೀರು ಅಧಿ ಕಾರಿಗಳಿಗೆ ಮಾಹಿತಿ ನೀಡಿದ್ದೇನೆ ನಾಳೆ ಸರಿಪಡಿಸುತ್ತಾರೆ. ನಾನು ಈ ಗ್ರಾಪಂಗೆ ಬಂದು 2-3 ದಿನಗಳಾಗಿವೆ. -ವೆಂಕಟೇಶ ಪವಾರ ಪಿಡಿಒ ಜುಮಲಾಪೂರ

„ ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.