ಮಳವಳ್ಳಿ ಪಟ್ಟಣ ಅಭಿವೃದ್ಧಿ ಮರೀಚಿಕೆ

ಕೊಳಾಯಿ ಸಂಪರ್ಕಗಳಿಗೆ ಮೋಟಾರ್‌ ಅಳವಡಿಕೆ • ಒಳಚರಂಡಿ, ರಸ್ತೆ, ಸ್ವಚ್ಛತೆ ಎಲ್ಲವೂ ಅದ್ವಾನ

Team Udayavani, May 14, 2019, 1:03 PM IST

mandya-tdt-1..

ಮಳವಳ್ಳಿ ಪಟ್ಟಣದಲ್ಲಿ ಅವ್ಯವಸ್ಥಿತ ಚರಂಡಿ ವ್ಯವಸ್ಥೆ.

ಮಂಡ್ಯ: ಹಲವಾರು ದಶಕಗಳಿಂದ ಮಳವಳ್ಳಿ ಪಟ್ಟಣ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪಟ್ಟಣ ತನ್ನ ಸೌಂದರ್ಯ ಕಾಪಾಡಿಕೊಳ್ಳಲಾಗದೆ ಅವ್ಯವಸ್ಥೆಯ ಆಗರವಾಗಿದೆ.

ಪಟ್ಟಣದೊಳಗೆ ಇದುವರೆಗೂ ಸುಂದರವಾದ ಬಡಾವಣೆಗಳು ರಚನೆಯಾಗಿಲ್ಲ. ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯಿಂದ ನೈರ್ಮಲ್ಯ ಹಾಳಾಗಿದೆ. ಕೊಳಾಯಿ ಸಂಪರ್ಕಗಳಿಗೆ ಪ್ರಭಾವಿಗಳು ನೇರವಾಗಿ ಮೋಟಾರ್‌ ಪಂಪ್‌ ಅಳವಡಿಸಿಕೊಂಡಿದ್ದರೂ ಕೇಳ್ಳೋರಿಲ್ಲ. ಸ್ವಚ್ಛತೆಯ ಬಗ್ಗೆಯಂತೂ ಮಾತನಾಡು ವಂತೆಯೇ ಇಲ್ಲ. ಸಾರ್ವಜನಿಕ ಆಸ್ಪತ್ರೆ ಹಲವು ಅವ್ಯವಸ್ಥೆಗಳ ಗೂಡಾಗಿದ್ದು, ಮಹಿಳಾ ಆಸ್ಪತ್ರೆ ಕಟ್ಟಡ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ರಸ್ತೆಗಳ ಸ್ಥಿತಿ ಉತ್ತಮಗೊಂಡಿಲ್ಲ. ಕಿರಿದಾಗಿರುವ ರಸ್ತೆಗಳು ಸಂಚಾರಕ್ಕೆ ಅಡ್ಡಿ ಉಂಟುಮಾಡುತ್ತಿವೆ. ಪಟ್ಟಣದೊಳಗೆ ಅವ್ಯವಸ್ಥೆಗಳು ತಾಂಡವವಾಡುತ್ತಿರುವ ನಡುವೆಯೇ ಮಳವಳ್ಳಿ ಪುರಸಭೆಗೆ ಚುನಾವಣೆ ಘೋಷಣೆಯಾಗಿದೆ.

ಪಟ್ಟಣದೊಳಗೆ ಬಡಾವಣೆಗಳು ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ರಚನೆಯಾಗುತ್ತಿಲ್ಲ. ಅವೈಜ್ಞಾನಿಕ ಮತ್ತು ಅವ್ಯವಸ್ಥಿತ ರೀತಿಯಲ್ಲಿ ತಲೆಎತ್ತಿವೆ. ಹಲವು ಬಡಾವಣೆಯ ರಸ್ತೆಗಳು ಕಿರಿದಾಗಿವೆ. ಒಂದು ವಾಹನ ಸುಗಮವಾಗಿ ಚಲಿಸುವಷ್ಟು ಮಾತ್ರ ಜಾಗವಿದೆ. ಮತ್ತೂಂದು ವಾಹನಕ್ಕೆ ಅಲ್ಲಿ ಜಾಗವೇ ಇಲ್ಲ. ಇಕ್ಕಟ್ಟಾಗಿರುವ ರಸ್ತೆಗಳಲ್ಲಿ ಸುಗಮ ಸಂಚಾರ ಇಂದಿಗೂ ಅಸಾಧ್ಯದ ಮಾತಾಗಿದೆ.

ಗುಣಮಟ್ಟವಿಲ್ಲ: ರಸ್ತೆಗಳು ಕಿರಿದಾಗಿದ್ದರೂ ಗುಣಮಟ್ಟದಿಂದ ಕೂಡಿವೆಯೇ ಎಂದರೆ ಅದೂ ಇಲ್ಲ. ಬಹುತೇಕ ರಸ್ತೆಗಳಲ್ಲಿ ಡಾಂಬರು ಕಿತ್ತು ಬಂದಿದೆ. ಹಳ್ಳ-ಗುಂಡಿಗಳು ನಿರ್ಮಾಣಗೊಂಡಿವೆ. ರಸ್ತೆಯ ಲ್ಲಿರುವ ಗುಂಡಿಗಳನ್ನು ಮುಚ್ಚುವುದಕ್ಕೂ ಪುರಸಭೆ ಆಸಕ್ತಿ ತೋರಿಲ್ಲ. ಕುಲಗಟ್ಟ ರಸ್ತೆಗಳಲ್ಲೇ ಪಟ್ಟಣದ ಸಾರ್ವ ಜನಿಕರು ಸಂಚರಿಸುವಂತಹ ದುಸ್ಥಿತಿ ಎದುರಾಗಿದೆ.

ಅವೈಜ್ಞಾನಿಕ ಒಳಚರಂಡಿ: ಪಟ್ಟಣದ ಒಳಚರಂಡಿ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಎಲ್ಲಿಂದ ಆರಂಭ ಮಾಡಿ ಎಲ್ಲಿಗೆ ಬಿಡಬೇಕು ಎಂಬ ನೀಲಿ ನಕಾಶೆಯೇ ಇಲ್ಲದೆ ಒಳಚರಂಡಿಗಳನ್ನು ನಿರ್ಮಿಸಲಾಗಿದೆ. ಇದರ ಪರಿಣಾಮ ನೀರು ಸರಾಗವಾಗಿ ಹರಿದುಹೋಗದೆ ಅಲ್ಲಲ್ಲೇ ನಿಲ್ಲುತ್ತಿದೆ. ಹೀಗೆ ನಿಲ್ಲುತ್ತಿರುವ ಒಳಚರಂಡಿ ನೀರು ರಸ್ತೆಯಲ್ಲೆಲ್ಲಾ ತುಂಬಿ ಹರಿಯುತ್ತಿದೆ. ಇದರಿಂದಲೂ ಸಾಕಷ್ಟು ಅವಾಂತರಗಳು ಪಟ್ಟಣದೊಳಗೆ ಸೃಷ್ಟಿಯಾಗಿದೆ. ಎಷ್ಟೋ ಕಡೆ ಒಳಚರಂಡಿ ನೀರನ್ನು ನೇರವಾಗಿ ತೆರೆದ ಚರಂಡಿಗಳಿಗೆ ಸಂಪರ್ಕ ಕಲ್ಪಿಸಿ ಹರಿಯಬಿಡಲಾಗುತ್ತಿದೆ. ಇದು ಇನ್ನಷ್ಟು ಅವಾಂತರಗಳಿಗೆ ಕಾರಣವಾಗುತ್ತಿದೆ.

ಕೊಳಾಯಿಗಳಿಗೆ ಮೋಟಾರ್‌ ಪಂಪ್‌ ಅಳವಡಿಕೆ: ಪಟ್ಟಣದ ಜನರಿಗೆ ಕುಡಿಯುವ ನೀರು ಪೂರೈಸುವ ಕೊಳಾಯಿ ಸಂಪರ್ಕಗಳು ಉತ್ತಮವಾಗಿಲ್ಲ. ಪ್ರಭಾವಿಗಳು ಕೊಳಾಯಿ ಸಂಪರ್ಕಗಳಿಗೆ ನೇರವಾಗಿ ಮೋಟಾರ್‌ ಪಂಪ್‌ ಅಳವಡಿಸಿಕೊಂಡಿದ್ದಾರೆ. ಅದನ್ನು ಪ್ರಶ್ನಿಸುವ ತಾಕತ್ತನ್ನು ಯಾರೂ ಪ್ರದರ್ಶಿಸುತ್ತಿಲ್ಲ. ಕೊಳಾಯಿ ಸಂಪರ್ಕಗಳಿಗೆ ಟ್ಯಾಪ್‌ಗ್ಳನ್ನು ಸರಿಯಾಗಿ ಅಳವಡಿಸಿಲ್ಲದ ಕಾರಣ ನೀರು ಸರಬರಾಜು ವೇಳೆ ಎಗ್ಗಿಲ್ಲದೆ ಪೋಲಾಗುತ್ತಿದ್ದರೂ ಯಾರೂ ಗಮನಹ ರಿಸುತ್ತಿಲ್ಲ. ನೀರು ಪೂರೈಕೆಗೂ ನಿಗದಿತ ಸಮಯ ನಿಗದಿಪಡಿಸಿಲ್ಲ. ಇಷ್ಟಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಪಟ್ಟಣದ ಜನರು ನೀರಿಗಾಗಿ ಕಾದು ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ವಚ್ಛತೆ ಸಂಪೂರ್ಣ ಹಾಳು: ಪಟ್ಟಣದ ಸ್ವಚ್ಛತೆಯಂತೂ ಸಂಪೂರ್ಣ ಹಾಳಾಗಿದೆ. ಕಸ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಪ್ರಮುಖ ರಸ್ತೆಗಳಲ್ಲಿ ಶುಚಿತ್ವ ಕಾಪಾಡುವುದನ್ನು ಬಿಟ್ಟರೆ ಪಟ್ಟಣದೊಳಗೆ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಸೌಂದರ್ಯ ಹೆಚ್ಚಿಸುವ ಬದ್ಧತೆಯನ್ನು ಯಾರೊಬ್ಬರೂ ಪ್ರದರ್ಶಿಸುತ್ತಿಲ್ಲ. ಇದರಿಂದ ಎಲ್ಲೆಲ್ಲೂ ಕಸದ ರಾಶಿಯ ದಿವ್ಯದರ್ಶನವಾಗುತ್ತಿದೆ.

ನಿಯಮಾವಳಿಗಳಿಲ್ಲ: ಕಟ್ಟಡ ಹಾಗೂ ಗೃಹ ನಿರ್ಮಾಣಕ್ಕೆ ಪರವಾನಗಿ ನೀಡುವ ವೇಳೆ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗುತ್ತಿದೆ. ಪಾರ್ಕಿಂಗ್‌ಗೆ ಜಾಗವನ್ನೇ ಬಿಡದೆ ಕಟ್ಟಡಗಳು ಮೇಲೇಳುತ್ತಿರುವುದರಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವಂತಹ ಪರಿಸ್ಥಿತಿ ಸೃಷ್ಠಿಯಾಗಿದೆ. ಪಟ್ಟಣದೊಳಗೆ ಅಳವಡಿಸಿರುವ ಬಹುತೇಕ ಹೈಮಾಸ್ಟ್‌ ದೀಪಗಳು ಹಾಳಾಗಿವೆ. ರಸ್ತೆ ವಿಭಜಕದ ಮಧ್ಯೆ ಅಳವಡಿಸಲಾಗಿರುವ ಬೀದಿ ದೀಪಗಳು ಕೆಟ್ಟು ಕತ್ತಲು ಆವರಿಸಿದ್ದರೂ ಹೊಸ ಬೀದಿ ದೀಪಗಳನ್ನು ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ.

ನಿವೇಶನ ಕೊಟ್ಟಿಲ್ಲ: ಪಟ್ಟಣದ ಶ್ರೀ ಬೀರೇಶ್ವರ ದೇವಸ್ಥಾನದ ಬಳಿ 33 ಎಕರೆ ಪ್ರದೇಶವನ್ನು ಮೀಸಲಿಟ್ಟು ಬಡವರಿಗೆ ನಿವೇಶನಗಳನ್ನಾಗಿ ಪರಿವರ್ತಿಸಿ ಹಂಚುವ ಕೆಲಸವೂ ನಡೆದಿಲ್ಲ. ಇದರಲ್ಲಿ ಹದಿನಾಲ್ಕೂವರೆ ಎಕರೆ ಪ್ರದೇಶಕ್ಕೆ ಹಕ್ಕುಪತ್ರ ವಿತರಿಸಲಾಗಿದ್ದರೂ ಅವುಗಳನ್ನು ನಿವೇಶನಗಳಾಗಿ ಪರಿವರ್ತಿಸಿಲ್ಲ. ಮೂಲ ಸೌಲಭ್ಯಗಳನ್ನೂ ಕಲ್ಪಿಸಿಲ್ಲ. ಇದೂ ಸಹ ನಿವೇಶನ ಆಕಾಂಕ್ಷಿತರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.