ದೊಡ್ಡರಸಿನಕೆರೆಯಲ್ಲಿ ಅಂಬರೀಶ್ ಪುಣ್ಯಸ್ಮರಣೆ
Team Udayavani, Nov 25, 2021, 2:31 PM IST
ಭಾರತೀನಗರ: ಇಲ್ಲಿಗೆ ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ಮಾಜಿ ಸಚಿವ, ನಟ ದಿ.ಅಂಬರೀಶ್ ಅವರ 3ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಗ್ರಾಮದ ಹೆಬ್ಟಾಗಿಲ ಬಳಿ ಕೆರೆಯ ದಡದಲ್ಲಿ ಅಂಬರೀಶ್ರ ಚಿತಾಭಸ್ಮವನ್ನಿಟ್ಟು ನಿರ್ಮಿಸಲಾಗಿರುವ ಸಮಾಧಿಯನ್ನು ತಳಿರು ತೋರಣ ಹಾಗೂ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು.
ಸಮಾಧಿ ಮೇಲೆ ವಿವಿಧ ಬಗೆಯ ಹಣ್ಣು, ತಿಂಡಿ ತಿನಿಸು, ಇಸ್ಪೀಟು, ಎಣ್ಣೆ ಇಡಲಾಗಿತ್ತು. ಬುಧವಾರ ಸಂಜೆ 4 ಗಂಟೆ ಹೊತ್ತಿಗೆ ಗ್ರಾಮಕ್ಕೆ ಸಂಸದೆ ಸುಮಲತಾ, ಪುತ್ರ ಅಭಿಷೇಕ್ಗೌಡ, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಆಗಮಿಸಿ ಸಮಾಧಿಗೆ ಗಂಧದಕಡ್ಡಿ, ಕರ್ಪೂರದಾರತಿ ಬೆಳಗಿಸಿ ಪೂಜೆ ಸಲ್ಲಿಸಿದರು.
ಇದನ್ನೂ ಓದಿ;- ಜನತಾ ಪ್ರಜಾಪ್ರಭುತ್ವ ಸ್ಥಾಪನೆಯಾಗಲಿ
ಅಲ್ಲಿಂದ ಗ್ರಾಮದ ಮಧ್ಯಭಾಗದಲ್ಲಿ ನಿರ್ಮಿಸಲಾಗಿರುವ ಅಂಬರೀಶ್ ಪುತ್ಥಳಿ ಬಳಿ ತೆರಳಿದ ಎಲ್ಲರೂ ಪುತ್ಥಳಿಗೆ ಹೂವಿನ ಹಾರ ಹಾಕಿ ನೆನೆದು ನಮಸ್ಕರಿಸಿದರು. ಗ್ರಾಮದಲ್ಲಿ ನೆರೆದಿದ್ದ ಅಂಬರೀಶ್ ಅಭಿಮಾನಿಗಳು ರೆಬಲ್ಸ್ಟಾರ್ ಅಂಬರೀಶ್ ಗೆ ಜಯವಾಗಲಿ, ಮತ್ತೆ ಅಂಬಿ ಹುಟ್ಟಿಬರಲಿ ಎಂದು ಜೈಕಾರ ಹಾಕಿದರು.
ಗ್ರಾಮದಲ್ಲಿ ಅಭಿಮಾನಿಗಳು ಗ್ರಾಮಸ್ಥರಿಗೆ ಬಿರಿಯಾನಿ ಊಟ ಹಾಕಿ ಪುಣ್ಯಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ಗೂಳಿಗೌಡ, ಜಿ.ಪಂ ಮಾಜಿ ಸದಸ್ಯ ಎ.ಎಸ್. ರಾಜೀವ್, ಸತ್ಯಾನಂದ, ಪಾಂಡವಪುರದ ಸುಬ್ಬಣ್ಣ, ಬೇಲೂರು ಸೋಮಶೇಖರ್, ಶಶಿ, ಡೇರಿ ಶಿವ, ಸಿದ್ದೇಗೌಡ, ಮಹೇಶ್, ಕುಮಾರ, ಕೇಬಲ್ ಮಧು, ಪ್ರಸನ್ನ, ಅಮರ್, ಸುನೀಲ್, ರವಿ, ಕೃಷ್ಣ, ಸಂದೀಪ, ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.