ವೈರಮುಡಿ ಕಿರೀಟ ತರುವ ವಿಚಾರದಲ್ಲಿ ಗೊಂದಲ: ವಾಹನಕ್ಕೆ ತಡೆ


Team Udayavani, Mar 14, 2022, 2:06 PM IST

ವೈರಮುಡಿ ಕಿರೀಟ ತರುವ ವಿಚಾರದಲ್ಲಿ ಗೊಂದಲ: ವಾಹನಕ್ಕೆ ತಡೆ

ಮೇಲುಕೋಟೆ: ಸ್ಥಾನೀಕರು ಜಿಲ್ಲಾ ಖಜಾನೆಯಿಂದ ವೈರಮುಡಿ ಕಿರೀಟ ತಂದು ವಿಧಿ ವಿಧಾನ ಪೂರೈಸುವ ವಿಚಾರದಲ್ಲಿ ದೇವಾಲಯದ ಕೈಪಿಡಿಯ ನಿಯಮ, ಹೈಕೋರ್ಟ್ ನಿರ್ದೇಶನ, ಆಡಳಿತ ಸಮಿತಿ ತೀರ್ಮಾನಗಳನ್ನು ನಿರ್ಲಕ್ಷಿಸಿ ಒಂದನೇ ಸ್ಥಾನೀಕರನ್ನು ಮಾತ್ರ ಯಾವುದೇ ಆದೇಶ ನೀಡದೆ ಕರೆದುಕೊಂಡು ಹೋಗುತ್ತಿದ್ದ ಅಧಿಕಾರಿಗಳ ಕ್ರಮವನ್ನು 4ನೇ ಸ್ಥಾನೀಕರು ಪ್ರಶ್ನಿಸಿ ವೈರಮುಡಿ ಕಿರೀಟ ತರಲು ಜಿಲ್ಲಾ ಖಜಾನೆಗೆ ತೆರಳುತ್ತಿದ್ದ ವಾಹನ ತಡೆದ ಕಾರಣ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ದೇಗುಲದ ನಿಯಮಗಳು ಮತ್ತು ಸರ್ಕಾರಿ ಕಚೇರಿಯ ನಿಯಮಗಳನ್ನು ಉಲ್ಲಂಘಿಸಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಂಗಳಮ್ಮ ಸಹ ಹಾಜರಿರದೆ ವೈರಮುಡಿ ಕಿರೀಟ ತರಲು 4ನೇ ಸ್ಥಾನೀಕರನ್ನು ಕೈಬಿಟ್ಟು ಪ್ರಥಮ ಸ್ಥಾನೀಕರನ್ನು ಮಾತ್ರ ಕರೆದುಕೊಂಡು ಹೋಗುತ್ತಿದ್ದ ಅಧಿಕಾರಿಗಳ ವರ್ತನೆಯನ್ನು ತೀವ್ರವಾಗಿ ಖಂಡಿಸಿದ ಸ್ಥಾನೀಕರ ಕುಟುಂಬ, ದೇವಾಲಯದ ಇಒರನ್ನು ಸ್ಥಳಕ್ಕೆ ಕರೆಸಿ ಒಂದನೇ ಸ್ಥಾನೀಕರಿಗೆ ಆದೇಶ ನೀಡಿ ಕರೆದುಕೊಂಡು ಹೋಗಿಲ್ಲ. ಇಲ್ಲದಿದ್ದರೆ ದೇವಾಲಯ ಕೈಪಿಡಿಯ ನಿಯಮ ಮತ್ತು ಹೈಕೋರ್ಟ್ ನಿರ್ದೇಶನ, ಆಡಳಿತ ಸಮಿತಿಯ ತೀರ್ಮಾನದಂತೆ ಎಲ್ಲ ಸ್ಥಾನೀಕರಿಗೆ ಅವಕಾಶ ನೀಡಿ ಎಂದು ಪಟ್ಟು ಹಿಡಿದರು.

ಇದನ್ನೂ ಓದಿ:ಪ್ರಧಾನಿ ಮೋದಿಗೆ ಬಹುಪರಾಕ್…ಜೈಪುರ್ ಸಾಹಿತ್ಯ ಸಮ್ಮೇಳನದಲ್ಲಿ ಶಶಿ ತರೂರ್ ಹೇಳಿದ್ದೇನು

ಸುಮಾರು ಏಳು ಗಂಟೆಗೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಮತ್ತು ದೂರವಾಣಿಯಲ್ಲಿ ಮಾತನಾಡಿದ ಎಸಿ ಶಿವಾನಂದಮೂರ್ತಿ ಒಂದನೇ ಸ್ಥಾನೀಕರ ಪರವಾಗಿ ವಾದಿಸಿದರು. ಈ ವೇಳೆ ಪ್ರಶ್ನಿಸಿದ ನಾಲ್ಕನೇ ಸ್ಥಾನೀಕರು ಪ್ರಥಮ ಸ್ಥಾನೀಕರೆ ಹೋಗಬೇಕೆಂಬ ಆದೇಶ ಇದ್ದರೆ ಕೊಡಿ, ಕಳೆದ ಸಲವೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸುಳ್ಳು ಹೇಳಿ ನಮಗೆ ಅನ್ಯಾಯ ಮಾಡಿದಿರಿ ಜಿಲ್ಲಾಧಿಕಾರಿಗಳಿಗೂ ಸಮರ್ಪಕವಾದ ಮಾಹಿತಿ ನೀಡುವುದಿಲ್ಲ. ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿ ಅವರ ಪರ ಆದೇಶ ತರಲು ವಿಫಲವಾದ ಪ್ರಥಮ ಸ್ಥಾನೀಕರ ಪರವಾಗಿದ್ದೀರಿ. ಈ ಬಾರಿ ಸಹ ಮತ್ತೆ ಅದೇ ವರ್ತನೆ ಮರುಕಳಿಸುವಂತೆ ಮಾಡಿ ಅನ್ಯಾಯ ಮಾಡುತ್ತಿದ್ದೀರಿ. ಒಂಬತ್ತು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಗೆ ದೇಗುಲದ ಅಧಿಕಾರಿಗೆ ಮನವಿ ನೀಡಿದರೂ ಪರಿಶೀಲಿಸಿ ಕ್ರಮ ಜರುಗಿಸಿಲ್ಲ. ಯಾವುದೇ ನಿಯಮ ಪಾಲನೆ ಮಾಡದ ಕಾರಣ ನಿಮ್ಮಿಂದಲೇ ಗೊಂದಲ ಆಗುತ್ತಿದ್ದರೂ ಪರಿಹರಿಸುವ ಪ್ರಯತ್ನ ಮಾಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

4ನೇ ಸ್ಥಾನೀಕರ ಯಾವುದೇ ಮಾತನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದ ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಹೆಚ್ಚಿನ ಪೊಲೀಸರನ್ನು ಕರೆಸಿಕೊಂಡು ನಾಲ್ಕನೇ ಸ್ಥಾನೀಕರ ಕುಟುಂಬವನ್ನು ಬದಿಗೆ ಸರಿಸಿ ವೈರಮುಡಿ ತರುವ ವಾಹನದಲ್ಲಿ ಒಂದನೇ ಸ್ಥಾನೀಕರನ್ನು ಮಾತ್ರ ಕರೆದು ಕೊಂಡು ಮಂಡ್ಯ ಖಜಾನೆಗೆ ತೆರಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.