ಅಕ್ರಮ ಜಲ್ಲಿ ಕ್ರಷರ್: 20ಕ್ಕೂ ಹೆಚ್ಚು ಲಾರಿ ವಶ
Team Udayavani, Mar 31, 2021, 6:08 PM IST
ಮಂಡ್ಯ: ಶ್ರೀರಂಗಪಟ್ಟಣ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಜಲ್ಲಿ ಕ್ರಷರ್ ನಡೆಸಿ ಜಲ್ಲಿ ಮತ್ತು ಕಲ್ಲು ತುಂಬಿ ಸಾಗಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಲಾರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಹಂಗರಳ್ಳಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಪ್ರಧಾನಿ ಮೋದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪತ್ರ
ಅರಣ್ಯಾಧಿಕಾರಿ ಸುನೀತಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಟಿ.ಎಂ.ಹೊಸೂರು, ಕಾಳೇನಹಳ್ಳಿ, ಗಣಂಗೂರು, ಹಂಗರಳ್ಳಿ ಸೇರಿದಂತೆ ಇತರ ಅಕ್ರಮ ಗಣಿ ನಡೆಸುವ ಅರಣ್ಯ ಪ್ರದೇಶದ ಸ್ಥಳಗಳಿಗೆ ದಾಳಿ ನಡೆಸಿ ಸಾಗಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಟಿಪ್ಪರ್ ಲಾರಿ ಹಾಗೂ ಟ್ರಾಕ್ಟರ್ಗಳನ್ನು ವಶಕ್ಕೆ ಪಡೆದು ಗಣಂಗೂರು ಅರಣ್ಯದ ಪ್ರವಾಸಿ ಮಂದಿರದ ಆವರಣದಲ್ಲಿ ನಿಲ್ಲಿಸಲಾಗಿದೆ. ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.