ಆರಂಭವಾಗದ ಜಿಟಿಡಿಸಿ ಕಾಲೇಜು ಕ್ಯಾಂಟೀನ್‌

ವಸತಿ ನಿಲಯದಲ್ಲಿ ಊಟ-ಉಪಹಾರವಿಲ್ಲದೇ ವಿದ್ಯಾರ್ಥಿಗಳ ಪರದಾಟ „ ಹೋಟೆಲ್‌ಗ‌ಳನ್ನೇ ಅವಲಂಬಿಸಿದ ವಿದ್ಯಾರ್ಥಿಗಳು

Team Udayavani, Sep 26, 2019, 12:00 PM IST

26-Sepctember-7

ಶಿವರಾಜ ಕೆಂಭಾವಿ
ಲಿಂಗಸುಗೂರು: ಪಟ್ಟಣದ ಜಿಟಿಟಿಸಿ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಳೆದ ಎರಡು ವರ್ಷದ ಹಿಂದೆ ನಿರ್ಮಿಸಿದ್ದ ಕ್ಯಾಂಟೀನ್‌ ಇನ್ನೂ ಆರಂಭಗೊಳ್ಳದಿರುವುದು ವಿದ್ಯಾರ್ಥಿಗಳ ಪರದಾಟಕ್ಕೆ ಕಾರಣವಾಗಿದೆ.

ಪಟ್ಟಣದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಕಾಲೇಜಿನಲ್ಲಿ ರಕ್ಷಣೆ, ವೈಮಾನಿಕ, ಬಾಹ್ಯಾಕಾಶ ಹಾಗೂ ಕೈಗಾರಿಕಾ ರಂಗಕ್ಕೆ ಸಂಬಂ ಧಿಸಿದ ಅತ್ಯಂತ ಜಟಿಲ ವಿನ್ಯಾಸಗಳ ಹೊಂದಿರುವ ಉಪಕರಣಗಳನ್ನು ಜಿಟಿಡಿಸಿ ಕಾಲೇಜಿನ ಕಾರ್ಯಾಗಾರದಲ್ಲಿನ ಯಂತ್ರಗಳ ಸಹಾಯದಿಂದ ತಯಾರಿಸಲಾಗುತ್ತದೆ. ಕಾಲೇಜಿನಲ್ಲಿ ತರಬೇತಿ ಹೊಂದಿದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗದ ಜೊತೆಗೆ ದೇಶ, ವಿದೇಶಗಳಲ್ಲಿ ಉದ್ಯೋಗ ಪಡೆಯುವ ಅವಕಾಶಗಳಿವೆ.

ಕಾಲೇಜಿನಲ್ಲಿ ಒಟ್ಟು 105 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ 45 ವಿದ್ಯಾರ್ಥಿಗಳು ಕಾಲೇಜಿನ ವಸತಿ ನಿಲಯದಲ್ಲಿಯೇ ವಾಸ ಮಾಡುತ್ತಾರೆ. ಆದರೆ ಇವರಿಗೆ ಊಟ, ಉಪಹಾರದ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

1.23 ಕೋಟಿ ರೂ. ವೆಚ್ಚದ ಕ್ಯಾಂಟೀನ್‌: 2016ರಲ್ಲಿ ಜಿಟಿಡಿಸಿ ಕಾಲೇಜಿನ ಆವರಣದಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ(ಎಸ್‌ಡಿಪಿ), ಅಂದಾಜು 1.23 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕ್ಯಾಂಟೀನ್‌ ಕಟ್ಟಡ ನಿರ್ಮಿಸಲಾಗಿದೆ. 2017ರಲ್ಲಿ ಕಟ್ಟಡವನ್ನು ಕಾಲೇಜು ಸುಪರ್ದಿಗೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡು ಹಲವು ವರ್ಷಗಳೇ ಉರುಳಿವೆ. ಆದರೆ ಕಟ್ಟಡದ ಉದ್ಘಾಟನೆ ನೆಪದಲ್ಲಿ ಕ್ಯಾಂಟೀನ್‌ ಆರಂಭಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳು ಪಟ್ಟಣದ ಹೊಟೇಲ್‌ಗ‌ಳಿಗೆ ಊಟಕ್ಕಾಗಿ ಅಲೆಯುವ ಸ್ಥಿತಿ ನಿರ್ಮಾಣಗೊಂಡಿದೆ.

ತಡೆಗೋಡೆ ಇಲ್ಲ: ಕಾಲೇಜಿನಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಯಂತ್ರೋಪಕರಣಗಳಿವೆ. ಆದರೆ ಮುಖ್ಯದ್ವಾರ ಬಳಿಯ ರಸ್ತೆ ಬದಿಯಲ್ಲಿ ಕಾಂಪೌಂಡ್‌ ಗೋಡೆ ಬಿದ್ದರೂ ಮರು ನಿರ್ಮಾಣಕ್ಕೆ ಮುಂದಾಗಿಲ್ಲ. ಪರಿಣಾಮ ಕಾಲೇಜಿನ ಕಟ್ಟಡದೊಳಗೆ ಕುರಿ-ಮೇಕೆ,
ದನಕರುಗಳು ನುಗ್ಗುತ್ತಿವೆ. ಕೂಡಲೇ ಕ್ಯಾಂಟೀನ್‌ ಆರಂಭಿಸುವ ಜೊತೆಗೆ ಕಾಲೇಜು ಕಟ್ಟಡಕ್ಕೆ ಆವರಣ ಗೋಡೆ ನಿರ್ಮಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.