ಕೆಆರ್‌ಎಸ್‌ ನೀರಿನ ಮಟ್ಟ ಕುಸಿತ

82 ಅಡಿ ನೀರು: ಕಳೆದ ವರ್ಷಕ್ಕಿಂತ 13 ಅಡಿ ಹೆಚ್ಚು ನೀರು • ಬಿಸಿಲ ಝಳಕ್ಕೆ ಆವಿಯಾಗುವ ನೀರಿನ ಪ್ರಮಾಣ ಹೆಚ್ಚಳ

Team Udayavani, May 15, 2019, 3:58 PM IST

mandya-tdy-1..

ಶ್ರೀರಂಗಪಟ್ಟಣ: ಬಿಸಿಲ ಝಳಕ್ಕೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೇಸಿಗೆ ಬೆಳೆಗೆ ಹರಿಸಲಾಗುತ್ತಿದ್ದ ನೀರನ್ನು ನಿಲ್ಲಿಸಲಾಗಿದ್ದು, ಅಗತ್ಯವಿರುವಷ್ಟು ಕುಡಿಯುವ ನೀರನ್ನು ಕಾಯ್ದುಕೊಳ್ಳಲಾಗಿದೆ. ಅಣೆಕಟ್ಟೆಯೊಳಗೆ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಆತಂಕ ಸೃಷ್ಟಿಯಾಗಿದೆ.

ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಹಾಲಿ ಅಣೆಕಟ್ಟೆಯಲ್ಲಿ 82.10 ಅಡಿ ನೀರು ಸಂಗ್ರಹವಾಗಿದೆ. ಅಣೆಕಟ್ಟೆಗೆ ನಿತ್ಯ 143 ಕ್ಯುಸೆಕ್‌ ನೀರು ಹರಿದುಬರುತ್ತಿದ್ದರೆ, 352 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 11.77 ಟಿಎಂಸಿ ಅಡಿ ನೀರು ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಣೆಕಟ್ಟೆಯಲ್ಲಿ 69 ಅಡಿ ನೀರು ಸಂಗ್ರಹವಾಗಿತ್ತು. 360 ಕ್ಯುಸೆಕ್‌ ಒಳಹರಿವಿದ್ದರೆ, 842 ಕ್ಯುಸೆಕ್‌ ನೀರನ್ನು ಹೊರಬಿಡ ಲಾಗುತ್ತಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದಲ್ಲಿ 13 ಅಡಿಗಳಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಮುಂಗಾರು ಮಳೆ ನಿರೀಕ್ಷೆಯಲ್ಲಿ ರೈತರು: ಜೂನ್‌ ಅಂತ್ಯದ ವೇಳೆಗೆ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆ ಗಳಿವೆ. ಈ ಬಾರಿ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಶುಭ ಸೂಚನೆ ನೀಡಿದೆ. ನಿರೀಕ್ಷೆಯಂತೆ ಮುಂಗಾರು ಮಳೆ ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿದರೆ ನೀರಿನ ಬವಣೆ ನೀಗಲಿದೆ. ಈಗಾಗಲೇ ಮುಂಗಾರು ಪೂರ್ವ ಮಳೆ ನಿರೀಕ್ಷಿತ ಪ್ರಮಾ ಣದಲ್ಲಿ ಬಿದ್ದಿಲ್ಲ. ಕೃಷಿ ಚಟುವಟಿಕೆಗಳೆಲ್ಲವೂ ಸ್ತಬ್ಧವಾಗಿವೆ. ಭೂಮಿ ಯನ್ನು ಹದಗೊಳಿಸುವುದಕ್ಕೆ ರೈತರು ಮುಂಗಾರು ಮಳೆಯನ್ನೇ ಆಶ್ರಯಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಿತ್ಯ 1100 ಕ್ಯುಸೆಕ್‌ ನೀರು: ಕೆಆರ್‌ಎಸ್‌ ಜಲಾಶಯದಿಂದ ನಿತ್ಯ ಮೈಸೂರಿಗೆ 150 ಕ್ಯುಸೆಕ್‌, ಮಂಡ್ಯ ಜಿಲ್ಲೆಗೆ 200 ಕ್ಯುಸೆಕ್‌, ರಾಮನಗರ ಜಿಲ್ಲೆಗೆ 100 ಕ್ಯುಸೆಕ್‌, ಬೆಂಗಳೂರು ನಗರಕ್ಕೆ ನಿತ್ಯ 650 ಕ್ಯುಸೆಕ್‌ ನೀರಿನ ಅಗತ್ಯವಿದೆ. ಈ ಜಿಲ್ಲೆಗಳಿಗೆ ದಿನಕ್ಕೆ 1100 ಕ್ಯುಸೆಕ್‌ ನೀರಿನ ಅಗತ್ಯವಿದೆ. ಬೆಂಗಳೂರು ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಅಗತ್ಯವಿರುವ ನೀರನ್ನು ಕಬಿನಿ ಜಲಾಶಯದಿಂದ ಹರಿಸಲಾ ಗುತ್ತಿದೆ. ಸದ್ಯಕ್ಕೆ ಆ ಜಿಲ್ಲೆಗಳ ಕುಡಿಯುವ ನೀರಿಗೆ ಅಭಾವ ಎದುರಾಗಿಲ್ಲ. ಕಬಿನಿ ಜಲಾಶ ಯದಲ್ಲಿ ನೀರಿನ ಕೊರತೆ ಎದುರಾದ ಸಂದರ್ಭದಲ್ಲಿ ಮಾತ್ರ ಕೃಷ್ಣರಾಜ ಸಾಗರ ಜಲಾಶಯದಿಂದ ನೀರನ್ನು ಹರಿಸಲಾಗುವುದು. ಕಬಿನಿಯಲ್ಲಿ ಸಾಕಷ್ಟು ನೀರಿರುವುದರಿಂದ ಹೆಚ್ಚುವರಿ ನೀರು ಹರಿಸುವ ಸನ್ನಿವೇಶ ಉದ್ಭವವಾಗಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆವಿಯ ಪ್ರಮಾಣ ಹೆಚ್ಚಳ: ಕಾವೇರಿ ಕಣಿವೆ ಪ್ರದೇಶದ ಜಲಾಶಯ ಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಬಿಸಿಲ ತಾಪಕ್ಕೆ ಆವಿಯಾಗುವ ನೀರಿನ ಪ್ರಮಾಣವೂ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಮಂಡ್ಯದಲ್ಲಿ ರಣಬಿಸಿಲಿಗೆ ಜನರು ತತ್ತರಿಸುತ್ತಿದ್ದಾರೆ. ಈ ಬಾರಿ ಗರಿಷ್ಠ ತಾಪಮಾನ 41 ಡಿಗ್ರಿವರೆಗೂ ತಲುಪಿದೆ. ತಾಪಮಾನ ಈ ಪ್ರಮಾಣದಲ್ಲಿ ಅಧಿಕವಾಗಿರುವುದರಿಂದ ಜಲಾಶಯದಲ್ಲಿ ನೀರಿನ ಆವಿಯ ಪ್ರಮಾಣವೂ ಅಧಿಕವಾಗಿದೆ.

ವಾರಕ್ಕೆರಡು ಬಾರಿ ನೀರು: ಮಂಡ್ಯ ನಗರಕ್ಕೆ ಸದ್ಯ ವಾರಕ್ಕೆ ಎರಡು ದಿನ ಮಾತ್ರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಒಂದು ಗಂಟೆಯಷ್ಟೇ ನೀರನ್ನು ಹರಿಸಲಾಗುತ್ತಿದೆ. ಹಲವು ಬಡಾವಣೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿಲ್ಲ. ನೀರಿನ ಅಸಮರ್ಪಕ ಪೂರೈಕೆ ನಡುವೆಯೂ ಏಪ್ರಿಲ್ ತಿಂಗಳಿನಿಂದ ನೀರಿನ ಬಾಕಿ ಶುಲ್ಕವನ್ನು 280 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕುಡಿಯುವ ನೀರು, ಕೃಷಿ ಚಟುವಟಿಕೆ ಎಲ್ಲವೂ ಮುಂಗಾರು ಮಳೆಯ ಮೇಲೆ ಅವಲಂಬಿತವಾಗಿದೆ. ನಿರೀಕ್ಷೆಯಂತೆ ಮುಂಗಾರು ಆಗಮನವಾದರೆ ನೀರಿನ ಕೊರತೆ ನಿವಾರಣೆಯಾಗಲು ಸಾಧ್ಯ. ಸದ್ಯ ಜಲಾಶಯದಲ್ಲಿರುವ ನೀರು ಬೇಸಿಗೆ ಅವಧಿ ಮುಗಿಯುವವರೆಗೆ ಸಾಲುತ್ತದೆ. ಜೂನ್‌ ನಂತರವೂ ಮಳೆ ಬಾರದಿದ್ದರೆ ಆಗ ಜಲಕ್ಷಾಮ ಎದುರಾಗುವ ಕಠಿಣ ಪರಿಸ್ಥಿತಿ ಎದುರಾಗಲಿದೆ.

● ಗಂಜಾಂ ಮಂಜು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.