Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ
ಒಂದೇ ಸೂರಿನಡಿ ಕೃಷಿ ಬಗ್ಗೆ ಮಾಹಿತಿ
Team Udayavani, Oct 24, 2024, 12:11 AM IST
ಮಂಡ್ಯ: ವಿದ್ಯಾವಂತ ಹಾಗೂ ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಹಾಗೂ ಒಂದೇ ಸೂರಿನಡಿ ರೈತರಿಗೆ ಎಲ್ಲ ರೀತಿಯ ಕೃಷಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಭಾರತದಲ್ಲಿಯೇ ಮೊದಲ ಬಾರಿಗೆ ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲಾಗುತ್ತಿದೆ.
ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಶಾಲೆ ತಲೆಎತ್ತಲಿದೆ.
ಮೈಸೂರು ಮಹಾರಾಣಿ ಕಾಲೇಜಿನ ನಿರ್ವಹಣ ವಿಭಾಗದ ಉಪನ್ಯಾಸಕ ಶ್ರೀರಂಗಪಟ್ಟಣದ ಗಂಜಾಂನ ಸತ್ಯಮೂರ್ತಿ ಹಾಗೂ ಅವರ ತಂಡ ರೈತರ ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಇಂಥದ್ದೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.
ಉಪನ್ಯಾಸಕ ಸತ್ಯಮೂರ್ತಿ ನೇತೃತ್ವದಲ್ಲಿ ಏಳು ಸದಸ್ಯರ ಗುಂಪು, ರೈತ ಕುಟುಂಬದ ಎಲ್ಲ ಶಿಕ್ಷಕರು, ರೈತರ ಸಂಕಷ್ಟ ಮತ್ತು ವಿವಿಧ ಸಮಸ್ಯೆಗಳನ್ನು ಪರಿಗಣಿಸಿ ಕೃಷಿಯನ್ನು ಲಾಭದಾಯಕ ಮಾಡಲು ಶಾಲೆಯನ್ನು ತೆರೆಯಲು ನಿರ್ಧರಿಸಿ, ಎರಡು ವರ್ಷಗಳ ಕಾಲ ಸಂಘದಿಂದ ವಿವಿಧ ಸಮಾಜಮುಖಿ ಕಾರ್ಯ ಮಾಡುವ ಮೂಲಕ ರೈತರ ಶಾಲೆಗೆ ಮುನ್ನುಡಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ
Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ
Mandya; ಕಿಡ್ನ್ಯಾಪರ್ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ
H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ
ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.