ಆಟೋ-ಟ್ಯಾಕ್ಸಿ ಸೇವೆ ಬಂದ್‌: ಚಾಲಕರ ಪ್ರತಿಭಟನೆ

ಎಫ್ಸಿ ನವೀಕರಣ, ಪರವಾನಗಿ ವಿಸ್ತರಣೆ, 50 ಸಾವಿರ ರೂ. ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Team Udayavani, Jun 18, 2019, 12:24 PM IST

mandya-tdy-2..

ಹದಿನೈದು ವರ್ಷ ಮೇಲ್ಪಟ್ಟ ಆಟೋ-ಟ್ಯಾಕ್ಸಿಗಳ ಎಫ್ಸಿ ನವೀಕರಿಸಿ, ಪರವಾನಗಿ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಆಟೋ-ಟ್ಯಾಕ್ಸಿ ಚಾಲಕರು ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಡ್ಯ: ಹದಿನೈದು ವರ್ಷಗಳ ಹಿಂದಿನ ಆಟೋ ಟ್ಯಾಕ್ಸಿಗಳಿಗೆ ಗುಣಮಟ್ಟ ಪ್ರಮಾಣಪತ್ರ ನೀಡದಿರುವುದರ ವಿರುದ್ದ ಸೋಮವಾರ ಜಿಲ್ಲಾದ್ಯಂತ ಆಟೋ-ಟ್ಯಾಕ್ಸಿ ಸೇವೆ ಬಂದ್‌ ಮಾಡಿ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಸಿಲ್ವರ್‌ ಜ್ಯೂಬಿಲಿ ಉದ್ಯಾನದ ಬಳಿ ಜಮಾವಣೆಗೊಂಡ ಚಾಲಕರು ಅಲ್ಲಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಆಗಮಿಸಿ ಧರಣಿ ನಡೆಸಿದರು.

ಆಖೀಲ ಕರ್ನಾಟಕ ರಾಜೀವ್‌ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆ ಅಧ್ಯಕ್ಷ ಟಿ.ಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಆಟೋ ಮತ್ತು ಟ್ಯಾಕ್ಸಿಗಳಿವೆ. ಇವುಗಳನ್ನೇ ಅವಲಂಬಿಸಿಕೊಂಡು ಚಾಲಕರು 50 ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ. ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ಬದುಕು ಕಂಡುಕೊಂಡಿದ್ದಾರೆ ಎಂದು ಹೇಳಿದರು.

ಈ ಹಿಂದೆ 65 ಸಾವಿರದಿಂದ 75 ಸಾವಿರ ರೂ.ಗಳಿಗೆ ಆಟೋಗಳು ಸಿಗುತ್ತಿದ್ದವು. ಈಗ ಅವುಗಳ ಬೆಲೆ 2 ಲಕ್ಷ ರೂ.ಗಳಿಗೂ ಹೆಚ್ಚಾಗಿದೆ. ಆಟೋ ಚಾಲಕರು ಸಾಲಗಾರರಾಗುವ ಪರಿಸ್ಥಿತಿ ಎದುರಾಗಿದೆ. ಆದರೆ, ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಾವಳಿಗಳ 155ರ ಅಡಿ ವಾಯು ಮಾಲಿನ್ಯ ತಡೆಗಟ್ಟಲು ವಯೋಮಿತಿ ಆಧಾರದ ಮೇಲೆ 15 ವರ್ಷ ಮೀರಿದ ವಾಹನಗಳ ಪರವಾನಗಿ ಸರ್ಕಾರ ವಶಪಡಿಸಿಕೊಂಡು ಹೊಸ ಆಟೋ ಖರೀದಿಗಾಗಿ 50 ಸಾವಿರ ರೂ. ಸಹಾಯ ಧನ ನೀಡಲಾಗುವುದು ಎಂದು ಭರವಸೆ ನೀಡಿತ್ತು. ಸರ್ಕಾರದ ಭರವಸೆ ಇದುವರೆಗೂ ಈಡೇರಿಲ್ಲ. ಹೊಸ ಆಟೋ ಖರೀದಿಗೆ ಚಾಲಕರ ಬಳಿ ಹಣವಿಲ್ಲ. ಹಾಗಾಗಿ 15 ವರ್ಷ ಮೇಲ್ಪಟ್ಟ ವಾಹನಗಳಿಗೆ ಗುಣಮಟ್ಟ ಪ್ರಮಾಣಪತ್ರ ನವೀಕರಿಸುವುದರ ಜೊತೆಗೆ ಪರವಾನಗಿ ವಿಸ್ತರಣೆ ಮಾಡುವಂತೆ ಒತ್ತಾಯಿಸಿದರು.

ಆಟೋ ಚಾಲಕರಾದ ವಿ.ಸಿದ್ದೇಗೌಡ, ಆರ್‌.ರವಿ, ಎಂ.ರಾಜು, ಎಂ.ಎನ್‌.ಸತ್ಯನಾರಾಯಣ್‌, ನಾರಾಯಣ, ಎಚ್.ಸಿ.ಮಹೇಶ್‌, ಕುಮಾರ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬೇಡಿಕೆಗಳೇನು? ಎಫ್ಸಿಯನ್ನು ಸಾರಿಗೆ ಅಧಿಕಾರಿಗಳಿಂದ ಕೂಡಲೇ ಕೊಡಿಸುವುದು. ಮಂಡ್ಯ ನಗರದ ಕಸಬಾ ಹೋಬಳಿ ವ್ಯಾಪ್ತಿಯ ಪರ್ಮಿಟ್ನ್ನು ರಸ್ತೆ ಸಾರಿಗೆ ಇಲಾಖೆ ಯಾವುದೇ ಸಭೆ ಕರೆಯದೇ 12 ಕಿ.ಮೀ ವ್ಯಾಪ್ತಿಯನ್ನು 8 ಕಿ.ಮೀಗೆ ಕಡಿತಗೊಳಿಸಿದೆ. ಇದನ್ನು 17 ಕಿ.ಮೀಗೆ ಹೆಚ್ಚಳ ಮಾಡಬೇಕು. ಸಾರಿಗೆ ಇಲಾಖೆ ಆಟೋಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಭೆ ನಡೆಸಬೇಕು.

ಬೆಂಗಳೂರಿನ ಬೆಲೆಯಲ್ಲೇ ಮಂಡ್ಯದಲ್ಲೂ ಆಟೋ ದೊರಕಿಸಿಕೊಡಬೇಕು. ಸ್ವಂತ ಮನೆ ಇಲ್ಲದ ಆಟೋ ಚಾಲಕರಿಗೆ ನಿವೇಶನ ನೀಡುವುದು. ನಗರಾದ್ಯಂತ ಆಟೋ ಟ್ಯಾಕ್ಸಿ ನಿಲ್ದಾಣಗಳಿಗೆ ಕೂಡಲೇ ನೋಂದಣಿ ಮಾಡಿಕೊಡಬೇಕು. ಎಲ್ಲ ನಿಲ್ದಾಣಗಳಿಗೆ ಸರ್ಕಾರದಿಂದ ಮೇಲ್ಛಾವಣಿ ಹಾಕಿಸುವುದು. ಕೇಂದ್ರ ಸರ್ಕಾರದಿಂದ ಆಟೋಗಳಿಗೆ ವಿಮೆ ಹೆಚ್ಚಿಸುತ್ತಿರುವುದರಿಂದ 5 ಸಾವಿರಕ್ಕಿಂತ ಕಡಿಮೆ ಮಾಡಿ ಕೊಡಬೇಕು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.