ಮನೆ ಬಾಗಿಲಿಗೇ ಆರೋಗ್ಯ ಸೇವೆ; ಸದ್ಬಳಕೆ ಮಾಡಿಕೊಳ್ಳಿ


Team Udayavani, Mar 21, 2022, 3:53 PM IST

ಮನೆ ಬಾಗಿಲಿಗೇ ಆರೋಗ್ಯ ಸೇವೆ; ಸದ್ಬಳಕೆ ಮಾಡಿಕೊಳ್ಳಿ

ಮಂಡ್ಯ: ಮನೆ ಬಾಗಿಲಿಗೆ ಬಂದ ಆರೋಗ್ಯ ಸೇವೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಐದು ರೂ. ವೈದ್ಯ ಎಂದು ಖ್ಯಾತಿ ಪಡೆದಿರುವ ಚರ್ಮರೋಗ ತಜ್ಞ ಡಾ.ಎಸ್‌.ಸಿ. ಶಂಕರೇಗೌಡ ಸಲಹೆ ನೀಡಿದರು.

ತಾಲೂಕಿನ ಬಿ.ಗೌಡಗೆರೆ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಶ್ರೀಕಾಲಭೈರವೇಶ್ವರ ಜನಸ್ನೇಹಿ ಟ್ರಸ್ಟ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಸೇರಿ ಹಲವು ಸಂಘ ಸಂಸ್ಥೆಗಳು ಜನರ ಆರೋಗ್ಯದ ದೃಷ್ಟಿಯಿಂದ ಶಿಬಿರಗಳನ್ನು ಏರ್ಪಡಿಸುತ್ತವೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ಎಲ್ಲಿ ಉತ್ತಮ ಪರಿಸರ ಇರುತ್ತೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳುವುದನ್ನು ಮೊದಲು ಕಲಿಯಬೇಕು. ಶಾಲಾ ಆವರಣವನ್ನು ಶುಚಿಯಾಗಿಡಬೇಕು. ಅಲ್ಲಿ ಮಕ್ಕಳು ಕಲಿಯುತ್ತಾರೆ ಎಂಬ ಅರಿವು ನಮಗಿರಬೇಕು ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ: 40 ವರ್ಷಗಳಲ್ಲಿ ಕಂಡಿರದ ಆರೋಗ್ಯ ಸಂಕಷ್ಟ ಪರಿಸ್ಥಿತಿಯನ್ನು ಈ ಎರಡೂವರೆ ವರ್ಷಗಳಲ್ಲಿ ನೋಡಿದ್ದೇವೆ. ದೇಶದ ಅಭಿವೃದ್ಧಿಗೆ ಕೋವಿಡ್‌ ಮಾರಕವಾಗಿತ್ತು. ಅದನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿವೆ. ದೊಡ್ಡ ನಗರಗಳಿಗಷ್ಟೇ ಅಲ್ಲದೆ, ಗ್ರಾಮೀಣ, ಸಣ್ಣ ಪುಟ್ಟ ಪಟ್ಟಣ ಪ್ರದೇಶಗಳಲ್ಲಿ ವೈದ್ಯಕೀಯ ಕಾಲೇಜುಗಳ ಸ್ಥಾಪಿಸುತ್ತಿರುವುದು ಈ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.

ಜಾಗೃತಿ ಮೂಡಿಸುವುದು ಅವಶ್ಯಕ: ಸದೃಢ ಶರೀರ ಕಾಪಾಡಿಕೊಳ್ಳಬೇಕಾದರೆ ಮನಸ್ಥಿತಿ ಚೆನ್ನಾಗಿರಬೇಕು. ಕಾಯಿಲೆ ಬಂದಾಗ ಭಯ ಬಿಟ್ಟು ಸಮರ್ಪಕವಾಗಿ ವೈದ್ಯೋಪಚಾರ ಪಡೆದಲ್ಲಿ ಎಲ್ಲಾ ಕಾಯಿಲೆಗಳೂ ಗುಣವಾಗುತ್ತವೆ. ಸ್ವಯಂಪ್ರೇರಿತವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳೂ ಈ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕ ಎಂದು ಸಲಹೆ ನೀಡಿದರು.

ಸೂಕ್ತ ಚಿಕಿತ್ಸೆ ಪಡೆದ್ರೆ ಕ್ಯಾನ್ಸರ್‌ ವಾಸಿ ಆಗುತ್ತೆ: ಸೀನಿಯರ್‌ ಸರ್ಜನ್‌ ಡಾ.ಟಿ.ಎಚ್‌.ಆಂಜನಪ್ಪ ಮಾತನಾಡಿ, ಹಲವು ಹೆಣ್ಣು ಮಕ್ಕಳು ಗರ್ಭಕೋಶ, ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇವರು ಚಿಕಿತ್ಸೆ ಪಡೆಯುವುದಿಲ್ಲ. ದೇಶದಲ್ಲಿ ನಾಚಿಕೆ ಮತ್ತು ಭಯ ಈ ಎರಡು ಕಾರಣಗಳಿಂದಾಗಿ ಸಲಹೆ ಪಡೆಯುವುದಿಲ್ಲ. ಇದನ್ನು ಬಿಟ್ಟು ತಜ್ಞ ವೈದ್ಯರ ಸಲಹೆ ಪಡೆದಲ್ಲಿ ಕ್ಯಾನ್ಸರ್‌ ಅನ್ನು ವಾಸಿ ಮಾಡಬಹುದು ಎಂದು ಹೇಳಿದರು.

ಇಂದಿನ ದಿನಮಾನಗಳಲ್ಲಿ ಆರೋಗ್ಯ ಬಹಳ ಮುಖ್ಯವಾದದ್ದು. ಆರೋಗ್ಯವನ್ನು ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಗ್ರಾಮೀಣ ಜನರಿಗೆ ಅರಿವು ಮೂಡಿಸಿದರು.

ಗ್ರಾಪಂ ಅಧ್ಯಕ್ಷ ಬಿ.ಜೆ.ಮಹೇಶ್‌, ವೈದ್ಯರಾದ ಡಾ.ಜಿ.ಎಸ್‌.ಅನಿಲ್‌ಕುಮಾರ್‌, ಡಾ.ಜಿ.ಕೆ. ಕರುಣಾಕರ, ಡಾ.ಹರ್ಷವರ್ಧನ, ಡಾ.ಪ್ರಶಾಂತ್‌ ಸಿದ್ಮಲ್‌, ಡಾ.ಪ್ರಭಾ, ಡಾ.ಹೇಮಂತ್‌ಕುಮಾರ್‌, ಡಾ.ಅಭಿಷೇಕ್‌ಗೌಡ, ಕಾಲಭೈರವೇಶ್ವರ ಜನಸ್ನೇಹಿ ಟ್ರಸ್ಟ್‌ನ ಅಧ್ಯಕ್ಷ ಜಿ.ಟಿ.ಜಯಕುಮಾರ್‌, ಕಾರ್ಯದರ್ಶಿ ಜಿ.ಪಿ.ಚೇತನ್‌ಕುಮಾರ್‌, ಉಪಾಧ್ಯಕ್ಷ ಜಿ.ಪಿ. ಪ್ರಸನ್ನಕುಮಾರ್‌, ಮುಖಂಡರಾದ ಮಹೇಂದ್ರ ಗೌಡಗೆರೆ, ಶಶಿಕುಮಾರ್‌, ತಮ್ಮಣ್ಣ, ಟ್ರಸ್ಟ್‌ನ ಪದಾಧಿಕಾರಿಗಳು, ಗ್ರಾಮಸ್ಥರಿದ್ದರು

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.