![1-patla](https://www.udayavani.com/wp-content/uploads/2024/07/1-patla-415x276.jpg)
Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ
Team Udayavani, Jun 29, 2024, 2:38 PM IST
![Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ](https://www.udayavani.com/wp-content/uploads/2024/06/ksrtc-8-620x342.jpg)
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ ಕಾರು ಸೇರಿದಂತೆ ಮೂರ್ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದು ನಂತರ ಹಳ್ಳಕ್ಕೆ ಉರುಳಿದೆ.
ಡಿವೈಡರ್ ಹಾರಿದ ಬಸ್ ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಕಾರು, ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಬಸ್ ನಲ್ಲಿದ್ದ 25 ಮಂದಿ ಪೈಕಿ ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಚಾಲಕನ ಕಾಲು ಮುರಿದಿದ್ದು, ಒಂದು ಕಾರು, 4ಕ್ಕೂ ಹೆಚ್ಚು ಬೈಕ್ ಜಖಂಗೊಂಡಿವೆ. ಬಸ್ ಗುದ್ದಿದ ರಭಸಕ್ಕೆ ಬಸ್ ಜೊತೆ ಹಳ್ಳಕ್ಕೆ ಬೈಕೊಂದು ಸಹ ಬಿದ್ದಿದೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
![1-patla](https://www.udayavani.com/wp-content/uploads/2024/07/1-patla-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13](https://www.udayavani.com/wp-content/uploads/2024/06/13-15-150x90.jpg)
Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು
![ಎಚ್ಡಿಕೆಗೆ ನಿಂದನೆ: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ದೂರು](https://www.udayavani.com/wp-content/uploads/2024/06/complaint-3-150x88.jpg)
ಎಚ್ಡಿಕೆಗೆ ನಿಂದನೆ: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ದೂರು
![23](https://www.udayavani.com/wp-content/uploads/2024/06/23-2-150x90.jpg)
Actor Darshan: ಕಾನ್ಸ್ಟೇಬಲ್ ಮೇಲೆಯೂ ನಟ ದರ್ಶನ್ ಗ್ಯಾಂಗ್ ಹಲ್ಲೆ
![Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ](https://www.udayavani.com/wp-content/uploads/2024/06/15-9-150x90.jpg)
Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ
![drowned](https://www.udayavani.com/wp-content/uploads/2024/06/drowned-1-150x93.jpg)
Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.