![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
ಪೈಪ್ ಒಡೆದು ಅಪಾರ ನೀರು ಸೋರಿಕೆ
Team Udayavani, Dec 5, 2019, 4:10 PM IST
![5-December-24](https://www.udayavani.com/wp-content/uploads/2019/12/5-December-24-620x332.jpg)
ಮಾಗಡಿ: ಮಂಚನಬೆಲೆ ಜಲಾಯದಿಂದ ಮಾಗಡಿ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪೈಪ್ ವಿ.ಜಿ.ದೊಡ್ಡಿ ಮಂಚನಬೆಲೆ ಮಾರ್ಗಮಧ್ಯೆದಲ್ಲಿ ಹೊಡೆದು ಹೋಗಿದ್ದು, ಪುರಸಭೆಯ ನಿರ್ಲಕ್ಷ್ಯತನದಿಂದ ನಿತ್ಯ ಸಾವಿರಾರು ಲೀಟರ್ ನೀರು ಪೋಲಾಗುತ್ತಿದೆ.
ನೀರು ಪೋಲಾಗುವುದರ ಜೊತೆಗೆ ರಸ್ತೆಯೂ ಗುಂಡಿ ಬಿದ್ದು, ಅಲ್ಲಿ ನೀರು ಶೇಖರಣೆಯಾಗಿ ರಸ್ತೆ ಹಾಳಾಗುತ್ತಿದೆ. ಎಂದು ಪುರಸಭೆಯ ನಿರ್ಲಕ್ಷ್ಯತನದ ವಿರುದ್ಧ ಮಂಚನಬೆಲೆ ಮತ್ತು ವಿಜಿದೊಡ್ಡಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನೀರಿನ ಪೈಪ್ ಅಲ್ಲಲ್ಲಿ ಹೊಡೆದು ಹೋಗಿರುವುದರಿಂದ ಕಲುಷಿತ ನೀರು ಪಟ್ಟಣಕ್ಕೆ ಪೂರೈಕೆಯಾಗುತ್ತಿದೆ ಎಂಬ ದೂರು ಪುರನಾಗರಿಕರಿಂದ ಕೇಳಿ ಬರುತ್ತಿದೆ.
ಹನಿ ನೀರು ಅಮೂಲ್ಯ ಮಿತವಾಗಿ ನೀರನ್ನು ಬಳಸಿ ಎಂದು ಮಾರುದ್ಧ ಭಾಷಣ ಬಿಗಿಯುವ ಅಧಿಕಾರಿಗಳಿಗೆ ನಿತ್ಯ ಸಾವಿರಾರು ಲೀಟರ್ ನೀರು ರಸ್ತೆ ಮೇಲೆ ಹರಿದು ಪೋಲಾಗುತ್ತಿದ್ದರೂ, ಸಹ ಕಂಡು ಕಾಣದಂತೆ ಪುರಸಭೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಮಂಚನಬೆಲೆ ಗ್ರಾಮಸ್ಥರಾದ ಸುನಿಲ್, ಜಗದೀಶ್, ಉಮೇಶ್, ಪ್ರವೀಣ್ ಆರೋಪಿಸಿದ್ದಾರೆ.
ಶೀಘ್ರದಲ್ಲಿಯೇ ಹೊಡೆದು ಹೋಗಿರುವ ನೀರಿನ ಪೈಪ್ನ್ನು ದುರಸ್ತಿಪಡಿಸಿ ನೀರು ಪೋಲಾಗುವುದನ್ನು ತಡೆಯಬೇಕು. ಇಲ್ಲದಿದ್ದರೆ, ಮಂಚನಬೆಲೆ ಜಲಾಶಯದ ಪಂಪ್ ಹೌಸ್ಗೆ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಪುರಸಭೆ ಎಂಜಿನಿಯರ್ ಪ್ರಶಾಂತ್ ಕುಮಾರ್ ಶೆಟ್ಟಿ ಅವರು, ಮಂಚನಬೆಲೆ ವಿ.ಜಿ.ದೊಡ್ಡಿ ಮಾರ್ಗದಲ್ಲಿ ದನಗಾಹಿಗಳು ದನಗಳಿಗೆ ನೀರು ಕುಡಿಸಲು ಪೈಪ್ಗ್ಳನ್ನು ಹೊಡೆದು ಹಾಕುತ್ತಿದ್ದಾರೆ. ಎರಡು ಬಾರಿ ಪೈಪ್ ದುರಸ್ತಿಪಡಿಸಿ ಮರು ಜೋಡಣೆ ಮಾಡಲಾಗಿದೆ. ಆದರೂ ಸಹ ದನಗಾಹಿಗಳು ನೀರಿಗಾಗಿ ಪೈಪ್ಗ್ಳನ್ನು ತೂತು ಮಾಡುತ್ತಿದ್ದಾರೆ ಎಂಬ ದೂರಿದ್ದು, ಈ ಸಂಬಂಧ ಪುರಸಭೆ ವತಿಯಿಂದ ಆರೋಪಿಗಳ ಪತ್ತೆಗೆ ಪೊಲೀಸರಿಗೂ ಸಹ ದೂರು ನೀಡಲಾಗಿದೆ.
ಆದರೂ ಕಿಡಿಗೇಡಿಗಳು ಪೈಪ್ಗ್ಳನ್ನು ಹೊಡೆದು ತೂತು ಮಾಡಿ ನೀರು ರಸ್ತೆ ಮೇಲೆ ಹರಿಯುವಂತೆ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮದಿಂದ ಕಾಂಕ್ರೀಟ್ ಹಾಕಿ ಪೈಪ್ ಅಳವಡಿಸಲಾಗುವುದು|
ಅದೇ ರೀತಿ ಕಿಡಿ ಗೇಡಿ ಗಳು ಪೈಪ್ ಹೊಡೆದು ಹಾಕುವ ಪ್ರಯತ್ನ ಮಾಡಿದರೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.