![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Mar 25, 2024, 9:39 PM IST
ಮಂಡ್ಯ: ತಾಲೂಕಿನ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ತಮಿಳುನಾಡು ಮೂಲದ ರಮೇಶ್ (67) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ನಾಗಲಿಂಗ ಹಾಗೂ ಮತ್ತೊಬ್ಬ ಕಾರ್ಮಿಕರನ್ನು ಮಂಡ್ಯದ ಮಿಮ್ಸ್ಗೆ ದಾಖಲಿಸಲಾಗಿದೆ.
ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದವರಿಗೆ ನೀಡಲಾಗಿತ್ತು. ಅದರಂತೆ ನಾಲ್ವರು 15 ದಿನಗಳ ಹಿಂದೆ ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ರವಿವಾರ ರಾತ್ರಿ ಹಬ್ಬ ಮುಗಿದಿತ್ತು. ಆದರೆ ಸೋಮವಾರ ಬೆಳಗ್ಗೆ ಮತ್ತೂಂದು ಗ್ರಾಮದ ಹಬ್ಬಕ್ಕಾಗಿ ಪಟಾಕಿಗೆ ಮದ್ದು ತುಂಬುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆಯ ಹಂಚುಗಳು ಹಾರಿ ಹೋಗಿವೆ.
You seem to have an Ad Blocker on.
To continue reading, please turn it off or whitelist Udayavani.