ಟಿಕೆಟ್‌ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಕಣಕ್ಕೆ


Team Udayavani, Jan 10, 2018, 4:22 PM IST

21_21.jpg

ಮಂಡ್ಯ: ಯಾವುದೇ ರಾಜಕೀಯ ಪಕ್ಷಗಳು ಕೊತ್ತತ್ತಿ ಹೋಬಳಿಯವರಿಗೆ ಟಿಕೆಟ್‌ ನೀಡಿದಲ್ಲಿ ಎಲ್ಲರೂ ಆ ಪಕ್ಷದ ಅಭ್ಯರ್ಥಿಗೆ ಮತ ನೀಡುವುದು. ಇಲ್ಲದಿದ್ದರೆ ಪಕ್ಷೇತರವಾಗಿ ಹೋಬಳಿಯ ಅಭ್ಯರ್ಥಿಯನ್ನು ಕಣಕ್ಕಿಸಲು ಕೊತ್ತತ್ತಿ ಹೋಬಳಿ ಮಟ್ಟದ ಮುಖಂಡರ ಸಭೆಯಲ್ಲಿ ಸರ್ವಸಮ್ಮತ ನಿರ್ಣಯ ಕೈಗೊಳ್ಳಲಾಯಿತು.

 ತಾಲೂಕಿನ ಸಂತೆಕಸಲಗೆರೆ ಶ್ರೀ ಭೂಮಿ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಕೊತ್ತತ್ತಿ ಹೋಬಳಿ ಜನಜಾಗೃತಿ ವೇದಿಕೆ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶದಲ್ಲಿ ಮುಖಂಡರ ನಿರ್ಣಯಕ್ಕೆ ಜನರು ಕೈ ಎತ್ತುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಜವರೇಗೌಡ, ಹಿಂದಿನಿಂದಲೂ ನಮ್ಮ ಹೋಬಳಿಯನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಲೇ ಬಂದಿವೆ. ಇದೇ ಕಾರಣದಿಂದ ಹಿಂದೆ ಯತ್ತಗದಹಳ್ಳಿ ದೊಡ್ಡಬೋರೇಗೌಡರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಗೆಲ್ಲಿಸಿದ್ದೆವು.

ಈಗ ಮತ್ತೆ ಅಂತಹದ್ದೇ ಪರಿಸ್ಥಿತಿ ಎದುರಾಗಿದೆ. ಒಂದು ಲಕ್ಷ ಮತದಾರರಿರುವ ನಾವು ಈಗ ಒಗ್ಗೂಡಿ ಆ ನಿರ್ಣಯ ಕೈಗೊಳ್ಳಬೇಕೆಂದು ಹೇಳಿದರು. ಕಾಂಗ್ರೆಸ್‌ ಮುಖಂಡ ಪಾಲಹಳ್ಳಿ ಚಂದ್ರಶೇಖರ್‌ ಮಾತನಾಡಿ, ಸ್ಪರ್ಧೆಗೆ ತಾವು ಸಿದ್ಧ ಅಥವಾ ನಿಮ್ಮಲ್ಲಿ ಅಭ್ಯರ್ಥಿಯಾಗುವವರಿಗೆ ಬೆಳಗೊಳ ಹೋಬಳಿ ಜನರೂ ಕೂಡ ಸಾಥ್‌ ನೀಡಲಿದ್ದೇವೆ.

ನಾನು, ಸಚ್ಚಿದಾನಂದ, ನಂಜುಂಡೇಗೌಡರನ್ನು ಜೆಡಿಎಸ್‌ ವರಿಷ್ಠರು ಕರೆದು ನಿಮ್ಮಲ್ಲಿ ಒಬ್ಬರು ಅಭ್ಯರ್ಥಿಯಾಗಿ ಎಂದರು. ನಾವು ಸಿದ್ಧರಾಗುತ್ತಿದ್ದಂತೆ ಅರಕೆರೆ ನಾಯಕರ ಮನೆಗೆ ಹೋದರು. ಅವರು ದೊಡ್ಡವರು ಹೋಗಲಿ, 7 ಬಾರಿ ಶಾಸಕರಾಗಿದ್ದಾರೆ, ಮತ್ತೆ ಅವರೇ ಆಗಬೇಕೆ? ಬೇರೆಯವರಿಗೆ ಅರ್ಹತೆ ಇಲ್ಲವೆ ಎಂದು ಪ್ರಶ್ನಿಸಿದರು.

ತಗ್ಗಹಳ್ಳಿ ಕೃಷ್ಣ ಮಾತನಾಡಿ, ಹಣ ಇಲ್ಲದೆ ಚುನಾವಣೆ ಕಷ್ಟ ಎಂಬುದು ಸುಳ್ಳು. ಒಂದು ಎಕರೆ ಜಮೀನಿಲ್ಲದ ಮೋದಿಯವರು ದೇಶದ ಪ್ರಧಾನಿಯಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮತಗಳನ್ನು  ಕ್ವಾಟ್ರಾ, ಬಾಡು, 2 ಸಾವಿರ ರೂ. ಮಾರಾಟ ಮಾಡಿಕೊಳ್ಳದೆ, ಸ್ವಾಭಿಮಾನದಿಂದ ರಾಜಕೀಯ ಮಾಡೋಣ ಎಂದರು.

ಇಂಡುವಾಳು ಸಚ್ಚಿದಾನಂದ ಮಾತನಾಡಿ, ಶಾಸಕ ರಮೇಶ್‌ ಬಂಡಿಸಿದ್ದೇಗೌಡರು ತಾವು ಅಂಬರೀಶ್‌ ವಿರುದ್ಧ ಗೆದ್ದಿರುವುದೇ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಂಬರೀಶ್‌ ಯಾವತ್ತಿಗೂ ರಾಜ್ಯ ನಾಯಕರೇ. ಲಕ್ಷಾಂತರ ಮತಗಳ ಅಂತರದಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿರುವವರ ಪೈಕಿ ಅವರೂ ಒಬ್ಬರು. 7 ಬಾರಿ ಕ್ಷೇತ್ರ ಪ್ರತಿನಿಧಿಸಿರುವ ಅವರ ಕುಟುಂಬದ ಸಾಧನೆಯನ್ನು ಹೇಳಲಿ ಎಂದು ಸವಾಲೆಸೆದರು.

ಸಿದ್ದರಾಮೇಗೌಡ ಮಾತನಾಡಿ, ಕೊತ್ತತ್ತಿ ಹೋಬಳಿಯ ಯಾರಾದರೂ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿಯಿಂದ ಟಿಕೆಟ್‌ ತಂದಲ್ಲಿ ಅವರ ಪರ ಕೆಲಸ ಮಾಡುತ್ತೇವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುತ್ತೇವೆ. ಇದಕ್ಕೆ ಹೋಬಳಿಯ ಎಲ್ಲ ಮತದಾರರು ಸಹಕರಿಸಬೇಕೆಂದು ಕೋರಿದರು.

ಸಮಾವೇಶದಲ್ಲಿ ಕೊತ್ತತ್ತಿ ಗ್ರಾಪಂ ಮಾಜಿ ಅಧ್ಯಕ್ಷೆ ಶಕುಂತಲಾ, ಜಿಪಂ ಸದಸ್ಯ ರಾಮಲಿಂಗಯ್ಯ, ಮುಖಂಡರಾದ ಸೋಮಶಂಕರೇಗೌಡ, ಮಂಜೇಗೌಡ, ಎಪಿಎಂಸಿ ನಿರ್ದೇಶಕಿ ಪಲ್ಲವಿ ಇತರರಿದ್ದರು.

ಟಾಪ್ ನ್ಯೂಸ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.