Fraud: 25 ಕೋಟಿ ಕೊಡುವೆ ಎಂದು 1.1 ಕೋಟಿ ರೂ. ದೋಚಿದ!


Team Udayavani, Jan 24, 2024, 3:34 PM IST

Fraud: 25 ಕೋಟಿ ಕೊಡುವೆ ಎಂದು 1.1 ಕೋಟಿ ರೂ. ದೋಚಿದ!

ಮಂಡ್ಯ: ಒಂದು ಕೋಟಿ ರೂ. ಕೊಟ್ಟರೆ ಅದಕ್ಕೆ ಪ್ರತಿಯಾಗಿ ನಿಮ್ಮ ಟ್ರಸ್ಟ್‌ಗೆ 25 ಕೋಟಿ ರೂ. ದೇಣಿಗೆ ನೀಡುತ್ತೇನೆ ಎಂದು ನಂಬಿಸಿದ ವಂಚಕನೊಬ್ಬ 1.1 ಕೋಟಿ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಶಿಂಷಾಪುರದ ಕ್ರೆçಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿ ರು ವುದು ತಡವಾಗಿ ಬೆಳಕಿಗೆ ಬಂದಿದೆ.ಮಂಗ ಳೂರಿನ ಸೂರ್ಯ ಎಂಬಾತ ವಂಚನೆ ಮಾಡಿರುವ ಆರೋಪಿಯಾಗಿದ್ದು, ಈತನ ವಿರುದ್ಧ ಬೆಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಿಂದ ಬಂದಿದ್ದ ಮೇರಿನ್‌ ಪಿಂಟೋ ಅವರು ಮಳವಳ್ಳಿ ತಾಲೂಕಿನ ಶಿಂಷಾಪುರದಲ್ಲಿ ಕಳೆದ 10 ವರ್ಷಗಳಿಂದ ಶ್ಯಾಲೋಮ್‌ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌ ಸ್ಥಾಪಿಸಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದರು. ಸಂಸ್ಥೆಗೆ ಹತ್ತಿರವಾಗಿದ್ದ ಸ್ವಾಮೀಜಿ ಯೊಬ್ಬರು ತಮಗೆ ಪರಿಚಿತವಿರುವ ಸೂರ್ಯ ಎಂಬ ವ್ಯಕ್ತಿಯನ್ನು ಪರಿಚಯಿಸಿ ನಿಮ್ಮ ಟ್ರಸ್ಟ್‌ಗೆ ಏನಾದರೂ ಸಹಾಯ ಅಗತ್ಯವಿದ್ದಲ್ಲಿ ಇವರು ನಿಮಗೆ ನೆರವಾಗುತ್ತಾರೆ ಎಂದು ತಿಳಿಸಿದ್ದರು. ಸ್ವಾಮೀಜಿ ಹೇಳಿದ ಮಾತನ್ನು ನಂಬಿ ಪರಿಚಿತನಾದ ವ್ಯಕ್ತಿಯಿಂದ ಸ್ಥಳೀಯವಾಗಿ ಸಣ್ಣಪುಟ್ಟ ಸಹಾಯವನ್ನು ಪಡೆದುಕೊಂಡಿದ್ದಾರೆ. ನಂತರ, ಶಿಕ್ಷಣ ಸಂಸ್ಥೆ ದೊಡ್ಡದಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಸೂರ್ಯನ ಬಳಿ ಹೇಳಿಕೊಂಡಿದ್ದಾರೆ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೂರ್ಯ, “ನಿಮಗೆ ನಾನು ದಾನಿಗಳಿಂದ 25 ಕೋಟಿ ರೂ. ದೇಣಿಗೆ ಕೊಡಿಸುತ್ತೇನೆ. ಆದರೆ, ನೀವು ನನಗೆ 1 ಕೋಟಿ ರೂ. ಹಣ ನೀಡಬೇಕು’ ಎಂದು ಪುಸಲಾಯಿಸಿದ್ದಾನೆ. ಈತನ ಮಾತು ನಂಬಿದ ಟ್ರಸ್ಟ್‌ನ ಖಜಾಂಚಿ ಮೇರಿ, ಅಧ್ಯಕ್ಷೆ ಮೇರಿನೋ ಪಿಂಟೋ, ಕಾರ್ಯದರ್ಶಿ ಎಂಎಲ್ಡಾ ಪಿಂಟೋ ಸೇರಿದಂತೆ ಸದಸ್ಯರು ಸಭೆ ನಡೆಸಿ ದಾನಿಗಳಿಂದ ಒಂದು ಕೋಟಿ ರೂ. ಹಣವನ್ನು ಸಾಲದ ರೂಪದಲ್ಲಿ ಪಡೆದು 25 ಕೋಟಿ ರೂ. ಬಂದ ನಂತರ ಸಾಲ ವಾಪಸ್‌ ನೀಡುವ ಬಗ್ಗೆ ಚರ್ಚೆ ನಡೆಸಿದ್ದರು.

ಅದರಂತೆ ದಾನಿಗಳಿಂದ 1.10 ಕೋಟಿ ರೂ. ಹಣ ಹೊಂದಿಸಿ, ಹಣ ಇರುವ ಬ್ಯಾಗ್‌ನ ಫೋಟೋ ತೆಗೆದು ಸೂರ್ಯನಿಗೆ ಕಳುಹಿಸಿದ್ದಾರೆ. ಬಳಿಕ ಜ.20ರಂದು ಸೂರ್ಯನಿಗೆ ಬರುವಂತೆ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಂಚಕ ಸೂರ್ಯ “ಸಣ್ಣ ಕಾರ್ಯಕ್ರಮ ಇಟ್ಟುಕೊಳ್ಳಿ, ನಾನು ಮತ್ತು ನನ್ನ ಜೊತೆ 25 ಮಂದಿ ಬರುತ್ತೇವೆ’ ಎಂದು ತಿಳಿಸಿದ್ದಾನೆ. ಆತನ ಮಾತು ನಂಬಿದ ಟ್ರಸ್ಟ್‌ನವರು ಶಿಂಷಾಪುರದಲ್ಲಿ ಎಲಿಜಬೆತ್‌ ಎಂಬುವರ ಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ.

ಜ.20ರಂದು ಟ್ರಸ್ಟಿ ಮನೆಗೆ ಹೋದ ಸೂರ್ಯ ಟ್ರಸ್ಟ್‌ ಖಜಾಂಚಿ ಮೇರಿ ಅವರು ಸಿದ್ಧಪಡಿಸಿದ್ದ 1 ಕೋಟಿ ರೂ. ಹಣ ಎಲ್ಲಿದೆ ಎಂದು ಕೇಳಿದ್ದಾನೆ. ಆಗ ಅವರು ಹಣವನ್ನು ತೋರಿಸಿದ್ದಾರೆ.

ಇನ್ನು ಸೂರ್ಯ ಕೂಡ ಕಾರಿನಲ್ಲಿ ತಂದಿದ್ದ ಒಂದು ಪ್ಲಾಸ್ಟಿಕ್‌ ಚೀಲವನ್ನು ತಂದು ಇದರಲ್ಲಿ 25 ಕೋಟಿ ರೂ. ಹಣವಿದೆ ಎಂದು ಇಟ್ಟಿದ್ದಾರೆ. ನಂತರ ಸೂರ್ಯ ತಾನು ತಂದಿದ್ದ ಜ್ಯೂಸ್‌ ಅನ್ನು ನನಗೆ ಹಾಗೂ ಅಧ್ಯಕ್ಷರಿಗೆ ಕುಡಿಯಲು ಕೊಟ್ಟರು. ಜ್ಯೂಸ್‌ ಕುಡಿದ ನಂತರ ನಾವು ಪ್ರಜ್ಞೆ ತಪ್ಪಿದೆವು. ನಂತರ ಸಂಜೆ 4 ಗಂಟೆಗೆ ಎಚ್ಚರಗೊಂಡಾಗ ಪಕ್ಕದಲ್ಲಿದ್ದ ಸೂರ್ಯ ಅಲ್ಲಿರಲಿಲ್ಲ. ಅಲ್ಲದೆ, ರೂಮಿನಲ್ಲಿದ್ದ 1.10 ಕೋಟಿ ರೂ. ಹಣವೂ ಇರಲಿಲ್ಲ. ಆಗ ಸೂರ್ಯ ತಂದಿದ್ದ ಚೀಲವನ್ನು ಬಿಚ್ಚಿ ನೋಡಿದಾಗ ಬಿಳಿ ಪೇಪರ್‌ ಬಂಡಲ್‌ಗ‌ಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಳಿಕ ತಾವು ಮೋಸ ಹೋಗಿರುವುದಾಗಿ ಎಚ್ಚೆತ್ತುಕೊಂಡ ಖಜಾಂಚಿ ಮೇರಿ ಅವರು ಸ್ಥಳೀಯ ಬೆಳಕವಾಡಿ ಠಾಣೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಂಚಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜ್ಯೂಸ್‌ ಕುಡಿಸಿ ಪ್ರಜ್ಞೆ ತಪ್ಪಿಸಿ ಹಣ ಪಡೆದು ಪರಾರಿ!:

ಮಳವಳ್ಳಿಯಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದ ಕ್ರೈಸ್ತ ಸಂಸ್ಥೆಯಾದ ಶ್ಯಾಲೋಮ್‌ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌ಗೆ ವಂಚಕ ಸೂರ್ಯ ಎಂಬಾತ ಪರಿಚಯವಾಗಿದ್ದ. ಈತನ ಟ್ರಸ್ಟ್‌ಗೆ ಸಣ್ಣಪಟ್ಟ ಸಹಾಯ ಮಾಡಿಕೊಟ್ಟು ನಂಬಿಕೆ ಉಳಿಸಿಕೊಂಡಿದ್ದ. ಈ ನಡುವೆ, ಶಿಕ್ಷಣ ಸಂಸ್ಥೆಯನ್ನು ದೊಡ್ಡಮಟ್ಟದಲ್ಲಿ ಬೆಳೆಸುವುದಾಗಿ ಟ್ರಸ್ಟ್‌ನವರು ಈತನ ಬಳಿ ಚರ್ಚಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕ ಸೂರ್ಯ, “ನೀವು ನನಗೆ 1 ಕೋಟಿ ರೂ. ಕೊಟ್ಟರೆ ಅದಕ್ಕೆ ಪ್ರತಿಯಾಗಿ ನಾನು ದಾನಿಗಳಿಂದ 25 ಕೋಟಿ ರೂ.ಕೊಡುತ್ತೇನೆ’ ಎಂದು ನಂಬಿಸಿದ್ದ. ಅದರಂತೆ ಟ್ರಸ್ಟ್‌ನವರು 1.10 ಕೋಟಿ ರೂ. ಸಿದ್ಧಪಡಿಸಿಕೊಂಡು  ಜ.20ರಂದು ಸಣ್ಣ ಕಾರ್ಯಕ್ರಮ ಆಯೋಜಿಸಿ ಸೂರ್ಯನನ್ನು ಕರೆಸಿಕೊಂಡಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ಸೂರ್ಯ, ತಾನು ಮೊದಲೇ ಯೋಚಿಸಿದಂತೆ ತಂದಿದ್ದ ಮತ್ತು ಬರುವ ಜ್ಯೂಸ್‌ ಅನ್ನು ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಖಜಾಂಚಿಗೆ ಕುಡಿಸಿದ್ದಾನೆ. ಇವರು ಪ್ರಜ್ಞೆ ತಪ್ಪಿದಾಗ, 1.10 ಕೋಟಿ ರೂ. ಇದ್ದ ಬ್ಯಾಗನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.