ಮಂಡ್ಯ ಕೈ ಅಭ್ಯರ್ಥಿ ಘೋಷಣೆಗೆ ಕಸರತ್ತು


Team Udayavani, Jan 11, 2023, 3:24 PM IST

ಮಂಡ್ಯ ಕೈ ಅಭ್ಯರ್ಥಿ ಘೋಷಣೆಗೆ ಕಸರತ್ತು

ಮಂಡ್ಯ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಈಗಾಗಲೇ ಜೆಡಿಎಸ್‌ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಂತೆ ಕಾಂಗ್ರೆಸ್‌ ಕೂಡ ಅಭ್ಯರ್ಥಿ ಘೋಷಣೆಗೆ ಕಸರತ್ತು ನಡೆಸುತ್ತಿದ್ದು, ಐದು ಮಂದಿ ಆಕಾಂಕ್ಷಿತರ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿಯೇ ಅತಿ ಹೆಚ್ಚು 16 ಮಂದಿ ಆಕಾಂಕ್ಷಿತರು ಟಿಕೆಟ್‌ ರೇಸ್‌ನಲ್ಲಿದ್ದಾರೆ. ಎಲ್ಲರೂ ಕೆಪಿಸಿಸಿಗೆ 2 ಲಕ್ಷ ರೂ. ಠೇವಣಿ ಕಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಆಕಾಂಕ್ಷಿಗಳು ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಅಭ್ಯರ್ಥಿಗಳ ಸಂದರ್ಶನ: ಕೆಪಿಸಿಸಿಯಿಂದ ವೀಕ್ಷಕರು ಆಗಮಿಸಿ, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳ ಟಿಕೆಟ್‌ ಆಕಾಂಕ್ಷಿಗಳ ಸಂದರ್ಶನ ನಡೆಸಿದ್ದಾರೆ. ಅದರಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ 16 ಮಂದಿಯನ್ನು ಸಂದರ್ಶನ ನಡೆಸಿದ್ದಾರೆ. ಆಕಾಂಕ್ಷಿಗಳನ್ನು ಪ್ರತ್ಯೇಕ ಹಾಗೂ ಬೆಂಬಲಿಗರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇದರ ಸಂಪೂರ್ಣ ವರದಿಯನ್ನು ಕೆಪಿಸಿಸಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಐದು ಅಭ್ಯರ್ಥಿಗಳ ಹೆಸರು ಅಂತಿಮ: 16 ಮಂದಿ ಆಕಾಂಕ್ಷಿಗಳ ಪೈಕಿ ಐದು ಮಂದಿ ಆಕಾಂಕ್ಷಿತರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಐವರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದೆ. ಐವರಲ್ಲಿ ಪ್ರಮುಖವಾಗಿ ಕೀಲಾರ ರಾಧಾಕೃಷ್ಣ, ರವಿ ಕುಮಾರ್‌ ಗಣಿಗ, ಅಮರಾವತಿ ಚಂದ್ರಶೇಖರ್‌, ಡಾ.ಕೃಷ್ಣ ಹಾಗೂ ಹಿರಿಯ ಮುಖಂಡ ಎಂ.ಎಸ್‌. ಆತ್ಮಾನಂದ ಹೆಸರು ಅಂತಿಮ ಗೊಂಡಿದೆ. ಐವರಲ್ಲಿ ಇಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಘೋಷಣೆ ಬಾಕಿ ಇದೆ ಎನ್ನಲಾಗುತ್ತಿದೆ.

ಸಕ್ರಾಂತಿ ಬಳಿಕ ಘೋಷಣೆ?: ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಕ್ರಾಂತಿ ಬಳಿಕ ಕಾಂಗ್ರೆಸ್‌ನಲ್ಲಿ ಚಟುವಟಿಕೆ ಬಿರುಸು ಪಡೆಯಲಿದೆ. ಈಗಾಗಲೇ ಕೆಪಿಸಿಸಿಗೆ ವರದಿ ಸಲ್ಲಿಕೆಯಾಗಿದ್ದು, ನಂತರ ವರದಿ ಹೈಕಮಾಂಡ್‌ ತಲುಪಲಿದೆ. ಎಲ್ಲ ಪರಿಶೀಲನೆಯ ನಂತರ ಜನವರಿ ಕೊನೆಯಲ್ಲಿ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ಕಸರತ್ತು ಜೆಡಿಎಸ್‌ ಪಕ್ಷ ಈಗಾಗಲೇ ಹಾಲಿ ಶಾಸಕ ಎಂ.ಶ್ರೀನಿವಾಸ್‌ಗೆ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿಯಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಸರತ್ತು ನಡೆಸಿದೆ. ಎರಡು ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಅಳೆದು ತೂಗಿ ಅಭ್ಯರ್ಥಿ ಆಯ್ಕೆಗೆ ಮುಂದಾಗಿದೆ.

ಶಾಸಕ ಎಂ.ಶ್ರೀನಿವಾಸ್‌ ಸ್ಪರ್ಧೆಗಿಳಿಯುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಕೈ-ದಳ ಮೊದಲಿನಿಂದಲೂ ಸಾಂಪ್ರದಾ ಯಿಕ ಎದುರಾಳಿಗಳಾಗಿ ಪೈಪೋಟಿ ನೀಡುತ್ತಾ ಬಂದಿವೆ. ಈ ಬಾರಿ ಜೆಡಿಎಸ್‌ನಿಂದ ಕೇಂದ್ರ ಸ್ಥಾನ ಕಸಿದುಕೊಳ್ಳಲು ಪ್ರಬಲ ಅಭ್ಯರ್ಥಿಯ ಆಯ್ಕೆ ಮಾಡಲು ಕೈ ಕಸರತ್ತು ನಡೆಸುತ್ತಿದೆ.

ಏಳು ಕ್ಷೇತ್ರಗಳಿಗೂ ಘೋಷಣೆ: ಜನವರಿ ಕೊನೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ನಾಗಮಂಗಲದಿಂದ ಚಲುವರಾಯ ಸ್ವಾಮಿ, ಮಳವಳ್ಳಿಯಿಂದ ಪಿ.ಎಂ.ನರೇಂದ್ರ ಸ್ವಾಮಿ, ಶ್ರೀರಂಗಪಟ್ಟಣದಿಂದ ರಮೇಶ್‌ ಬಾಬು, ಮದ್ದೂರಿನಿಂದ ಗುರುಚರಣ್‌ ಹೆಸರು ಅಂತಿಮಗೊಂಡಿದೆ. ಉಳಿದಂತೆ ಕೆ.ಆರ್‌.ಪೇಟೆ, ಮೇಲುಕೋಟೆ ಹಾಗೂ ಮಂಡ್ಯ ಕ್ಷೇತ್ರಗಳ ಹೆಸರು ಅಂತಿಮ ಹಂತದಲ್ಲಿದೆ.

-ಎಚ್‌.ಶಿವರಾಜು

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.