ಶಾಲೆಗೆ ನುಗ್ಗುವ ದೂಳು: ಅಧಿಕಾರಿಗಳ ವಿರುದ್ಧ ಪುಟಾಣಿಗಳ ಆಕ್ರೋಶ


Team Udayavani, Feb 19, 2023, 3:31 PM IST

tdy-18

ಕಿಕ್ಕೇರಿ: ರಸ್ತೆ ಡಾಂಬರೀಕರಣ ನೆಪದಲ್ಲಿ 6ತಿಂಗಳ ಹಿಂದೆ ಬಗೆಯಲಾಗಿದ್ದ ರಸ್ತೆ ದುರಸ್ತಿ ಮಾಡದೆ ಮಕ್ಕಳ ಅನಾರೋಗ್ಯಕ್ಕೆ ಕಾರಣವಾದ ಅಧಿಕಾರಿ, ಗುತ್ತಿಗೆದಾರರ ವರ್ತನೆಗೆ ಬೇಸತ್ತು ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದರು.

ಮೇಲೇಳುತ್ತಿದೆ: ರಸ್ತೆ ಅಭಿವೃದ್ಧಿ ಯೋಜನೆಯಡಿ ಕಿಕ್ಕೇರಿಯಿಂದ ಶ್ರವಣಬೆಳಗೊಳಕ್ಕೆ ಹಾದು ಹೋಗುವ ಸಾಸಲು ಗ್ರಾಮದಲ್ಲಿ ರಸ್ತೆ ಅಗೆಯಲಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ ರಸ್ತೆ ಬಗೆದು ಜಲ್ಲಿ ತುಂಬಿದ್ದ ಕಾರಣ ಸಣ್ಣ ವಾಹನ ರಸ್ತೆಯಲ್ಲಿ ಓಡಾಡಿದರೂ ದೂಳು ಮೇಲೇಳುತ್ತಿದೆ. ಇನ್ನು ಸುತ್ತಮುತ್ತಲ ಮನೆ, ಶಾಲೆಗೆ ದೂಳು ನುಗ್ಗುತ್ತಿತ್ತು. ಬಿಸಿಯೂಟ ಸೇವನೆ, ಪಾಠ ಪ್ರವಚನ ಕೇಳಲು ಸಾಧ್ಯವಾಗದೆ ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಅನಾರೋಗ್ಯ ಸಮಸ್ಯೆ: ನಿತ್ಯ ಶೀತ, ನೆಗಡಿ, ಕೆಮ್ಮು, ಜ್ವರದಂತಹ ಸಮಸ್ಯೆಗಳಿಂದ ಕಾಡುವಂತಾಗಿತ್ತು. ದಪ್ಪ ಜಲ್ಲಿ ರಸ್ತೆಯಿಂದ ವಾಹನ, ಪಾದಚಾರಿಗಳು ಸಾಗಲು ಪರದಾಡುತ್ತಿದ್ದರು. ಈ ಹಿನ್ನೆಲೆ ಶಾಲಾ ಮಕ್ಕಳು ಅವ್ಯವಸ್ಥೆ ಸರಿಪಡಿಸಲು ಅಧಿಕಾರಿಗಳಿಗೆ ಎಚ್ಚರಿಸಲು ನಡೆಸಿದ ಪ್ರತಿಭಟನೆಗೆ ಗ್ರಾಮಸ್ಥರು, ಗ್ರಾಮ ಮುಖಂಡರು ಬೆಂಬಲ ನೀಡಿದರು.

ದಮ್ಮಯ್ಯ, ದಮ್ಮಯ್ಯ ರಸ್ತೆ ದುರಸ್ತಿ ಮಾಡಿ, ರಸ್ತೆ ದೂಳು ಕುಡಿದು ನಿತ್ಯ ಕೆಮ್ಮು, ಜ್ವರ ಬರುತ್ತಿದೆ ಎಂದು ಮಕ್ಕಳು ಘೋಷಣೆ ಕೂಗಿದರು. ತುರ್ತು ಕಾಮಗಾರಿ ಮಾಡಿ: ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ್‌ ಮಾತನಾಡಿ, ರಸ್ತೆ ಕಾಮಗಾರಿ ನೆಪದಲ್ಲಿ ವಿದ್ಯುತ್‌ ಕಂಬವನ್ನು ಕೀಳಲಾಗಿದೆ. ಒಳಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು ಪಾದಚಾರಿಗಳು ಗುಂಡಿಗೆ ಬೀಳುವಂತಾಗಿದೆ ಎಂದು ದೂರಿದರು.

ಶಾಲೆ ಬಂದ್‌ ಎಚ್ಚರಿಕೆ: ರಸ್ತೆಯಲ್ಲಿನ ದೂಳು ಶಾಲೆಯೊಳಗೆ ಸೇರುತ್ತಿದ್ದು ಅಧಿಕಾರಿಗಳಿಗೆ ತಿಳಿಸಿ ಸಾಕಾಗಿದೆ. 120 ಮಕ್ಕಳು ಸರ್ಕಾರಿ ಶಾಲೆಯಲ್ಲಿರುವುದು ದಾಖಲೆಯಾಗಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ತುರ್ತು ರಸ್ತೆ ಕಾಮಗಾರಿ ಮಾಡದಿದ್ದರೆ ಶಾಲೆ ಬಂದ್‌ ಮಾಡಿ ರಸ್ತೆ ಚಳವಳಿ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.

ಸಣ್ಣ ವಾಹನ ಬಂದರೂ ಇಡೀ ರಸ್ತೆ ದೂಳು ಶಾಲೆಯೊಳಗೆ ನುಗ್ಗುತ್ತಿದೆ. ತ್ವರಿತವಾಗಿ ಕಾಮಗಾರಿ ಆರಂಭಿಸಲು ಮುಂದಾಗದಿದ್ದಲ್ಲಿ ರಸ್ತೆ ಚಳವಳಿ ಅನಿವಾರ್ಯವೆಂದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಸುಧಾರಾಣಿ ಗ್ರಾಮದಲ್ಲಿ ಪ್ರಸಿದ್ಧ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲವಿದ್ದು, ನಿತ್ಯ ನೂರಾರು ಭಕ್ತರು ರಾಜ್ಯದ ವಿವಿಧೆಡೆಯಿಂದ ಬರುವುದುಂಟು. ಎಲ್ಲರಿಗೂ ಕಿರಿಕಿರಿಯುಂಟು ಮಾಡುತ್ತಿದೆ ಎಂದರು. ಮುಖಂಡರಾದ ಮಹದೇವಪ್ಪ, ರಾಘವೇಂದ್ರ, ರಾಜೇಶ್‌, ಪ್ರಕಾಶ್‌, ಈರಪ್ಪ, ರವಿ, ಲತಾ, ದಿವ್ಯಾ, ಶೈಲಜಾ ಮತ್ತಿತರರಿದ್ದರು.

ವಿದ್ಯುತ್‌ ಕಂಬದ ಬದಲಾವಣೆಗೆ ಸಮಸ್ಯೆಯಾಗಿ ಕಾಮಗಾರಿ ವಿಳಂಬವಾಗಿದೆ. ಶೀಘ್ರ ಕಾಮಗಾರಿ ಮಾಡಲು ಹಾಗೂ ತಾತ್ಕಾಲಿಕವಾಗಿ ರಸ್ತೆ ದೂಳು ಬಾರದಂತೆ ರಸ್ತೆಗೆ ಟ್ಯಾಂಕರ್‌ ಮೂಲಕ ನೀರು ಸಿಂಪಡಿಸಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ. – ಪುಟ್ಟರಾಜು, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.