ಹೊಸಬರ ಅಖಾಡಕ್ಕೆ ಸಜ್ಜಾದ ಸಕ್ಕರೆ ನಾಡು


Team Udayavani, Apr 27, 2022, 6:05 AM IST

ಹೊಸಬರ ಅಖಾಡಕ್ಕೆ ಸಜ್ಜಾದ ಸಕ್ಕರೆ ನಾಡು

ಮಂಡ್ಯ: ಸಕ್ಕರೆ ನಾಡು ಮಂಡ್ಯ ರಾಜಕಾರಣವೇ ವಿಭಿನ್ನವಾಗಿದ್ದು, ದೇಶದ ರಾಜಧಾನಿ ದಿಲ್ಲಿಯಲ್ಲೂ ಸದ್ದು ಮಾಡುತ್ತದೆ. ಅದರಂತೆ ಮುಂದಿನ 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸಾಕಷ್ಟು ಮಂದಿ ಹೊಸಬರ ಸ್ಪರ್ಧೆಗೆ ಅಖಾಡ ಸಿದ್ಧಗೊಳ್ಳುತ್ತಿವೆ.

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಕೆ.ಆರ್‌.ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ನ ಯುವಕರ ಚಿತ್ತ ಚುನಾವಣೆಯತ್ತ ಹರಿದಿದೆ. ಕೆಲವು ಹೊಸ ಮುಖಗಳು ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಮುಖಂಡರನ್ನು ಸೆಳೆಯುವ ಯತ್ನ: ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮೂರೂ ರಾಜಕೀಯ ಪಕ್ಷಗಳು ಬೇರೆ ಪಕ್ಷಗಳ ಪ್ರಭಾವಿ ಮುಖಂಡರನ್ನು ಸೆಳೆ ಯಲು ಮುಂದಾಗಿದ್ದಾರೆ. ಇದರಿಂದ ಪûಾಂತರ ಚಟುವಟಿಕೆಗಳು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಸದ್ದು ಮಾಡಲಿದೆ. ಈಗಾಗಲೇ ಜೆಡಿಎಸ್‌, ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ಎಸ್‌.ಆತ್ಮಾನಂದ ಅವರನ್ನು ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸಿದೆ. ಇತ್ತ ಬಿಜೆಪಿ ಜಿಲ್ಲೆಯ ಹಿರಿಯ ರಾಜಕಾರಣಿಗಳಾದ ಕೆ.ವಿ.ಶಂಕರ ಗೌಡ ಅವರ ಮೊಮ್ಮಗ ಕೆ.ಎಸ್‌.ವಿಜಯಾನಂದ ಹಾಗೂ ದಿವಂಗತ ಎಸ್‌. ಡಿ.ಜಯರಾಂ ಪುತ್ರ ಅಶೋಕ್‌ ಜಯರಾಂ ಕರೆತರಲು ವೇದಿಕೆ ಸಿದ್ಧಗೊಳ್ಳುತ್ತಿದೆ.

ಮಂಡ್ಯ ಕ್ಷೇತ್ರಕ್ಕೆ ಬೇಡಿಕೆ: ಜಿಲ್ಲೆಯ ಕೇಂದ್ರ ಸ್ಥಾನವಾಗಿ ರುವ ಮಂಡ್ಯ ವಿಧಾನಸಭಾ ಕ್ಷೇತ್ರದ ಮೇಲೆ ಮೂರೂ ಪಕ್ಷಗಳು ಕಣ್ಣಿಟ್ಟಿವೆ. ಜೆಡಿಎಸ್‌ ಸ್ಥಾನ ಉಳಿಸಿಕೊಳ್ಳಲು ಮುಂದಾಗಿದೆ. ಇದರ ನಡುವೆ ಕಾಂಗ್ರೆಸ್‌ ಹಾಗೂ ಬಿಜೆಪಿ ಸಹ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿವೆ. ಜೆಡಿಎಸ್‌ನ ಹಾಲಿ ಶಾಸಕ ಎಂ.ಶ್ರೀನಿವಾಸ್‌, ಅಳಿಯ ಎಚ್‌.ಎನ್‌.ಯೋಗೇಶ್‌, ಕೆ.ಎಸ್‌.ವಿಜಯಾನಂದ ಹಾಗೂ ಕೀಲಾರ ರಾಧಾಕೃಷ್ಣ ಆಕಾಂಕ್ಷಿಯಾಗಿದ್ದಾರೆ. ಅತ್ತ ಕಾಂಗ್ರೆಸ್‌ನಲ್ಲೂ ಗಣಿಗ ರವಿಕುಮಾರ್‌, ಡಾ| ಕೃಷ್ಣ, ಎಂ.ಎಸ್‌.ಆತ್ಮಾನಂದ, ಎಂ.ಎಸ್‌.ಚಿದಂಬರ್‌ ರೇಸ್‌ನಲ್ಲಿದ್ದಾರೆ. ಇದರ ಜತೆಗೆ ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಕೂಡ ಕೇಂದ್ರ ಸ್ಥಾನಕ್ಕೆ ಬರಲು ಮುಂದಾಗಿದ್ದಾರೆಂಬ ಚರ್ಚೆಗಳು ನಡೆಯುತ್ತಿವೆ.

ಬಿಜೆಪಿಯಲ್ಲೂ ಆಕಾಂಕ್ಷಿತರಿಗೇನೂ ಕಡಿಮೆ ಇಲ್ಲ. ಕಳೆದ ಬಾರಿ ಸೋತಿದ್ದ ಚಂದಗಾಲು ಶಿವಣ್ಣ, ಅಶೋಕ್‌ ಜಯರಾಂ, ಮುಖಂಡ ಎಚ್‌.ಆರ್‌.ಅರವಿಂದ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸಿ.ಪಿ.ಉಮೇಶ್‌, ಲೋಕಸಭೆ ಉಪಚುನಾವಣೆಯಲ್ಲಿ ಪರಾಭವಗೊಂಡಿದ್ದ ಡಾ| ಸಿದ್ದರಾಮಯ್ಯ ಕೂಡ ಆಕಾಂಕ್ಷಿಯಾಗಿದ್ದಾರೆ.

ಇನ್ನುಳಿದಂತೆ ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಯಿಂದ ಇಂಡುವಾಳು ಎಸ್‌.ಸಚ್ಚಿದಾನಂದ, ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕದ ಲೂರು ಉದಯ್‌, ಬಿಜೆಪಿಯಿಂದ ಎಸ್‌. ಪಿ.ಸ್ವಾಮಿ, ಮಳವಳ್ಳಿ ಕ್ಷೇತ್ರದಿಂದ ಬಿಜೆಪಿ ಯಿಂದ ಕಲ್ಕುಣಿ ಮಹದೇವು ಪುತ್ರ ಸುಹಾಸ್‌, ಕೆ.ಆರ್‌.ಪೇಟೆ ಕ್ಷೇತ್ರದ ಜೆಡಿಎಸ್‌ನಿಂದ ಎಚ್‌.ಟಿ.ಮಂಜು, ಪಾಂಡವಪುರ ಕ್ಷೇತ್ರದ ಬಿಜೆಪಿಯಿಂದ ಡಾ| ಇಂದ್ರೇಶ್‌, ಕಾಂಗ್ರೆಸ್‌ನಿಂದ ರೇವಣ್ಣ ಚುನಾವಣೆಗಿಳಿಯಲು ಸಜ್ಜಾಗುತ್ತಿದ್ದಾರೆ.

ಕ್ಷೇತ್ರ, ಪಕ್ಷ ಬದಲಿಸಲಿದ್ದಾರಾ ನಾಯಕರು?
ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಕ್ಷೇತ್ರ ಬದಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಾಗಮಂಗಲ ಕ್ಷೇತ್ರದಿಂದ ಕೇಂದ್ರ ಸ್ಥಾನ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ. ಅತ್ತ ಸಚಿವ ಕೆ.ಸಿ.ನಾರಾಯಣ ಗೌಡ ಪಕ್ಷ ಬದಲಿಸಲಿದ್ದಾರೆ. ಕಮಲ ಬಿಟ್ಟು ಕೈ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಶಾಸಕ ಸಿ.ಎಸ್‌.ಪುಟ್ಟರಾಜು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆಂಬ ವದಂತಿಗಳು ಹರಡಿದ್ದವು. ಕೂಡಲೇ ಎಚ್ಚೆತ್ತ ಜೆಡಿಎಸ್‌ ವರಿಷ್ಠರು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಸೇರಲಿದ್ದಾರಾ ಸುಮಲತಾ, ಅಭಿಷೇಕ್‌?
ಸಂಸದೆ ಸುಮಲತಾ ಅಂಬರೀಷ್‌ ಹಾಗೂ ಪುತ್ರ ಅಭಿಷೇಕ್‌ ಬಿಜೆಪಿ ಸೇರಲಿದ್ದಾರೆಂಬ ಚರ್ಚೆಗಳು ಜಿಲ್ಲೆಯಾದ್ಯಂತ ಸದ್ದು ಮಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸ್ವತಃ ಸಂಸದೆ ಸುಮಲತಾ ಅವರೇ ಜಿಲ್ಲೆಯ ಜನ ಒಪ್ಪಬೇಕು ಎಂದಿದ್ದಾರೆ. ಅಭಿಷೇಕ್‌ರನ್ನು ಕೂಡ ಬಿಜೆಪಿಗೆ ಕರೆತರುವ ಮೂಲಕ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ಪ್ರಯತ್ನಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ಆದರೆ ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡಬೇಕು.

-ಎಚ್‌.ಶಿವರಾಜು

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.