ಹಳ್ಳಿಫೈಟ್ ‌: ಮಹಿಳಾ ಮತದಾರರೇ ಹೆಚ್ಚು


Team Udayavani, Dec 18, 2020, 7:49 PM IST

hv-tdy-1

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ   ಪಂಚಾಯಿತಿ ಚುನಾವಣೆಯಲ್ಲಿ ಮಹಿಳಾ ಮತದಾರರೇ ಹೆಚ್ಚಿದ್ದು, ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕಳೆದ ಬಾರಿಯ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಹಕ್ಕು ಚಲಾಯಿಸುವಮೂಲಕ ಸಂಸದೆ ಸುಮಲತಾ ಅಂಬರೀಶ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಂತೆ ಜಿಲ್ಲೆಯ 230 ಗ್ರಾಪಂಗಳಲ್ಲಿ ಚುನಾವಣೆಯ ನಡೆಯುತ್ತಿದ್ದು,ಮಹಿಳಾ ಮತದಾರರು ಹೆಚ್ಚಾಗಿದ್ದು,ನಾಲ್ಕು ತಾಲೂಕುಗಳಲ್ಲಿ ಪುರುಷ ಮತದಾರರಿಗಿಂತ ಹೆಚ್ಚಿದ್ದಾರೆ.

12.47 ಲಕ್ಷ ಮತದಾರರು: ಗ್ರಾಮೀಣ ಭಾಗಕ್ಕೆ ಸೀಮಿತವಾಗಿರುವ ಚುನಾವಣೆಯಲ್ಲಿ12,47,466 ಮತದಾರರಿದ್ದಾರೆ. ಇದರಲ್ಲಿಮಂಡ್ಯ, ಮದ್ದೂರು, ಪಾಂಡವಪುರ ಹಾಗೂಶ್ರೀರಂಗಪಟ್ಟಣ ತಾಲೂಕಿನಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ.ಮಂಡ್ಯ ತಾಲೂಕಿನಲ್ಲಿ 1,16,990ಮಹಿಳೆಯರು, 1,16,001 ಪುರುಷರು,ಮದ್ದೂರಿನಲ್ಲಿ 1,15,699 ಮಹಿಳೆಯರು, 1,12,762 ಪುರುಷರು, ಪಾಂಡವಪುರದಲ್ಲಿ64,346 ಮಹಿಳೆಯರು, 54,252ಪುರುಷರು ಹಾಗೂ ಶ್ರೀರಂಗಪಟ್ಟಣದಲ್ಲಿ 63,660 ಪುರುಷರು, 62,620ಪುರುಷ ಮತದಾರರಿದ್ದಾರೆ. 94 ಮಂಗಳಮುಖೀ ಹಕ್ಕು ಹೊಂದಿದ್ದಾರೆ.

ಇನ್ನುಳಿದಂತೆ ಮಳವಳ್ಳಿ ತಾಲೂಕಿನಲ್ಲಿ 1,04,521 ಪುರುಷರು, 1,01,815 ಮಹಿಳೆಯರು, ಕೆ.ಆರ್‌.ಪೇಟೆತಾಲೂಕಿನಲ್ಲಿ 94,943 ಪುರುಷರು, 92,431 ಮಹಿಳೆಯರು ಹಾಗೂ ನಾಗಮಂಗಲತಾಲೂಕಿನಲ್ಲಿ 69,184 ಪುರುಷರು, 68,148 ಮಹಿಳಾ ಮತದಾರರಿದ್ದಾರೆ.

ಬಹುತೇಕ ಮಹಿಳಾ ಅಭ್ಯರ್ಥಿಗಳಿಗೆ ಗ್ಯಾಸ್‌ ಚಿಹ್ನೆ: ಜಿಲ್ಲೆಯಲ್ಲಿ ಸ್ಪರ್ಧಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಬಹುತೇಕ ಗ್ಯಾಸ್‌ ಸಿಲಿಂಡರ್‌, ಕುಕ್ಕರ್‌, ಹೊಲಿಗೆಯಂತ್ರ, ತುಂಬಿರುವ ಕೊಡಸೇರಿದಂತೆ ವಿವಿಧ ಚಿಹ್ನೆಗಳಿಗೆ ಒಲವುತೋರಿದ್ದಾರೆ. ಅದೇ ರೀತಿಯ ಚಿಹ್ನೆ ಪಡೆಯಲು ಮುಂದಾಗಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುವ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಗ್ರಾಪಂಗಳಲ್ಲಿ ಸ್ಪರ್ಧಿಸಿರುವ ಮಹಿಳಾ ಮತದಾರರು ಪಡೆದುಕೊಂಡಿದ್ದಾರೆ.

ಟ್ರ್ಯಾಕ್ಟರ್‌, ರೈತ ಚಿಹ್ನೆಗೆ ಪುರುಷ ಮತ ದಾರರ ಒಲವು: ಟ್ರ್ಯಾಕ್ಟರ್‌, ಆಟೋ, ಉಳು ಮೆಮಾಡುತ್ತಿರುವ ರೈತ,ಜೋಡಿಬಾಳೆಗೊನೆ, ತೆಂಗಿನ ತೋಟ ಚಿಹ್ನೆಗಳಿಗೆ ಪುರುಷಮತದಾರರು ಒಲವು ತೋರುತ್ತಿದ್ದಾರೆ. ಚುನಾವಣಾಕಾರಿಗಳಿಗೆ ಅದೇ ಚಿಹ್ನೆಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮೊದಲಹಂತದಲ್ಲಿ ನಡೆಯಲಿರುವ ಮಂಡ್ಯ,ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಗ್ರಾಪಂಗಳ ಅಭ್ಯರ್ಥಿಗಳು ಇಂಥ ಚಿಹ್ನೆಗಳನ್ನು ಪಡೆದುಕೊಂಡಿದ್ದಾರೆ.

ಯುವ ಪದವೀಧರ ಅಭ್ಯರ್ಥಿಗಳೇ ಅಧಿಕ :  ಜಿಲ್ಲೆಯಲ್ಲಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಯುವ ಪದವೀಧರ ಅಭ್ಯರ್ಥಿಗಳೇ ಹೆಚ್ಚಾಗಿ ಸ್ಪರ್ಧೆಯಲ್ಲಿದ್ದಾರೆ. ಮೊದಲ ಹಂತದ ಮಂಡ್ಯ, ಮದ್ದೂರು, ಮಳವಳ್ಳಿ ಹಾಗೂ ಎರಡನೇ ಹಂತದಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್‌.ಪೇಟೆ ಹಾಗೂ ನಾಗಮಂಗಲ ತಾಲೂಕುಗಳ ಗ್ರಾಪಂ ಚುನಾವಣೆಯಲ್ಲಿಯುವಅಭ್ಯರ್ಥಿಗಳುಹೆಚ್ಚು ಉತ್ಸುಕತೆಯಿಂದಚುನಾವಣೆಗೆ ಸ್ಪರ್ಧಿಸಿದ್ದಾರೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.