ಜೆಸಿಬಿ ಚಾಲಕನನ್ನು ಥಳಿಸಿದ ಮಾಜಿ ಶಾಸಕ


Team Udayavani, Jul 10, 2020, 5:41 AM IST

jcb drive

ಶ್ರೀರಂಗಪಟ್ಟಣ: ಮಹಿಳೆಯೊಬ್ಬರು ಅಂಗಡಿಯೊಳಗೆ ಕುಳಿತಿದ್ದಾಗಲೇ ಜೆಸಿಬಿ ಚಾಲಕ ಅಂಗಡಿ ತೆರವುಗೊಳಿಸಲು ಯತ್ನಿಸಿದ ಎಂಬ ಕಾರಣಕ್ಕೆ ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಜೆಸಿಬಿ ಚಾಲಕನನ್ನು ಥಳಿಸಿದ ಘಟನೆ  ಗುರುವಾರ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುಖ್ಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ರಸ್ತೆಗೆ ಬದಿಯ ಪ್ರಯಾಣಿಕರ ತಂಗುದಾಣ ಮತ್ತು ಗ್ರಾಪಂಗೆ ಸೇರಿದ ಅಂಗಡಿ ಮಳಿಗೆಗಳನ್ನು ತೆರವು ಮಾಡಿಸುವ ವೇಳೆ ಈ  ಘಟನೆ ನಡೆಯಿತು.

ವಿರೋಧವನ್ನೂ ಲೆಕ್ಕಿಸದ ಚಾಲಕ: ಗ್ರಾಪಂನಿಂದ ಮಳಿಗೆಯನ್ನು ಬಾಡಿಗೆಗೆ ಪಡೆದು ಟೈಲರಿಂಗ್‌ ಅಂಗಡಿ ನಡೆಸುತ್ತಿದ್ದ ಎ.ಎನ್‌. ಸುಮಾ ಅವರ ವಿರೋಧವನ್ನೂ ಲೆಕ್ಕಿಸದೆ ಜೆಸಿಬಿ ಚಾಲಕ ನಾಗಚಂದ್ರ ಅಂಗಡಿ ತೆರವಿಗೆ  ಮುಂದಾಗಿದ್ದಾರೆ. ಮಹಿಳೆ ಇದ್ದರೂ ಜೆಸಿಬಿ ಕಾರ್ಯ ನಡೆಸಿದ್ದರಿಂದ ತಾಳ್ಮೆ ಕಳೆದುಕೊಂಡ ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಚಾಲಕ ನಾಗಚಂದ್ರ ಅವರಿಗೆ ಥಳಿಸಿದ್ದಾರೆ. ತಂಗುದಾಣ ತೆರವಿಗೆ ಮಾಜಿ ಶಾಸಕರು ವಿರೋಧ  ವ್ಯಕ್ತಪಡಿಸಿದರು.

ಮನವೊಲಿಸುವ ಯತ್ನ: ತಹಶೀಲ್ದಾರ್‌ ಎಂ.ವಿ. ರೂಪಾ, ಎಎಸ್‌ಪಿ ಶೋಭಾರಾಣಿ, ಲೋಕೋಪಯೋಗಿ ಇಲಾಖೆ ಎಇಇ ಮಹೇಶ್‌, ತಾಪಂ ಇಒ ನಾಗವೇಣಿ ಜನರ ಮನವೊಲಿಸುವ ಯತ್ನ ನಡೆಸಿದರು. ಪೊಲೀಸರ ರಕ್ಷಣೆಯಿಂದ ರಸ್ತೆ  ಬದಿಯ ಕೆಲವು ಅಂಗಡಿ ತೆರವು ಮಾಡಲಾಯಿತು. ಆದರೆ, ಗ್ರಾಪಂಗೆ ಸೇರಿದ ಮಳಿಗೆ ತೆರವಿಗೆ ವಿರೋಧಿಸಿದರು. ಶಾಸಕ ರವೀಂದ್ರ ಶ್ರೀಕಂಠಯ್ಯ ರಸ್ತೆ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಜನರ ಹಿತ ಮರೆತು ಬಡವರನ್ನು  ಬೀದಿಗೆ ತಳ್ಳಿ ರಸ್ತೆ ಮಾಡಿದರೆ ಏನು ಪ್ರಯೋಜನ? ಇದು ಜನವಿರೋಧಿಯಾಗಿದೆ ಎಂದು ತಾಪಂ ಸದಸ್ಯ ಸಂತೋಷ್‌, ಗ್ರಾಪಂ ಅಧ್ಯಕ್ಷೆ ಜಯಂತಿ ಕೃಷ್ಣೇಗೌಡ ಪ್ರಶ್ನಿಸಿದರು.

ಠಾಣೆಯಲ್ಲಿ ದೂರು: ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ, ತಾಪಂ ಸದಸ್ಯ ಸಂತೋಷ್‌, ಕಾಂಗ್ರೆಸ್‌ ಮುಖಂಡ ಶಶಾಂಕ್‌ ವಿರುದ ಲೋಕೋಪಯೋಗಿ ಇಲಾಖೆ ಎಇಇ ಮಹೇಶ್‌ ಅರಕೆರೆ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ  ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಜೆಸಿಬಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದಟಛಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರತಿ ದೂರು: ಅಂಗಡಿ ಬಾಡಿಗೆ ಪಡೆದಿದ್ದ ಸುಮಾ ಅವರು ಲೋಕೋಪಯೋಗಿ ಇಲಾಖೆ ಎಇಇ ಮಹೇಶ್‌, ಎಇ ರೇವಣ್ಣ ಮತ್ತು ಜೆಸಿಬಿ ಚಾಲಕನ ವಿರುದಟಛಿ ಪ್ರತಿ ದೂರು ನೀಡಿದ್ದಾರೆ.

ಮಾಜಿ ಶಾಸಕ ಬಂಧನ, ಬಿಡುಗಡೆ: ಶ್ರೀರಂಗಪಟ್ಟಣದ ಅರಕೆರೆ ಗ್ರಾಮದಲ್ಲಿ ಜೆಸಿಬಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌರರ ವಿರುದಟಛಿ ಪಿಡಬ್ಲೂಡಿ ಎಇಇ ಮಹೇಶ್‌ ದೂರು  ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ರಮೇಶ್‌ ಬಂಡಿ ಸಿದ್ದೇಗೌಡರನ್ನು ಬಂಧಿಸಿದ ಪೊಲೀಸರು, ಪಟ್ಟಣದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.