ಪಾರದರ್ಶಕ ಚುನಾವಣೆಗೆ ಎಲ್ಲರೂ ಶ್ರಮಿಸಿ


Team Udayavani, Nov 23, 2020, 5:46 PM IST

ಪಾರದರ್ಶಕ ಚುನಾವಣೆಗೆ ಎಲ್ಲರೂ ಶ್ರಮಿಸಿ

ಮಂಡ್ಯ: ಪಾರದರ್ಶಕ ಚುನಾವಣೆಗೆ ಬಿಎಲ್‌ಒಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಗ್ರಾಮಮಟ್ಟದ ಕಣ್ಣು, ಕಿವಿಯಾಗಿರುವ ಬಿಎಲ್‌ಒಗಳು ಚುರುಕಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಡೀಸಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಡಾ.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಉಪವಿಭಾಗಾಧಿಕಾರಿಗಳ ಕಚೇರಿ, ತಾಲೂಕುದಂಡಾಧಿಕಾರಿಗಳ ಕಚೇರಿಯಿಂದ ನಡೆದ ಮತಗಟ್ಟೆಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ವಿಶ್ವದಲ್ಲೇ ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. 75 ವರ್ಷದಿಂದ ಭಾರತ ಪ್ರಜಾಪ್ರಭುತ್ವ ಸ್ಥಿರವಾಗಿದೆ ಎಂದರೆ ಅದಕ್ಕೆ ಕಾರಣ ಕಾಲಕಾಲಕ್ಕೆನಡೆಯುತ್ತಿರುವ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾದ ಚುನಾವಣೆ ಎಂದರು.

ದೋಷರಹಿತ ಮತದಾರರ ಪಟ್ಟಿ ಅವಶ್ಯ: ಪಾರದರ್ಶಕವಾದ ಚುನಾವಣೆ ನಡೆಯಬೇಕಾದರೆ ಪರಿಶುದ್ಧ, ದೋಷ ರಹಿತ ಮತದಾರರ ಪಟ್ಟಿ ಅವಶ್ಯ. ಮತದಾರರ ಪಟ್ಟಿ ತಯಾರಿಸುವ ಜವಾಬ್ದಾರಿಯುತ ಕೆಲಸವನ್ನು ಇಆರ್‌ಒ ಮತ್ತು ಎಆರ್‌ಒಗಳು, ಗ್ರಾಮ ಮಟ್ಟದಲ್ಲಿ ಬಿಎಲ್‌ಒಗಳ ಕಾರ್ಯವಾಗಿದೆ. ಯಾರು ದಕ್ಷತೆಯಿಂದ, ನಿಷ್ಪಕ್ಷಪಾತ, ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಾರೋ ಅವರಿಗೆ ಮಾತ್ರ ಸಂವಿಧಾನಾತ್ಮಕ ಹುದ್ದೆಯನ್ನು ಸರ್ಕಾರ ನೀಡುತ್ತದೆ. ಜವಾಬ್ದಾರಿಯುತ ಕೆಲಸವನ್ನು ಬಿಎಲ್‌ಒಗಳು ನಿಭಾಯಿಸಬೇಕು ಎಂದು ಹೇಳಿದರು.

ನಕಲಿ ಮತದಾರರಿಗೆ ಅವಕಾಶ ಬೇಡ: ನಮೂನೆ-6ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆ ಕಾಲಾನುಕಾಲಕ್ಕೆ ಸಮರ್ಪಕವಾಗಿದ್ದರೆ ಮತದಾರರ ಪಟ್ಟಿ ಪರೀಕ್ಷಿತಗೊಳಿಸಲು ಮತ್ತು ದೋಷ ರಹಿತಗೊಳಿಸಲು ಸಾಧ್ಯವಿದೆ. ಬಿಎಲ್‌ಒಗಳು ಚುನಾವಣಾ ಆಯೋಗ ನೀಡುವ ನಿರ್ದೇಶನ, ಜವಾಬ್ದಾರಿಗಳನ್ನು ಕಾಲಕಾಲಕ್ಕೆ ತಿಳಿದುಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಮರಣ ಹೊಂದಿದ ವ್ಯಕ್ತಿಗಳ ಪಟ್ಟಿಯನ್ನು ತೆಗೆದುಕೊಂಡು ನಮೂನೆ-17ರಲ್ಲಿ ಅವರನ್ನು ಮತದಾರರ ಪಟ್ಟಿಯಿಂದ ರದ್ದುಗೊಳಿಸಬೇಕು. ಇಲ್ಲದಿದ ªರೆ ನಕಲಿ ಮತದಾರರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದಕ್ಕೆ ಬಿಎಲ್‌ ಒಗಳು ಅನುವು ಮಾಡಿಕೊಡಬಾರದು ಎಂದು ಹೇಳಿದರು.

ಎರಡು ಕಡೆ ಹೆಸರಿದ್ದರೆ ಅಪರಾಧ: ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಸೆಕ್ಷನ್‌ ಐಪಿಸಿ 180, 189, 190ರಂತೆ ಮತಪಟ್ಟಿಯಲ್ಲಿ ಎರಡು ಕಡೆ ಹೆಸರಿದ್ದರೆ ಅಪರಾಧ.6ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಿದೆ. ಆದ್ದರಿಂದ ಪುನರಾವರ್ತನೆಗೊಂಡಿರುವ ಮತದಾರರನ್ನು ತೆಗೆದು ಹಾಕಬೇಕು. ಮತದಾರರ ಪಟ್ಟಿಯಲ್ಲಿ ಕೆಲವು ವ್ಯಕ್ತಿಗಳ ಭಾವಚಿತ್ರ, ಹೆಸರಿನ ಅಕ್ಷರ ದೋಷ, ವಯಸ್ಸು ಮತ್ತು ಲಿಂಗ, ತಪ್ಪಾಗಿರುವುದರಿಂದ ಅವುಗಳನ್ನು ಸರಿಪಡಿಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸ್ಪೀಕಿಂಗ್‌ ಆರ್ಡರ್‌ ಮಾಡಿ: ವಿಶೇಷ ನೋಂದಣಿ ಪ್ರಕ್ರಿಯೆಯು ನಡೆಯುತ್ತಿದ್ದು, ನ.18ರಂದು ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಕಾಲಾವಕಾಶವಿದ್ದು, ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿ ಅಲ್ಲಿ ಸ್ಪೀಕಿಂಗ್‌ ಆರ್ಡರ್‌ ಮಾಡಬೇಕು. ದೋಷ ರಹಿತವಾದ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲು 2021ರ ಜ.14 ಕೊನೆ ದಿನ. ಅಂತಿಮ ಪಟ್ಟಿಯನ್ನು 18ರಂದು ಪ್ರಚುರಪಡಿಸಲಾಗುವುದುಎಂದರು. ಗರುಡು ಆ್ಯಪ್‌ ಅನ್ನು ಬಿಡುಗಡೆಮಾಡಲಾಯಿತು. ಉಪವಿಭಾಗಾಧಿಕಾರಿ ನೇಹಾಜೈನ್‌, ನಗರಸಭೆ ಆಯುಕ್ತ ಲೋಕೇಶ್‌, ತಹಶೀಲ್ದಾರ್‌ ಚಂದ್ರಶೇಖರ್‌ ಶಂ.ಗಾಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.