ಆವಿಷ್ಕಾರಕ್ಕೆ ಪುರಸ್ಕಾರ

ಯಂತ್ರೋಪಕರಣಗಳ ಸಂಶೋಧನೆ ಹೆಚ್ಚಲಿ: ಪಿಇಟಿ ಅಧ್ಯಕ್ಷ ವಿಜಯಾನಂದ

Team Udayavani, Oct 29, 2021, 5:22 PM IST

ಯಂತ್ರೋಪಕರಣಗಳ ಸಂಶೋಧನೆ ಹೆಚ್ಚಲಿ- ಪಿಇಟಿ ಅಧ್ಯಕ್ಷ ವಿಜಯಾನಂದ

ಮಂಡ್ಯ: ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಕಾರ್ಯಕ್ಷಮತೆ ತೋರಿಸುವಂಥ ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂಥ ಯಂತ್ರೋಪಕರಣಗಳ ಆವಿಷ್ಕಾರಗಳು ಹೆಚ್ಚು ಹೆಚ್ಚಾಗಿ ಹೊರಬರಬೇಕು ಎಂದು ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ ತಿಳಿಸಿದರು.

ಯಂತ್ರೋಪಕರಣ ದುಬಾರಿ: ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜಿನ ಐಟಿ ವಿಭಾಗದ ವಿದ್ಯಾರ್ಥಿಗಳು ಸಂಶೋಧಿಸಿರುವ ಮರ ಮತ್ತು ಲೋಹದ ಮೇಲೆ ಕೆತ್ತನೆ ಮಾಡುವ ಯಂತ್ರದ ಪ್ರಾತ್ಯಕ್ಷಿತೆ ಉದ್ಘಾಟಿಸಿ ಮಾತನಾಡಿದ ಅವರು, ಮರ ಮತ್ತು ಲೋಹದ ಮೇಲೆ ಕೆತ್ತನೆ ಮಾಡುವಂಥ ಯಂತ್ರೋಪಕರಣಗಳು ಹೆಚ್ಚು ಹಣ ಕೊಟ್ಟು ಖರೀದಿ ಮಾಡಬೇಕಾಗಿರುತ್ತದೆ.

ಸಣ್ಣ ಪುಟ್ಟ ಕೈಗಾರಿಕೆಗಳವರು ಲಕ್ಷಾಂತರ ರೂ. ಕೊಟ್ಟು ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಇದನ್ನು ಮನಗಂಡು ವಿದ್ಯಾರ್ಥಿಗಳು ಕಂಪ್ಯೂಟರ್‌ನಲ್ಲಿ ಏನೆಲ್ಲ ಪದಗಳು, ಚಿತ್ರಗಳನ್ನು ಚಿತ್ರಿಸುತ್ತಾರೋ ಅದೇ ಮಾದರಿಯ ಕೆತ್ತನೆಗಳು ಮೂಡಿಸುವಂತಹ ಯಂತ್ರ ಇದಾಗಿದೆ ಎಂದು ಹೇಳಿದರು.

ಇದನ್ನೂ ಓದಿ;- ಗುಮ್ಮಟನಗರಿಯ ಅಭಿಮಾನಿಯ ವಿವಾಹಕ್ಕೆ ಉಡುಗೊರೆ ನೀಡಿದ್ದ ಅಪ್ಪು

ಐಟಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಸುಮನ್‌ ಮಾತನಾಡಿ, ನಾವು 11 ಮಂದಿ ವಿದ್ಯಾರ್ಥಿಗಳು ಸೇರಿ ಈ ಯಂತ್ರವನ್ನು ಸಂಶೋಧಿಸಿದ್ದೇವೆ. ಸಾಮಾನ್ಯವಾಗಿ ದೊಡ್ಡ ದೊಡ್ಡ ಕೈಗಾರಿಕೋದ್ಯಮಗಳು ಹೆಚ್ಚಿನ ಹಣ ಹೂಡಿಕೆ ಮಾಡಿ ಇಂತಹ ಯಂತ್ರಗಳನ್ನು ಅಳವಡಿಸಿಕೊಂಡಿರುತ್ತಾರೆ. ಆದರೆ ಸಣ್ಣ ಪುಟ್ಟ ಕೈಗಾರಿಕೋದ್ಯಮಿಗಳೂ ಸಹ ಇಂತಹ ಯಂತ್ರಗಳನ್ನು ಕಡಿಮೆ ಖರ್ಚಿನಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ಈ ಯಂತ್ರವನ್ನು ಸಂಶೋಧಿ ಸಿದ್ದೇವೆ ಎಂದು ತಿಳಿಸಿದರು.

„ ವಿದ್ಯಾರ್ಥಿಗಳಿಂದ ಮರ ಮತ್ತು ಲೋಹದ ಮೇಲೆ ಕೆತ್ತನೆ ಮಾಡುವ ಯಂತ್ರದ ಸಂಶೋಧನೆ, ಪ್ರಾತ್ಯಕ್ಷಿತೆ

„ ಕಂಪ್ಯೂಟರ್‌ನಲ್ಲಿ ಏನೆಲ್ಲ ಪದಗಳು, ಚಿತ್ರಗಳನ್ನು ಚಿತ್ರಿಸುತ್ತಾರೋ ಅದೇ ಮಾದರಿಯ ಕೆತ್ತನೆಗಳು

ಮೂಡಿಸುವಂತಹ ಯಂತ್ರ ಇದು.

ಮಿಲ್ಲಿಂಗ್‌ ಯಂತ್ರವು ಮೆಷಿನಿಂಗ್‌ ಕೆಲಸವನ್ನು ಗಣಕಯಂತ್ರದ ಸಿಎನ್‌ಸಿ ಪ್ರೋಗ್ರಾಂ ಮೂಲಕ ನಿರ್ವಹಿಸುತ್ತದೆ. ತಯಾರಾಗಬೇಕಾದ ವಸ್ತು ಮತ್ತು ಉಪಕರಣವನ್ನು ಹೊಂದಿಸಿ ನಂತರ, ಕೆಲಸವನ್ನು ಪೂರ್ಣಗೊಳಿಸಲು ಈ ಯಂತ್ರವು ಎಲ್ಲಾ ಕಾರ್ಯಾಚರಣೆಗಳನ್ನು ಸ್ವಯಂಚಾಲಿತವಾಗಿ ನಿರ್ವಹಿಸುತ್ತದೆ.

ವೇಗ, ಫೀಡ್ ಮತ್ತು ಕಟ್‌ನ ಆಳವನ್ನು ಬದಲಾಯಿಸುವುದು ಸಹ ಸ್ವಯಂಚಾಲಿತವಾಗಿ ಮಾಡಲಾಗುತ್ತದೆ. ಪ್ರೋಗ್ರಾಂ ಸೈಕಲ್‌ನ್ನು ಪುನರಾವರ್ತಿಸುವ ಮೂಲಕ ಉತ್ಪಾದನಾ ಸಮಯವನ್ನು ತೀವ್ರವಾಗಿ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ.ಮಹಾಲಿಂಗೇಗೌಡ, ವಿಭಾಗದ ಮುಖ್ಯಸ್ಥ ಡಾ.ಎಚ್‌.ಎಂ.ನಂಜುಂಡಸ್ವಾಮಿ, ಡೀನ್‌ ಡಾ.ಬಿ.ಎಸ್‌.ಶಿವಕುಮಾರ್‌, ಮಾರ್ಗ ದರ್ಶಕರಾದ ಎಂ.ಶ್ರೀನಿವಾಸ್‌, ಸಿಇಒ ಡಾ.ಎನ್‌.ಎಲ್‌.ಮುರಳಿಕೃಷ್ಣ, ವೇಣು ಗೋಪಾಲ್‌, ಡಾ.ರಾಘು, ಯತೀಶ, ಅರ್ಚನಾ, ಸುಜನ್‌ಗೌಡ, ಕೆ.ರವಿ ಮತ್ತಿತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.