ಕೆಮ್ಮಣ್ಣು ನಾಲೆ ಸಂಪರ್ಕ ಸೇತುವೆ ದುರಸ್ತಿ ಎಂದು?


Team Udayavani, Oct 10, 2022, 4:44 PM IST

tdy-12

ಮದ್ದೂರು: ಕೆಮ್ಮಣ್ಣು ನಾಲೆ ಸಂಪರ್ಕ ಕಲ್ಪಿಸುವ ಸೇತುವೆಗಳು ಕಳೆದ ಹಲವಾರು ತಿಂಗಳಿಂದಲೂ ದುರಸ್ತಿಯಲ್ಲಿದ್ದರೂ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವ ಬಗ್ಗೆ ಸ್ಥಳೀಯ ರೈತರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಚನ್ನೇಗೌಡನದೊಡ್ಡಿ ಗ್ರಾಮದಿಂದ ದೇಶಹಳ್ಳಿ, ವಳಗೆರೆ ಹಳ್ಳಿ, ಪಟ್ಟಣ ಸೇರಿ ಸ್ಥಳೀಯ ರೈತರ ಜಮೀನುಗಳಿಗೆ ತೆರಳುವ ನಾಲಾ ರಸ್ತೆ ಸೇತುವೆ ತಿಂಗಳಿಂದಲೂ ಮುರಿದು ಬಿದ್ದಿದೆ. ಆದರೆ, ಇದುವರೆಗೂ ಅಧಿಕಾರಿಗಳು ದುರಸ್ತಿಗೆ ಮುಂದಾ ಗಿಲ್ಲ. ಎಂ.ಸಿ.ಲಿಂಗೇಗೌಡರ ತೋಟದ ಜಮೀನಿನಿಂದ ಸಂಪರ್ಕ ಕಲ್ಪಿಸುವ ಕೆಮ್ಮಣ್ಣು ನಾಲೆ ಸೇತುವೆ ಕಳೆದ 2 ವರ್ಷಗಳಿಂದಲೂ ಮುರಿದು ಬಿದ್ದು ಸಂಚಾರಕ್ಕೆ ತೊಡಕ್ಕುಂಟಾಗಿದೆ. ಆದರೆ, ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದಾರೆ.

ಈವರೆಗೂ ಸೂಕ್ತ ಕ್ರಮವಿಲ್ಲ: ಸೇತುವೆ ಮುರಿದು ಬಿದ್ದಿರುವ ಪರಿಣಾ ಮವಾಗಿ ಪಟ್ಟಣಕ್ಕೆ ತೆರಳುವ ನಿವಾಸಿಗಳು ಸುಮಾರು 2 ಕಿ.ಮೀ. ಕ್ರಮಿಸಬೇಕಾದ ಅನಿವಾ ರ್ಯತೆಯಿದೆ. ನಾಲಾ ಮಾರ್ಗದ ರಸ್ತೆ ಡಾಂಬ ರೀಕರಣ ಕೈಗೊಳ್ಳಲು ಅನುದಾನ ಬಿಡುಗಡೆಯಾಗಿದ್ದರೂ ಅಪೂರ್ಣ ಕಾಮಗಾರಿಯಿಂದಾಗಿ ಹಲವು ಅದ್ವಾನ ಕಾಣಸಿಗುತ್ತಿವೆ. ನಾಲೆಯುದ್ದಕ್ಕೂ ಬೆಳೆದು ನಿಂತಿರುವ ಆಳೆತ್ತರದ ಗಿಡಗಂಟಿ, ತೂಬು ನಿರ್ವಹಣೆ ಕೊರತೆ, ಕಿತ್ತು ನಿಂತಿರುವ ರಸ್ತೆ, ನಾಲೆ ದುರಸ್ತಿ ಕಾಣದೆ ಹಲವಾರು ವರ್ಷ ಕಳೆದಿದ್ದರೂ ಸ್ಥಳೀಯ ಅಧಿಕಾರಿಗಳು ಕ್ರಮವಹಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚನ್ನೇಗೌಡನದೊಡ್ಡಿ ಗ್ರಾಮದಿಂದ ಮದ್ದೂರಮ್ಮ ಕೆರೆವರೆಗೂ ರಸ್ತೆ ಎರಡೂ ಬದಿ ಆಳೇತ್ತರದ ಗಿಡ ಬೆಳೆದುನಿಂತಿವೆ. ಆದರೆ, ತೆರವು ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ನಿತ್ಯ ಅಪಘಾತ: ಚನ್ನೇಗೌಡನದೊಡ್ಡಿ ಗ್ರಾಮದ ನಾಲಾ ಸೇತುವೆ ಮುರಿದು ಬಿದ್ದು ತಿಂಗಳುಗಳೇ ಕಳೆದಿವೆ. ಜತೆಗೆ ತಡೆಗೋಡೆ ಇಲ್ಲದೆ ಹಲವು ಅಪಾಯಗಳಿಗೆ ಕಾರಣವಾಗಿದ್ದು ಈ ಭಾಗದ ರೈತರು ತಮ್ಮ ಜಮೀನುಗಳಿಗೆ ತೆರಳಲು ಸಂಕಷ್ಟ ಪಡಬೇಕಿದೆ. ಈಗಾಗಲೇ ಹಲವಾರು ಮಂದಿ ಬೈಕ್‌ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಪ್ರತಿನಿತ್ಯ ಜರುಗುತ್ತಿವೆ.ಈ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಗಮನಕ್ಕೂ ತಂದರೂ ಇದುವರೆಗೂ ದುರಸ್ತಿಗೆ ಮುಂದಾಗಿಲ್ಲ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೆಮ್ಮಣ್ಣು ನಾಲಾ ಸೇತುವೆ ದುರಸ್ತಿಗೆ ಈಗಾಗಲೇ ಡಿಪಿಆರ್‌ ಪ್ರಕ್ರಿಯೆ ಮುಗಿದಿದೆ. ಅನುದಾನ ಬಿಡುಗಡೆ ಬಳಿಕ ಸೇತುವೆ ನಿರ್ಮಾಣಕ್ಕೆ ಮುಂದಾಗಲಿದ್ದೇವೆ. ಜತೆಗೆ ಚನ್ನೇಗೌಡನದೊಡ್ಡಿ ಗ್ರಾಮದ ನಾಲಾ ಸೇತುವೆ ದುರಸ್ತಿಗೆ ತಾತ್ಕಾಲಿಕ ಕ್ರಮವಹಿಸಲಾಗುವುದು. – ತಾರಾ, ಎಇಇ, ಕಾವೇರಿ ನೀರಾವರಿ ನಿಗಮ, ಮದ್ದೂರು

ಕೆಮ್ಮಣ್ಣು ನಾಲಾ ಸೇತುವೆ ಮುರಿದುಬಿದ್ದು ಹಲವು ದಿನಗಳೇ ಕಳೆದಿದ್ದರೂ ಇದುವರೆಗೂ ದುರಸ್ತಿ ಮಾಡಿಲ್ಲ. ಅಧಿಕಾರಿಗಳು ದುರಸ್ತಿಗೆ ಮುಂದಾಗದಿದ್ದಲ್ಲಿ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. ಸಿ.ಅಪೂರ್ವಚಂದ್ರ, ತೋಟದ ಮನೆ ನಿವಾಸಿ, ಎಚ್‌.ಕೆ.ವಿ.ನಗರ

 

ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.