![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 2, 2024, 6:13 PM IST
ಮಂಡ್ಯ: ಸಾಲ ಮಂಜೂರಾತಿ ಹೆಸರಿನಲ್ಲಿ ಯುವಕನೊಬ್ಬನಿಂದ 75 ಸಾವಿರ ರೂ.ಗಳನ್ನು ಆನ್ಲೈನ್ ಮೂಲಕ ಪಡೆದು ವಂಚಿಸಿರುವ ಘಟನೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲ್ಲೂಕಿನ ಮೊಳೇದೊಡ್ಡಿ ಗ್ರಾಮದ ಜಿ.ಎಸ್.ಶಿವಕುಮಾರ್ ವಂಚನೆಗೊಳಗಿರುವ ಯುವಕ. ಎರಡು ದಿನಗಳ ಹಿಂದೆ ಮೊ.8276916158 ಮತ್ತು 8981345726 ನಂಬರ್ ಗಳಿಂದ ಶಿವಕುಮಾರ್ ಅವರಿಗೆ ಮನೋಜ್ ರೆಡ್ಡಿ ಹೆಸರಿನಲ್ಲಿ ವ್ಯಕ್ತಿಯೊಬ್ಬ ಕರೆ ಮಾಡಿ ನಿಮಗೆ 2 ಲಕ್ಷ ಸಾಲ ಮಂಜೂರಾಗಿದೆ. ನೀವು ಸ್ಪಲ್ಪ ಹಣ ಪಾವತಿ ಮಾಡಬೇಕು ಎಂದು 5000, 2000, 7500, 25500, 11838 ರೂ.ಸೇರಿದಂತೆ ಅನೇಕ ಬಾರಿ ಹಂತ ಹಂತವಾಗಿ ಸುಮಾರು 75000 ರೂ.ಗಳನ್ನು ಆನ್ ಲೈನ್ ಮೂಲಕ ಪಾವತಿ ಮಾಡಿಸಿಕೊಂಡಿದ್ದಾರೆ. ನಂತರ ಮತ್ತಷ್ಟು ಹಣ ಹಾಕುವಂತೆ ಒತ್ತಾಯಿಸಿದಾಗ ಅನುಮಾನಗೊಂಡು ಜಿ.ಎಸ್. ಶಿವಕುಮಾರ್ ಆ ನಂಬರ್ ಗಳಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ್ದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶನಿವಾರ ದೂರು ನೀಡಿದ್ದಾರೆ.
ಇದನ್ನೂ ಓದಿ: Sindhanur: ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿಗೆ ಎಂಎಲ್ಸಿ ಟಿಕೆಟ್
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.