ಮೃತ ಮಕ್ಕಳ ಕುಟುಂಬಕ್ಕೆ ತಲಾ 3 ಲಕ್ಷ
Team Udayavani, Feb 12, 2018, 6:50 AM IST
ಮಂಡ್ಯ: ರೋಗ ನಿರೋಧಕ ಚುಚ್ಚುಮದ್ದು ನೀಡಿದ 24 ಗಂಟೆಯಲ್ಲಿ ಮೃತಪಟ್ಟ 2 ಹಸುಗೂಸುಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ.
ತಾಲೂಕಿನ ಚಿಂದಗಿರಿ ದೊಡ್ಡಿ ಗ್ರಾಮದ ಪ್ರಿಯಾಂಕ- ರವಿ ದಂಪತಿಗೆ ಸೇರಿದ ಪ್ರೀತಂ ಹಾಗೂ ಹೇಮಾವತಿ-ರವಿ ಅವರಿಗೆ ಸೇರಿದ ಭುವನ್ ಮೃತ ಮಕ್ಕಳು.
ಚುಚ್ಚುಮದ್ದಿನಿಂದ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡರು, ಸಾರ್ವಜನಿಕರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದರು. ಮಿಮ್ಸ್ ವೈದ್ಯಕೀಯ ಅಧೀಕ್ಷಕರ ಬಳಿ ಧರಣಿ ನಡೆಸುತ್ತಿದ್ದವರನ್ನು ಡೀಸಿ ಎನ್. ಮಂಜುಶ್ರೀ, ಎಸ್ಪಿ ಜಿ.ರಾಧಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ನಟರಾಜ್ ಭೇಟಿ ನೀಡಿ ಹೋರಾಟಗಾರರ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ, ಹೋರಾಟ ಕೈಬಿಡದೆ ಪರಿಹಾರಕ್ಕೆ ಪಟ್ಟು ಹಿಡಿದರು. ಸಂಸದ ಸಿ.ಎಸ್.ಪುಟ್ಟರಾಜು ಭಾನುವಾರ ಬೆಳಗಿನ ಜಾವ 2.30ರ ಸಮಯಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಮಾತುಕತೆ ನಡೆಸಿದರು. ಅಷ್ಟರಲ್ಲಿ ಹೋರಾಟಗಾರರು ನಾಪತ್ತೆಯಾಗಿದ್ದರು. ಮಿಮ್ಸ್ ವೈದ್ಯ ಡಾ.ಅಶ್ವಿನ್ ಮೃತ ಹಸುಗೂಸುಗಳ ಪಂಚನಾಮೆ ನಡೆಸಿ ಬಳಿಕ ಪೋಷಕರ ವಶಕ್ಕೆ ನೀಡಿದರು.
ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಪರಿಹಾರ ನೀಡಲು ಸಮ್ಮತಿಸಿತು. ಅಷ್ಟರಲ್ಲಿ ಸ್ಥಳದಲ್ಲಿ ಹೋರಾಟಗಾರರು ಇರಲಿಲ್ಲ. ಮುಖಂಡರಿಗಾಗಿ ಡೀಸಿ, ಎಸ್ಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮುಂಜಾನೆವರೆಗೂ ಕಾದು ಕುಳಿತರು. ರಾಜ್ಯಸರ್ಕಾರ 1 ಲಕ್ಷ ರೂ. ಸೇರಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಜೆಡಿಎಸ್ನಿಂದ 1 ಲಕ್ಷ ರೂ., ಜೆಡಿಎಸ್ ಮುಖಂಡ ಡಾ.ಎಚ್.ಕೃಷ್ಣ ಹಾಗೂ ಮುಡಾ ಅಧ್ಯಕ್ಷ ಮುನಾವರ್ಖಾನ್ ವೈಯಕ್ತಿವಾಗಿ ಒಂದೊಂದು ಲಕ್ಷ ರೂ. ಪರಿಹಾರ ಘೋಷಿಸಿದರೂ ನಾಯಕರಿಲ್ಲದೆ ಅದನ್ನು ಒಪ್ಪಲು ಸಾಧ್ಯವಿಲ್ಲ ಮುಖಂಡರು ಪಟ್ಟು ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.