ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕರ ಸತ್ಯಾಗ್ರಹ


Team Udayavani, Aug 20, 2019, 1:27 PM IST

kopala-tdy-2

ಕಾರಟಗಿ: ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಗುತ್ತಿಗೆ ಪೌರಕಾರ್ಮಿಕರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಕಾರಟಗಿ: ಗುತ್ತಿಗೆ ಪೌರಕಾರ್ಮಿಕರಿಗೆ ವೇತನ ಪಾವತಿಸುವಂತೆ ಆಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ಪುರಸಭೆ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ಜಿಲ್ಲಾ ಪ್ರಗತಿಪರ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಪರಶುರಾಮ ಮಾತನಾಡಿ, ಕಾರಟಗಿ ಪುರಸಭೆಯಲ್ಲಿ 21 ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ 2 ವರ್ಷದಿಂದ ಈ ಕಾರ್ಮಿಕರಿಗೆ ವೇತನ ಪಾವತಿಸದೇ ಪುರಸಭೆ ಆಡಳಿತ ಮಲತಾಯಿ ಧೋರಣೆ ತೋರುತ್ತಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ 21 ಜನರಲ್ಲಿ 7 ಜನ ಲೋಡರ್, 10 ಜನ ಮನೆಮುಂದೆ ಕಸ ಸಂಗ್ರಹಿಸುವವರು. ಮೂವರು ವಾಹನ ಚಾಲಕರು, ಒಬ್ಬರು ಪುರಸಭೆ ಕಚೇರಿಯಲ್ಲಿ ಜವಾನರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೇತನ ಪಾವತಿಗಾಗಿ ಎರಡು ವರ್ಷಗಳಿಂದ ಎರಡು ತಿಂಗಳಿಗೊಮ್ಮೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸುತ್ತಿದ್ದೇವೆ. ಕಾರ್ಯ ನಿರ್ವಹಿಸುತ್ತಲಿದ್ದರೂ ವೇತನ ಪಾವತಿಸದೇ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ವೇತನ ನೀಡದೆ ಜೀವನ ನಡೆಸುವುದು ಕಷ್ಟಕರವಾಗಿದೆ. ಪೌರಕಾರ್ಮಿಕರಿಗೆ ನೇರ ಪಾವತಿ ಯೋಜನೆಯಡಿ ಉದ್ಯೋಗ ಭದ್ರತೆ ಕಲ್ಪಿಸಿ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ಪ್ರಗತಿಪರ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಭಾರಧ್ವಾಜ್‌ ಮಾತನಾಡಿ, ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರಟಗಿ ಪುರಸಭೆ ಗುತ್ತಿಗೆ ಪೌರ ಕಾರ್ಮಿಕರನನ್ನು ಮೊದಲು ಕಾಯಂಗೊಳಿಸಬೇಖು. 2 ವರ್ಷದಿಂದ ಬಾಕಿಯಿರುವ ವೇತನ ಶೀಘ್ರ ಪಾವತಿಸಬೇಕು. ಈಗಾಗಲೆ ವೇತನವಿಲ್ಲದೇ ಪೌರಕಾರ್ಮಿಕರ ಕುಟುಂಬಗಳು ಜೀವನ ನಿರ್ವಹಿಸಲಾಗದೆ ಬೀದಿಪಾಲಾಗುವ ಸ್ಥಿತಿಗೆ ತಲುಪಿದ್ದಾರೆ. 2-3 ಬಾರಿ ಧರಣಿ ನಡೆಸಿದ ಸಂದರ್ಭದಲ್ಲಿ ನೀಡಿದ್ದ ಭ‌ರವಸೆಗಳು ಈಡೇರಿಲ್ಲ ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದರು.

ಪೌರ ಕಾರ್ಮಿಕ ಹನುಮಂತಿ ಮಾತನಾಡಿ, ವೇತನವಿಲ್ಲದೇ ನಿತ್ಯ ಹೊಟ್ಟೆ ತುಂಬಿಸಿಕೊಳ್ಳುವುದು ದುಸ್ತರವಾಗಿದೆ. ಪೌರ ಕಾರ್ಮಿಕರ ಹಿತ ಕಾಪಾಡುವವರೆ ಹೀಗೆ ನಿರ್ಲಕ್ಷ ವಹಿಸಿದರೆ ನಮ್ಮ ಮುಂದಿನ ನಮ್ಮ ಸ್ಥಿತಿಗತಿ ಹೊಣೆಯಾರು? ನಮ್ಮ ಮುಂದಿನ ತರಾತುರಿ ನಿರ್ಧಾರಗಳಿಗೆ ಪುರಸಭೆಯೆ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಪೌರಕಾರ್ಮಿಕರಾದ ಶೇಖರಪ್ಪ, ಹುಲಗಪ್ಪ, ದುರಗಪ್ಪ, ಕೆ. ಗಂಗಪ್ಪ, ದುರಗಪ್ಪ, ಆನಂದ, ಹುಲಗಪ್ಪ, ಮಲ್ಲೇಶಪ್ಪ, ಮಾರೆಮ್ಮ, ಹುಲಿಗೆಮ್ಮ, ಅಯ್ಯಮ್ಮ, ಜಲಾಲೆಮ್ಮ, ಮಹಾಕಾಳಮ್ಮ, ದುರಗಮ್ಮ, ಹನುಮಂತ, ಮಹಾಂಕಾಳಿ, ಶರಣಮ್ಮ, ಜ್ಯೋತಿ, ಲಕ್ಷಿ ್ಮೕ, ದ್ಯಾವಮ್ಮ, ದೊಡ್ಡ ದ್ಯಾವಮ್ಮ, ಸಣ್ಣ ದ್ಯಾವಮ್ಮ, ಶರಣಮ್ಮ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.