ನಮ್ಮ ಗೌರವ ರಕ್ಷಣೆಗೆ ನ್ಯಾಯಾಲಯದ ಮೊರೆ, ನಮಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ


Team Udayavani, Mar 6, 2021, 3:44 PM IST

ನಮ್ಮ ಗೌರವ ರಕ್ಷಣೆಗೆ ನ್ಯಾಯಾಲಯದ ಮೊರೆ, ನಮಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ

ಮಂಡ್ಯ: ನಾವು ಯಾವುದೇ ಭಯಕ್ಕೆ ನ್ಯಾಯಾಲಯಕ್ಕೆ ಹೋಗಿಲ್ಲ. ಸತ್ಯಾಂಶ ಇದ್ದರೆ ಬಿಡುಗಡೆ ಮಾಡಲಿ. ಆದರೆ ಗ್ರಾಫಿಕ್ಸ್   ಕ್ರಿಯೆಟ್ ಮಾಡಿ ಗೌರವಕ್ಕೆ ಧಕ್ಕೆ ತರಬಾರದು ಎಂಬ ಉದ್ದೇಶದಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥ ಘಟನೆಗಳಲ್ಲಿ ಸತ್ಯ ಇದ್ದರೆ ತೋರಿಸಲಿ. ಅದಕ್ಕೆ ನಾವು ತಲೆ ಬಾಗುತ್ತೇವೆ. ಜನಸಾಮಾನ್ಯರು ನಮ್ಮನ್ನು ನೋಡುತ್ತಿದ್ದಾರೆ. ನಮ್ಮ ಗೌರವದ ರಕ್ಷಣೆಗಾಗಿ ನ್ಯಾಯಾಲಯಕ್ಕೆ ಹೋಗಿದ್ದೇವೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿದೆ. ರಮೇಶ್‌ ಜಾರಕಿಹೊಳಿ ಅವರ ವಿಡಿಯೋ ಗ್ರಾಫಿಕ್ಸ್ ಮಾಡಿರಬಹುದು ಎಂದು ಸಮರ್ಥಿಸಿಕೊಂಡರು.

ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಿಜೆಪಿಗೆ ಹೋಗಿದ್ದ ಎಲ್ಲರನ್ನು ರಾಜಕೀಯವಾಗಿ ಷಡ್ಯಂತ್ರ ಮಾಡಲಾಗುತ್ತಿದೆ. ವೈಯಕ್ತಿಕವಾಗಿ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂಥ ವಿಚಾರಗಳನ್ನಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ರಾಜ್ಯ ಸರ್ಕಾರ ಕ್ರಮ: ರಮೇಶ್‌ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ತನಿಖೆ ಹಂತದಲ್ಲಿದೆ. ಸಿಡಿಯು ಅಸಲಿಯೋ, ನಕಲಿಯೋ ಎಂಬುದು ಮುಂದೆ ತಿಳಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೇಗ ಬಿಡುಗಡೆ ಮಾಡಲಿ: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇನ್ನೂ ಮೂರ‍್ನಾಲ್ಕು ಮಂದಿ ನಾಯಕರ ಸಿಡಿ ಇದೆ ಎಂದು ಹೇಳುತ್ತಿದ್ದಾನೆ. ಆತ ಬೇಗ ಬಿಡುಗಡೆ ಮಾಡಲಿ. ಆತನಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆತ ದೊಡ್ಡ ಮನುಷ್ಯನಾಗಲಿ ಬಿಡು ಎಂದು ವ್ಯಂಗ್ಯವಾಡಿದರು.

ರಮೇಶ್‌ ಜಾರಕಿಹೊಳಿ ಜತೆ ಮಾತನಾಡಿಲ್ಲ: ಘಟನೆಯ ನಂತರ ನಾನು ರಮೇಶ್‌ಜಾರಕಿಹೊಳಿ ಜತೆ ಮಾತನಾಡಿಲ್ಲ. ಅವರು ನಮ್ಮ ಸರ್ಕಾರದಲ್ಲಿ ಸಚಿವರಾಗಿದ್ದವರು. ಇವರ ವಿಚಾರದಲ್ಲೂ ರಾಜಕೀಯ ನಡೆದಿದೆ. ಒಂದಲ್ಲ ಒಂದು ದಿನ ಹೊರ ಬರಲಿದೆ. ನಾವು ಯಾವ ಸಚಿವರು ಯಾವುದೇ ಹೋಟೆಲ್‌ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಬಾಂಬೆ ಕಳ್ಳ ಎನ್ನುವುದನ್ನು ಬಿಡಬೇಕು: ನಾನು ಬಾಂಬೆಯಲ್ಲಿ ಸ್ವಚ್ಛ ಚಾರಿತ್ರ್ಯದಿಂದ ಬದುಕಿದ್ದೇನೆ. ನಾನೇನು ಕಳ್ಳತನ, ಲೂಟಿ, ಚೆಕ್‌ಬೌನ್ಸ್ ಮಾಡಿಲ್ಲ. ಆದರೂ ನನ್ನ ಬಾಂಬೆ ಕಳ್ಳ ಅಂತ ಕರೆಯುತ್ತಿದ್ದಾರೆ. ಯಾಕೆ ಕರೆಯುತ್ತಾರೆ. ನಾನು ಶೀಘ್ರದಲ್ಲಿಯೇ ರಾಜಕಾರಣವನ್ನೇ ತ್ಯಾಗ ಮಾಡುತ್ತೇನೆ. ಈ ರೀತಿ ಮಾತನಾಡಬಾರದು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.