ಸಮಸ್ಯೆಗಳ ತವರು ಕೆ.ಆರ್‌. ಪೇಟೆ


Team Udayavani, Aug 23, 2021, 9:03 PM IST

mandya news

ಕೆ.ಆರ್‌.ಪೇಟೆ: ಪುರಸಭಾ ಆಡಳಿತ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿಪಟ್ಟಣದಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು, ಹತ್ತಾರು ಸಮಸ್ಯೆಗಳು ತಾಂಡವವಾಡುತ್ತಿದ್ದು,ಸಾಂಕ್ರಮಿಕ ರೋಗ ಭೀತಿ ಮೂಡಿಸಿದೆ.

ಮಂಡ್ಯ ಜಿಲ್ಲೆಯಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಮೈಸೂರುಮಹಾರಾಜರ ಹೆಸರಿನಲ್ಲಿರುವ ಕೃಷ್ಣರಾಜಪೇಟೆ ಪಟ್ಟಣ ಅಭಿವೃದ್ಧಿಯಲ್ಲಿಹಿಂದುಳಿದಿದ್ದು, ಪಟ್ಟಣದಲ್ಲಿ ಕನಿಷ್ಠ ಸೌಲಭ್ಯಗಳನ್ನು ನೀಡುವಲ್ಲಿಪುರಸಭೆ ಸಂಪೂರ್ಣ ವಿಫ‌ಲವಾಗಿದ್ದು, ಇದಕ್ಕೆ ಪುರಸಭೆಯಲ್ಲಿಆಡಳಿತಾಧಿಕಾರಿಗಳಾಗಿದ್ದು, ಈ ಹಿಂದಿನಹಾಗೂಹಾಲಿ ಪಾಂಡವಪುರಉಪಭಾಗಾಧಿಕಾರಿಗಳು, ಕೆಲವು ಅಧಿಕಾರಿಗಳ ನಿರ್ಲಕ್ಷ್ಯ, ಭ್ರಷ್ಟಾಚಾರಹಾಗೂ ದಶಕಗಳಿಂದ ಬೇರುಬಿಟ್ಟಿರುವ ಹಂಗಾಮಿ ನೌಕರರುಕಾರಣವಾಗಿದ್ದಾರೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಪ್ರಥಮ ಪ್ರಜೆಯ ಮನೆಯ ಮುಂಭಾಗವೇ ಕಸದ ರಾಶಿ: ಸರ್ಕಾರಕೋಟ್ಯಂತರ ರೂ.ಹಣ ವ್ಯಯಿಸಿ ಕಸ ಸಾಗಿಸುವ ದೊಡ್ಡಲಾರಿ, ಟ್ರ್ಯಾಕ್ಟರ್‌ಗಳು,ಮಿನಿಗೂಡ್ಸ್‌ ವಾಹನಗಳು ಸೇರಿದಂತೆ ಅಗತ್ಯ ಪೌರಕಾರ್ಮಿಕರನ್ನು ನೇಮಿಸಿಕೊಟ್ಟಿದೆ.ಆದರೆ ಇವುಗಳನ್ನು ಸೂಕ್ತವಾಗಿ ಬಳಸಿಕೊಂಡು ಪಟ್ಟಣವನ್ನು ಸ್ವತ್ಛವಾಗಿಟ್ಟುಕೊಳ್ಳಲುಪುರಸಭೆ ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಪಟ್ಟಣದ ಬಹುತೇಕ ರಸ್ತೆಗಳಲ್ಲಿ ಕಸದರಾಶಿಗಳು ಬಿದ್ದಿದ್ದು, ಆ ಕಸವನ್ನು ಬೀದಿ ನಾಯಿಗಳು ಮತ್ತು ಕೋಳಿಗಳು ರಸ್ತೆಯತುಂಬೆಲ್ಲ ಹರಡುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚರಂಡಿಯಿಂದ ತೆಗೆದ ಕೊಳಕನ್ನುಎರಡು ದಿನಗಳ ಒಳಗಾಗಿ ತೆರವು ಮಾಡದೇ ವಾರಗಟ್ಟಲೇ ರಸ್ತೆಯಲ್ಲಿಯೇ ಬಿಡುತ್ತಿರುವುದು.

ಕೆಲವು ನಾಗರಿಕರು ಅವರ ಮನೆಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನುಮನೆಯಬಾಗಿಲಿಗೆ ಬರುವ ಕಸ ಸಂಗ್ರಹ ವಾಹನಕ್ಕೆ ನೀಡದೆ ರಸ್ತೆ ಬದಿಗೆಎಸೆಯುವುದು ಮತ್ತೂಂದು ಕಾರಣವಾಗಿದೆ. ಪಟ್ಟಣದ ಪ್ರಥಮ ಪ್ರಜೆ ಪುರಸಭಾಅಧ್ಯಕ್ಷರ ಮನೆಯ ಮುಂಭಾಗದಲ್ಲಿಯೇ ಕಸದ ರಾಶಿ ಬಿದ್ದಿರುವುದು ಪುರಸಭಾಆಡಳಿತ ಮಂಡಳಿ ತಲೆ ತಗ್ಗಿಸುವ ವಿಷಯವಾಗಿದೆ.

ಪಟ್ಟಣಕ್ಕೆ ಶಾಪವಾಗಿರುವ ಒಳಚರಂಡಿ: ಪಟ್ಟಣದಲ್ಲಿ ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಗುಂಡಿ ನಿರ್ಮಾಣ ಮಾಡಿಕೊಂಡು ಶೌಚಾಲಯದ ನೀರನ್ನು ಅದರಲ್ಲಿಬಿಟ್ಟುಕೊಳ್ಳುತ್ತಿದ್ದರು.

ಆದರೆ ಸುಮಾರು ಹದಿನೈದು ವರ್ಷಗಳ ಹಿಂದೆ ಪಟ್ಟಣದಲ್ಲಿಶೌಚಾಲಯದ ನೀರು ಪಟ್ಟಣದಿಂದ ಹೊರಸಾಗಿಸಿ ಪಟ್ಟಣವನ್ನು ಹೈಟೆಕ್‌ ಪಟ್ಟಣವನ್ನಾಗಿ ಮಾಡುತ್ತೇವೆ ಎಂದು ಅಂದಿನ ಸರ್ಕಾರ, ಒಳಚರಂಡಿ ಕಾಮಗಾರಿ ಆರಂಭಮಾಡಿದ್ದರು. ಆದರೆ, ಆ ಕೆಲಸ ಇಂದಿಗೂ ಮುಗಿದಿಲ್ಲ. ಆದರೆ ಸಾರ್ವಜನಿಕರು ಈಗತಮ್ಮ ಮನೆಗಳಲ್ಲಿ ಗುಂಡಿ ತೆಗೆಯುವುದನ್ನು ಬಿಟ್ಟು ಮನೆಯ ಶೌಚಾಲಯದಸಂಪರ್ಕವನ್ನು ಒಳ ಚರಂಡಿಗೆ ನೀಡುತ್ತಿದ್ದಾರೆ.
ಕಾಮಗಾರಿ ಮುಕ್ತಾಯವಾಗದೇ ಇರುವುದರಿಂದ ಶೌಚಾಲಯದ ಕೊಳಕು ನೀರು ಪಟ್ಟಣದ ನಡುರಸ್ತೆಯಲ್ಲಿ ಹರಿಯುವ ಮೂಲಕ ಸಾಂಕ್ರಾಮಿಕ ರೋಗ ಭೀತಿ ಮೂಡಿದೆ.ರಸ್ತೆಗಳು ಗುಂಡಿಮಯ: ಪಟ್ಟಣದ ಕೆಲವು ರಸ್ತೆಗಳಲ್ಲಿ ಸಂಪೂರ್ಣ ಗುಂಡಿಗಳೇತುಂಬಿದ್ದು, ವಾಹನ ಸವಾರರು ಓಡಾಡುವಾಗ ಸಂಚರಿಸಲು ಹರಸಾಹಸ ಪಡಬೇಕಿದೆ.ಪ್ರತಿಯೊಂದು ಧಾರ್ಮಿಕ ಆಚರಣೆಗಳು ನಡೆಯುವ ರಥ ಬೀದಿಯೇ ಗುಂಡಿಗಳಿಂದತುಂಬಿರುವುದು ಶೋಚನೀಯ ಸಂಗತಿಯಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.