ಸೂಳೆಕೆರೆ ಅಭಿವೃದ್ಧಿ ಕಾಮಗಾರಿಗೆ ಹಣ ಮಂಜೂರು


Team Udayavani, Feb 11, 2023, 1:27 PM IST

tdy-15

ಭಾರತೀನಗರ: ಇಲ್ಲಿಗೆ ಸಮೀಪದ ಮುಟ್ಟನಹಳ್ಳಿ ಬಳಿಯ ಸೂಳೆಕೆರೆ ದಕ್ಷಿಣ ನಾಲೆಯ ಅಕ್ವಡಕ್ಟ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಕಲ್ಪಿಸಲು ಶಾಸಕ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು.

ನಂತರ ಮಾತನಾಡಿ, ಕಳೆದ 4-5 ತಿಂಗಳ ಹಿಂದೆ ಸುರಿದ ಮಳೆಯಿಂದ ಸೂಳೆಕೆರೆ ಕೋಡಿ ಮತ್ತು ದಕ್ಷಿಣ ನಾಲೆ ಕೊಚ್ಚಿಹೋಗಿ ಕೆರೆ ಅಪಾಯ ಮಟ್ಟದಲ್ಲಿತ್ತು. ಕೆರೆ ಉಳಿಸುವ ದೃಷ್ಟಿಯಿಂದ ಸರ್ಕಾರ ಮಟ್ಟದಲ್ಲಿ ಹೋರಾಟ ನಡೆಸಿ, ಸೂಳೆಕೆರೆ ಅಭಿವೃದ್ಧಿಗೆ 98 ಲಕ್ಷ ಹಣ ಮಂಜೂರು ಮಾಡಿಸಿ, ದಕ್ಷಿಣ ನಾಲೆಯ ಅಕ್ವಡಕ್ಟ್ ಕಾಮಗಾರಿಗೆ 48 ಲಕ್ಷ ಸೂಳೆಕೆರೆ ಕೋಡಿ ಅಭಿವೃದ್ಧಿಗೆ 50 ಲಕ್ಷ ನೀಡುಯುವಂತೆ ಮಾಡಲಾಯಿತು ಎಂದರು.

ಈ ದಕ್ಷಿಣನಾಲೆ ಅಭಿವೃದ್ಧಿಯಿಂದ ಸುಮಾರು 3725 ಎಕರೆ ಅಚ್ಚುಕಟ್ಟು ಪ್ರದೇಶದ ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಕಾರ್ಕಹಳ್ಳಿ, ದೇವರಹಳ್ಳಿ, ಆಲಭುಜನಹಳ್ಳಿ, ಅಣ್ಣೂರು, ಕುರಿಕೆಂಪನದೊಡ್ಡಿ ಗ್ರಾಮಗಳಿಗೆ ನಿರೋದಗಿಸಿ, ರೈತರ ಬೆಳೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಸರ್ಕಾರದಿಂದ ಮಲತಾಯಿ ಧೋರಣೆ: ಸರ್ಕಾರ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡುತ್ತಿದ್ದಾರೆ ಹೊರತು, ಹಳೆ ಮೈಸೂರು ಭಾಗಕ್ಕೆ ಅನುದಾನ ಬಿಡುಗಡೆಗೊಳಿಸದೆ ರೈತರನ್ನು ವಂಚಿಸುತ್ತಿದ್ದಾರೆ. ವಿಶಾಲ ಕರ್ನಾಟಕ ಮನೊಭಾವನೆಯನ್ನು ತೋರದೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಸರ್ಕಾರ ಉತ್ತರ ಕರ್ನಾಟಕ ಭಾಗಕ್ಕೆ ಕ್ಯಾಬಿನೆಟ್‌ನಲ್ಲಿ ಒಂದೇ ಭಾರಿ 6 ಸಾವಿರ ಕೋಟಿಯನ್ನು ನೀರಾವರಿಗೆ ಮಂಜೂರು ಮಾಡಿದರು.

ಆದರೆ, ಮದ್ದೂರು ಕೆರೆ, ಸೂಳೆಕೆರೆಗೆ 550 ಕೋಟಿ ಬಿಡುಗಡೆಗೊಳಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದೆ. ಸಿಎಂ ಬಸವರಾಜು ಬೊಮ್ಮಾಯಿ ಅವರು ಹಣ ಬಿಡುಗಡೆಗೊಳಿಸುತ್ತಾರೆಂಬ ನಂಬಿಕೆ ಇತ್ತು. ಆದರೆ, ಆರ್ಥಿಕ ಸಲಹಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದ ಕಾರಣ, ಹಣಬಿಡುಗಡೆ ಗೊಳಿಸಿಲ್ಲ. ಹಳೆ ಮೈಸೂರು ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗಾಗಿ ಹೋರಾಟ: ಸರ್ಕಾರ ರೈತರನ್ನು ಉಳಿಸಬೇಕಾದರೆ ನೀರಾವರಿಗೆ ಆದ್ಯತೆ ನೀಡಬೇಕು. ಮದ್ದೂರು ಕೆಮ್ಮಣ್ಣು ಕೆರೆ ಮತ್ತು ಸೂಳೆಕೆರೆ ಈ ಎರಡು ಕೆರೆಗಳು ಈ ಭಾಗದ ರೈತರಿಗೆ ಮಿನಿ ಅಣೆಕಟ್ಟೆ ಇದ್ದಂತೆ. ಕೆಆರ್‌ಎಸ್‌ ಅಣೆಕಟ್ಟೆ ಬಿಟ್ಟರೆ ಇದು ರೈತರಿಗೆ ಎರಡನೇ ಅಣೆಕಟ್ಟೆ ಇದಾಗಿದೆ. ಹೀಗಾಗಿ, ಈ ಎರಡು ಕೆರೆ ಮತ್ತು ನಾಲೆ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲದಿದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಗುರುದೇವರಹಳ್ಳಿ ಅರವಿಂದ್‌, ಎಇಇ ಪ್ರಶಾಂತ್‌, ಎಇ ಅವಿನಾಶ್‌, ಶೀಲ, ಮುಖಂಡರಾದ ಎಂ.ಕೆ. ವೀರಯ್ಯ, ಎಂ.ಕೆ.ಚಂದ್ರಶೇಖರ್‌, ಎಂ.ಸಿ.ವೀರಯ್ಯ, ಎಂ.ಸಿ.ಚಂದ್ರಶೇಖರ್‌, ಯತೀಶ, ಎಂ.ಡಿ.ನಾಗರಾಜು, ಪ್ರಶಾಂತ್‌, ಯಜಮಾನ್‌ ಪುಟ್ಟಸ್ವಾಮಿ, ಶಿವಲಿಂಗ, ರವಿ. ಶಿವಕುಮಾರ್‌, ಕಿಶೋರ್‌, ಪುಟ್ಟಸ್ವಾಮಿ, ಸಣ್ಣೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.