ಸೌಲಭ್ಯ ವಂಚಿತ ಕೆ.ಆರ್‌.ಪೇಟೆ ಬಸ್‌ ನಿಲ್ದಾಣ


Team Udayavani, Jun 26, 2019, 1:04 PM IST

mandya-tdy-2..

ಕೆ.ಆರ್‌.ಪೇಟೆ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಚರಂಡಿ ನೀರಿನ ದುರ್ವಾಸನೆ.

ಕೆ.ಆರ್‌.ಪೇಟೆ: ಪ್ರತಿದಿನ ಕನಿಷ್ಠ ಎರಡು ಸಾವಿರ ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸುವ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕನಿಷ್ಠ ಮೂಲ ಸೌಲಭ್ಯಗಳಿಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಪಟ್ಟಣದಿಂದ ರಾಜಧಾನಿ ಬೆಂಗಳೂರು, ಮೈಸೂರು, ಮತ್ತಿತರ ಜಿಲ್ಲಾ ಕೇಂದ್ರಗಳು, ತಾಲೂಕಿನ ವಿವಿಧ ಗ್ರಾಮಗಳಿಗೆ ಪ್ರತಿದಿನ ಪ್ರಯಾಣಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಓಡಾಡುತ್ತಾರೆ. ಆದರೆ, ನಮ್ಮ ತಾಲೂಕು ಕೇಂದ್ರದಲ್ಲಿರುವ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಸಿಗುವುದಿಲ್ಲ, ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಸಮರ್ಪಕ ಆಸನಗಳ ವ್ಯವಸ್ಥೆ ಮಾಡಿಲ್ಲ. ದ್ವಿಚಕ್ರ ವಾಹನ ನಿಲ್ದಾಣವೂ ಇಲ್ಲ, ಕೆಲಸ ಕಾರ್ಯಗಳ ನಿಮಿತ್ತ ಬಂದ ಪ್ರಯಾಣಿಕರು ಬಸ್‌ಗಳಿಗಾಗಿ ಕಾಯುವ ವೇಳೆ ಹಸಿದರೆ ಏನಾದರೂ ತಿನ್ನಲು ಕನಿಷ್ಠ ಒಂದು ಸಣ್ಣ ಹೋಟೆಲ್ ಕೂಡ ಇಲ್ಲ. ಇನ್ನು ಶೌಚಾಲಯ ವಿಷಯ ಕೇಳುವುದೇ ಬೇಡ. ಅಷ್ಟಲ್ಲದೆ ಎಲ್ಲಕ್ಕಿಂತ ಮುಖ್ಯವಾಗಿ ಸ್ವಚ್ಛತೆಯಂತೂ ಇಲ್ಲವೇ ಇಲ್ಲ.

ಚರಂಡಿ ದುರ್ವಾಸನೆ: ಇರಬೇಕಾದ ಯಾವ ಮೂಲ ಸೌಲಭ್ಯಗಳು ಇಲ್ಲದಿದ್ದರೂ ಪ್ರಯಾಣಿಕರಿಗೆ ಚರಂಡಿಯ ದುರ್ವಾಸನೆ, ಕೊಳಚೆ ಮಾತ್ರ ತುಂಬಿ ತುಳುಕುತ್ತಿದೆ. ನಿಲ್ದಾಣದಲ್ಲಿ ಮೊದಲು ಒಂದು ಹೋಟೆಲ್ ಇತ್ತು. ಆದರೆ, ಈ ಅನೈರ್ಮಲ್ಯದಲ್ಲಿ ಆ ಹೋಟೆಲ್ನಲ್ಲಿ ಊಟ, ತಿಂಡಿ ಮಾಡಲು ಪ್ರಯಾಣಿಕರು ಹಿಂಜರಿಯುತ್ತಿದ್ದ ಕಾರಣ, ಗುತ್ತಿಗೆ ಪಡೆದಿರುವವರು ನಷ್ಟ ಅನುಭವಿಸಿ ಮುಚ್ಚಿದರು. ಈಗಲೂ ಯಾರೇ ಹೋಟೆಲ್ ತೆರೆದರೂ ಕೆಲವೇ ತಿಂಗಳಲ್ಲಿ ಜಾಗ ಖಾಲಿ ಮಾಡುತ್ತಿದ್ದಾರೆ.

ಉದ್ಘಾಟನೆ ಭಾಗ್ಯ ಕಾಣದ ಶುದ್ಧ ನೀರಿನ ಘಟಕ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆ ಭಾರತ್‌ ಪೆಟ್ರೋಲಿಯಂ ವತಿಯಿಂದ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಘಟಕ ನಿರ್ಮಿಸಿದರು. ಆದರೆ ಸಾರಿಗೆ ಸಂಸ್ಥೆಯವರು ಆ ಘಟಕಕ್ಕೆ ವಿದ್ಯುತ್‌ ಸಂಪರ್ಕ ನೀಡಿ ಉದ್ಘಾಟನೆ ಮಾಡುವ ಕನಿಷ್ಠ ಶ್ರದ್ಧೆಯೂ ತೋರದೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದು ವ್ಯರ್ಥವಾಗಿ ನಿಂತಿದೆ.

ಸ್ವಚ್ಛತೆಯೇ ಕಾಣದ ನಿಲ್ದಾಣ: ದಶಕಗಳಿಂದಲೂ ಬಸ್‌ ನಿಲ್ದಾಣದ ಸ್ವಚ್ಛತೆಯ ಗುತ್ತಿಗೆಯನ್ನು ರಾಜಕಾರಣಿಗಳು ಅಥವಾ ಅವರ ಬೆಂಬಲಿಗರು ಪಡೆಯುತ್ತಾರೆ. ಆದರೆ, ಅವರ್ಯಾರು ಸ್ವಚ್ಛ ಮಾಡುವುದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರಿಗೆ ಗುತ್ತಿಗೆಯಷ್ಟೇ ಮುಖ್ಯ. ಸ್ವಚ್ಛತೆ ಮಾಡುವುದು ಬೇಕಿಲ್ಲ. ಬೇಕಾಬಿಟ್ಟಿ ನಿರ್ವಹಣೆ ಮಾಡುತ್ತಾರೆ. ಕಾಟಾಚಾರಕ್ಕೆ ಯಾವಾಗಲೋ ಒಮ್ಮೆ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲುವ ಕೆಲ ಸ್ಥಳ ಮಾತ್ರ ಸ್ವಚ್ಛ ಮಾಡುತ್ತಾರೆ. ಇತರೆ ಭಾಗಗಳನ್ನು ಸ್ವಚ್ಛ ಮಾಡುವುದಿಲ್ಲ. ಜೊತೆಗೆ ನಿಲ್ದಾಣದಲ್ಲಿ ಸಂಗ್ರಹ ವಾಗುವ ಘನ ತ್ಯಾಜ್ಯ ಹೊರಭಾಗಕ್ಕೆ ಸಾಗಿಸುವ ಬದಲಿಗೆ ನಿಲ್ದಾಣದಲ್ಲಿಯೇ ಬೆಂಕಿ ಹಚ್ಚಿ ಸುಡುತ್ತಾರೆ.

ಕೊಳಚೆ ನೀರು ಸಂಗ್ರಹ: ನಿಲ್ದಾಣದಲ್ಲಿಯೇ ಕೊಳಚೆ ನೀರು ಸಂಗ್ರಹವಾಗುವುದರಿಂದ ಕೊಳಕು ನೀರನಲ್ಲಿ ಹುಳುಗಳು ಉತ್ಪತ್ತಿಯಾಗುತ್ತಿವೆ. ಜೊತೆಗೆ ಕೊಳಕು ನೀರಿನ ದುರ್ವಾಸನೆಯಿಂದ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ನಿಲ್ದಾಣದಲ್ಲಿರುವ ಶೌಚಾಲಯದ ನೀರನ್ನೂ ನೇರವಾಗಿ ಚರಂಡಿಗೆ ಬಿಡುತ್ತಿರುವುದರಿಂದ ಆ ದುರ್ವಾಸನೆ, ಸೊಳ್ಳೆ, ಹುಳಗಳ ಉತ್ಪಾದನೆಯಿಂದ ನಿಲ್ದಾಣದ ಅಕ್ಕಪಕ್ಕದಲ್ಲಿರುವ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ.

 

•ಎಚ್.ಬಿ.ಮಂಜುನಾಥ್‌

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.