Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

ಬೆಳೆಗಾರರಿಂದ 36 ರೂ.ಗೆ ಖರೀದಿ; ಮಂಡ್ಯದಲ್ಲಿ 50 ರೂ., ಬೆಂಗಳೂರಲ್ಲಿ 70 ರೂ.

Team Udayavani, Oct 16, 2024, 7:35 AM IST

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

ಮಂಡ್ಯ: ತೆಂಗು ಬೆಳೆಯಲ್ಲಿ ಏರಿಳಿತವಾದ ಹಿನ್ನೆಲೆಯಲ್ಲಿ ಎಳನೀರು ಪೂರೈಕೆ ಕುಸಿತವಾಗಿದ್ದು ಇದರ ಪರಿಣಾಮ ಬೆಲೆ ಗಗನಕ್ಕೇರಿದೆ. ಜತೆಗೆ ಮೊದಲ ಬಾರಿಗೆ ರೈತರಿಗೆ ಬಂಪರ್‌ ದರ ದೊರೆಯುತ್ತಿದೆ.

ಕಳೆದ ಸಾಲಿನ ಭೀಕರ ಬರ ಹಾಗೂ ಅಧಿಕ ಬಿಸಿಲಿನಿಂದ ಕೂಡಿದ ವಾತಾವರಣದಿಂದಾಗಿ ತೆಂಗಿನ ಬೆಳೆ ಮೇಲೆ ಸಾಕಷ್ಟು ಹಾನಿಯಾಗಿತ್ತು. ನೀರಿನ ಕೊರತೆಯಾಗಿ ಎಳನೀರು ಬೆಳೆ ಸಿಗದಂತಾಗಿದೆ. ಎಳನೀರಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರವೂ ಹೆಚ್ಚಾಗಿದೆ. ಮಂಡ್ಯದಲ್ಲಿ ದಲ್ಲಾಳಿಗಳು ರೈತರಿಂದ 36 ರೂ.ಗೆ ಎಳನೀರು ಖರೀದಿಸುತ್ತಿದ್ದಾರೆ. ಈ ಹಿಂದೆ ಬೆಳೆಗಾರರಿಂದ ದಲ್ಲಾಳಿಗಳು ಖರೀದಿಸುತ್ತಿದ್ದ ದರ 20 ರೂ. ಆಸುಪಾಸಿನಲ್ಲೇ ಇತ್ತು. ಇದೇ ಮೊದಲ ಬಾರಿ 33, 35 ಮತ್ತು 36 ರೂ. ಕೊಟ್ಟು ರೈತರಿಂದ ಖರೀದಿಸಲಾಗುತ್ತಿದೆ. ಇದು ಸದ್ಯದ ಮಟ್ಟಿಗೆ ದಾಖಲೆಯಾಗಿದೆ.

ಮಂಡ್ಯದಲ್ಲಿ ಸೋಮವಾರ ಒಂದು ಎಳನೀರಿಗೆ 43 ರೂ. ಇತ್ತು. ಉತ್ತಮ ಗುಣಮಟ್ಟದ ಎಳನೀರು 50 ರೂ. ಇದ್ದರೆ ಸ್ವಲ್ಪ ಸಣ್ಣ ಗಾತ್ರದ್ದಕ್ಕೆ 35 ರೂ. ಇದೆ. ಚುಕ್ಕೆ ಇರುವ ಎಳನೀರು 15ರಿಂದ 20 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಒಂದು ಎಳನೀರಿಗೆ 70 ರೂ. ಇದ್ದರೆ ಹೊರ ರಾಜ್ಯಗಳಿಗೆ ಸರಬರಾಜಾಗುವ ಎಳನೀರು 100 ರೂ. ಗಡಿ ದಾಟಿದೆ.

ಇಡೀ ಏಷ್ಯಾದಲ್ಲೇ ಅತಿ ದೊಡ್ಡ ಮಾರುಕಟ್ಟೆಯಾಗಿರುವ ಮದ್ದೂರು ಎಳನೀರು ಮಾರುಕಟ್ಟೆಯಲ್ಲೂ ಎಳನೀರು ಪೂರೈಕೆ ಇಳಿಕೆಯಾಗಿದೆ. ಹೊರ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಿರುವು ದರಿಂದ ಪೂರೈಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಇರುವ ಎಳನೀರು ಕೊçಲು ಮಾಡಿ ಪೂರೈಸಲಾಗಿದೆ. ಆದರೂ ಬೇಡಿಕೆ ನಿಂತಿಲ್ಲ.

ಹೊರ ರಾಜ್ಯಗಳಿಗೆ ಸರಬರಾಜು
ಜಿಲ್ಲೆಯ ಮದ್ದೂರು ಹಾಗೂ ಕೆ.ಆರ್‌. ಪೇಟೆ ಎಳನೀರು ಮಾರುಕಟ್ಟೆಯಿಂದ ದೇಶದ ದಿಲ್ಲಿ, ಪಂಜಾಬ್‌, ಹರಿಯಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ. ಆದರೆ ಬೇಡಿಕೆಗೆ
ತಕ್ಕಂತೆ ಎಳನೀರು ಸಿಗುತ್ತಿಲ್ಲ. ಮಳೆಗಾಲವಿದ್ದರೂ ಎಳನೀರಿಗೆ ಬೇಡಿಕೆ ಕಡಿಮೆಯಾಗಿಲ್ಲ.

ದಲ್ಲಾಳಿಗಳು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಎಳನೀರು ತಂದು ಹೊರ ರಾಜ್ಯಗಳಿಗೆ ಪೂರೈಸುತ್ತಿದ್ದಾರೆ ಎಂದು ವರ್ತಕರೊಬ್ಬರು ತಿಳಿಸಿದರು.

ಡಿಸೆಂಬರ್‌ಗೆ ದರ ಇಳಿಕೆ?
ಕಳೆದ ಸಾಲಿನಲ್ಲಿ ಮಳೆ ಬಾರದೆ ಜಿಲ್ಲೆಯು ಭೀಕರ ಬರಗಾಲಕ್ಕೆ ತುತ್ತಾಗಿತ್ತು. ನೀರಿನ ಕೊರತೆ ಉಂಟಾಗಿ ಸಾಕಷ್ಟು ಬೆಳೆ ಒಣಗಿ ನಷ್ಟ ಎದುರಾಗಿತ್ತು. ಆಗ ಮಳೆ ಬಿದ್ದಿದ್ದರೆ ತೆಂಗಿನ ಮರಗಳೆಲ್ಲವೂ ಉತ್ತಮ ಫಲ ನೀಡುತ್ತಿದ್ದವು. ಆದರೆ ಈಗ ಮಳೆ ಬೀಳುತ್ತಿದ್ದರೂ ತೆಂಗಿನ ಫಸಲು ಉತ್ತಮವಾಗಿಲ್ಲ. ಮುಂದಿನ ಡಿಸೆಂಬರ್‌ ವೇಳೆ ಯಥೇತ್ಛವಾಗಿ ಎಳನೀರು ಸಿಗಲಿದ್ದು ಆಗ ದರ ಕಡಿಮೆಯಾಗಲಿದೆ ಎಂದು ರೈತರೊಬ್ಬರು ತಿಳಿಸಿದರು.

-ಎಚ್‌. ಶಿವರಾಜು

ಟಾಪ್ ನ್ಯೂಸ್

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

suicide (2)

Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

10

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.