ಮಂಡ್ಯ ಕೇಂದ್ರ ಸ್ಥಾನದಲ್ಲಿ ತೆನೆ ಹೊರುವವರು ಯಾರು?


Team Udayavani, Aug 23, 2022, 4:08 PM IST

ಮಂಡ್ಯ ಕೇಂದ್ರ ಸ್ಥಾನದಲ್ಲಿ ತೆನೆ ಹೊರುವವರು ಯಾರು?

ಮಂಡ್ಯ: ಜಿಲ್ಲೆಯ ಕೇಂದ್ರ ಸ್ಥಾನ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾ ವಣೆಯ ಜೆಡಿಎಸ್‌ನ ಟಿಕೆಟ್‌ಗೆ ಪೈಪೋಟಿ ಹೆಚ್ಚಾ ಗಿದ್ದು, ಆಕಾಂಕ್ಷಿಗಳಲ್ಲಿ ಗೊಂದಲ, ಭಿನ್ನಮತಕ್ಕೂ ಕಾರಣವಾಗಿದೆ.

ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ವರಿಷ್ಠರ ಸೂಚನೆಯಂತೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ವರಿಷ್ಠರು ಕೆಲವು ಆಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಅದರಂತೆ ಕ್ಷೇತ್ರದಲ್ಲಿ ನಿರಂತರವಾಗಿ ಸಾಮಾಜಿಕ ಚಟು ವಟಿಕೆಗಳಲ್ಲಿ ತೊಡಗಿ ಮತದಾರರಿಗೆ ಹತ್ತಿರವಾಗುವ ಪ್ರಯತ್ನದಲ್ಲಿದ್ದಾರೆ.

ಸಿದ್ಧರಾಗಿರುವ ಆಕಾಂಕ್ಷಿಗಳು: ಜೆಡಿಎಸ್‌ನ ಟಿಕೆಟ್‌ ಆಕಾಂಕ್ಷಿಗಳ ದಂಡೇ ಇದೆ. 3ನೇ ಬಾ ರಿ ಶಾಸಕರಾಗಿ ರುವ ಎಂ.ಶ್ರೀನಿವಾಸ್‌ ಮತ್ತೂಮ್ಮೆ ಟಿಕೆಟ್‌ ಬಯಸಿದ್ದಾರೆ. ಇದರೊಂದಿಗೆ ಅವರ ಅಳಿ ಯ ಎಚ್‌.ಎನ್‌. ಯೋಗೇಶ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮ ಚಂದ್ರು, ಕೀಲಾರ ರಾಧಾಕೃಷ್ಣ, ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ, ಜೆಡಿಎಸ್‌ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡರು ರೇಸ್‌ನಲ್ಲಿದ್ದಾರೆ.

ವರಿಷ್ಠರ ಭರವಸೆ: ಜೆಡಿಎಸ್‌ ವರಿಷ್ಠರು ಈಗಾಗಲೇ ಕೆಲವು ಆಕಾಂಕ್ಷಿಗಳಿಗೆ ಟಿಕೆಟ್‌ ಭರವಸೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸಂಚರಿಸು ತ್ತಿದ್ದಾರೆ. ಮತದಾರರ ಓಲೈಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಅಲ್ಲದೆ, ಸಮಾಜ ಸೇವೆಯಲ್ಲಿ ತೊಡಗಿ ಜನರ ಅಭಿಪ್ರಾಯದ ಮೂಲಕ ವರಿಷ್ಠರ ಗಮನ ಸೆಳೆಯಲು ಮುಂದಾಗಿದ್ದಾರೆ.

ಗೊಂದಲದಲ್ಲಿ ಆಕಾಂಕ್ಷಿತರು: ವರಿಷ್ಠರ ನಡೆಗಳಿಂದ ಆಕಾಂಕ್ಷಿಗಳು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಈಗಾಗಲೇ ನನಗೆ ಟಿಕೆಟ್‌ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಆದರೆ, ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಗೊಂದಲ ಉಂಟಾಗಿದೆ ಎಂದು ಕೀಲಾರ ರಾಧಾಕೃಷ್ಣ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಡಲು ಸಜ್ಜಾಗಿದ್ದಾರೆ. ಇತ್ತ ಶಾಸಕ ಎಂ.ಶ್ರೀನಿವಾಸ್‌ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ತಮ್ಮ ಬೆಂಬಲಿಗರ ಮೂಲಕ ವರಿಷ್ಠರಿಗೆ ಒತ್ತಡ ಹಾಕುವ ಪ್ರಯತ್ನ ನಡೆಸಿದ್ದಾರೆ.

ಅದ್ದೂರಿ ಹುಟ್ಟುಹಬ್ಬಗಳಿಂದ ದೂರವಿದ್ದ ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡು ಟಿಕೆಟ್‌ ಆಕಾಂಕ್ಷಿ ಎಂಬ ಸಂದೇಶ ರವಾನಿಸಿದ್ದಾರೆ. ಇತ್ತ ಮನ್‌ ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ಕ್ಷೇತ್ರ ಸುತ್ತು ತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಕೀಲಾರ ರಾಧಾಕೃಷ್ಣ ತನ್ನದೇ ಆದ ಸ್ವಯಂ ಸೇವಕರ ಪಡೆ ಕಟ್ಟಿ ಜನರ ಬಳಿಗೆ ಹೋಗಲು ಸಜ್ಜಾಗುತ್ತಿದ್ದಾರೆ.

ಕಳೆದ ಬಾರಿಯೂ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟ್ಟು : ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಯ್ಕೆಯೂ ಕಗ್ಗಂಟಾಗಿತ್ತು. ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದರಿಂದ ಅಳೆದು ತೂಗಿ ಶಾಸಕ ಎಂ.ಶ್ರೀನಿವಾಸ್‌ರಿಗೆ ಮಣೆ ಹಾಕಲಾಗಿತ್ತು. ಆಕಾಂಕ್ಷಿಗಳಿಗೆ ಮುಂದಿನ ಬಾರಿ ಟಿಕೆಟ್‌ ನೀಡುವ ಭರವಸೆ ನೀಡಲಾಗಿತ್ತು. ಆಕಾಂಕ್ಷಿಗಳಾಗಿದ್ದ ಡಾ.ಕೃಷ್ಣ, ಅಶೋಕ್‌ಜಯರಾಂ ಜೆಡಿಎಸ್‌ ತೊರೆದು ಕೈ ಸೇರ್ಪಡೆಗೊಂಡರು. ಈಗ ಕೀಲಾರ ರಾಧಾಕೃಷ್ಣ ಕೂಡ ಕಾಂಗ್ರೆಸ್‌ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಈ ಬಾರಿ ಅಭ್ಯರ್ಥಿ ಆಯ್ಕೆ ಕಳೆದ ಬಾರಿಗಿಂತ ಕಗ್ಗಂಟಾಗಿ ಪರಿಣಮಿಸಲಿದೆ.

ಇಕ್ಕಟ್ಟಿನಲ್ಲಿ ಸಿಲುಕಿದ ಶಾಸಕ ಎಂ.ಶ್ರೀನಿವಾಸ್‌ :ಹಾಲಿ ಶಾಸಕ ಎಂ.ಶ್ರೀನಿವಾಸ್‌ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಆದರೆ, ಒಂದು ವೇಳೆ ಟಿಕೆಟ್‌ ಕೈತಪ್ಪಿದರೆ ತಮ್ಮ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌, ಆಪ್ತ ಕೆ.ಎಸ್‌. ವಿಜಯಾನಂದ ಇಬ್ಬರಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದು ಶಾಸಕ ಎಂ.ಶ್ರೀನಿವಾಸ್‌ಗೂ ತಲೆ ನೋವಾಗಿ ಪರಿಣಮಿಸಿದೆ. ಎಚ್‌.ಎನ್‌.ಯೋಗೇಶ್‌ ಹಾಗೂ ಕೆ.ಎಸ್‌.ವಿಜಯಾನಂದ ಇಬ್ಬರೂ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮುನ್ನಲೆಯಲ್ಲಿರುವ ಟಿಕೆಟ್‌ ಆಕಾಂಕ್ಷಿಗಳು : ಜೆಡಿಎಸ್‌ನಲ್ಲಿ ಸದ್ಯಕ್ಕೆ ನಾಲ್ವರು ಆಕಾಂಕ್ಷಿಗಳು ಮುನ್ನಲೆಯಲ್ಲಿದ್ದಾರೆ. ಶಾಸಕ ಎಂ.ಶ್ರೀನಿವಾಸ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ಹಾಗೂ ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ ಹೆಸರು ಬಲವಾಗಿ ಕೇಳಿ ಬರುತ್ತಿವೆ. ಆದರೆ ಜೆಡಿಎಸ್‌ ವರಿಷ್ಠರು ಯಾರಿಗೆ ಟಿಕೆಟ್‌ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

 

– ಎಚ್‌.ಶಿವರಾಜು

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.