ಶಾಸಕ ಶ್ರೀನಿವಾಸ್‌ ಮಂತ್ರಿಯಾಗಲಿ: ಜಿ.ಟಿ.ದೇವೇಗೌಡ


Team Udayavani, Feb 3, 2021, 8:12 PM IST

G T Devegouda

ಮಂಡ್ಯ: ಉತ್ತಮ ಕೆಲಸಗಾರರಾಗಿರುವ ಶಾಸಕ ಎಂ. ಶ್ರೀನಿವಾಸ್‌ ಅವರು ಒಂದು ಬಾರಿಯಾದರೂ ಮಂತ್ರಿಯಾಗಲೇಬೇಕೆಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದ ಕರ್ನಾಟಕ ಸಂಘದ ಆವರಣದಲ್ಲಿ ಹನಕೆರೆ ಎಂ.ಶ್ರೀನಿವಾಸ್‌ ಪ್ರತಿಷ್ಠಾನದ ವತಿಯಿಂದ ಶಾಸಕ ಎಂ.ಶ್ರೀನಿವಾಸ್‌ ಅವರ 70ನೇ ವರ್ಷದ ಹುಟ್ಟುಹಬ್ಬದ  ಅಂಗವಾಗಿ ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿ ಹಾಗೂ ಎಂ.ಶ್ರೀನಿವಾಸ್‌ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಅರಸಮ್ಮ ಮೆಣಸೇಗೌಡ ಹಿರಿಯ ನಾಗರಿಕರ ಆನಂದಾಶ್ರಮದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶ್ರೀನಿವಾಸ್‌ ಅವರೇ ಸಾಟಿ: ಶ್ರೀನಿವಾಸ್‌ ಅವರಿಗೆ ಶ್ರೀನಿವಾಸ್‌ ಅವರೇ ಸಾಟಿ. ಪ್ರಸ್ತುತ ರಾಜಕೀಯದಲ್ಲಿ ಭಾಷಣ ಹೆಚ್ಚಾಗಿ ಮಾಡುತ್ತಾರೆ. ಆದರೆ, ಶ್ರೀನಿವಾಸ್‌ ಅವರು ನಿತ್ಯ ನಿರಂತರವಾಗಿ ಕೆಲಸ ಮಾಡುತ್ತಾರೆ. ಮಾತು ಕಡಿಮೆ ಮಾಡಿ ಕೆಲಸ ಹೆಚ್ಚು ಮಾಡುತ್ತಾರೆ. ಅವರ ಕೆಲಸಗಳು ಇಂದಿಗೂ ಮಾದರಿಯಾಗಿದೆ.ಉತ್ತಮ ಕೆಲಸ ಮಾಡುತ್ತಾರೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕಪ್ಪು ಚುಕ್ಕೆ ಇಲ್ಲ: ಒಕ್ಕಲಿಗರ ಸಂಘದಲ್ಲಿ 30 ವರ್ಷ ನಿರ್ದೇಶಕರಾಗಿದ್ದರು. ಎಲ್ಲರ ಮೇಲೆ ಆಪಾದನೆ ಬಂದರೂ ಅವರ ವಿರುದ್ಧವೇ ಹೋರಾಟ ಮಾಡಿದವರು. ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನ್ಯಾಯಯುತವಾಗಿ ಶ್ರೀನಿವಾಸ್‌ ಅವರಿಗೆ ಸಚಿವ ಸ್ಥಾನ ಕೊಡಬೇಕಾಗಿತ್ತು. ಜನರ ಆಪಾದನೆಗೆ ಒಳಗಾಗಿಲ್ಲ. ಕಪ್ಪು ಚುಕ್ಕೆ ಇಲ್ಲ. ಮುಂದಿನ ಚು ನಾವಣೆಯಲ್ಲಿ ಸ್ಪರ್ಧಿಸಿ ಮಂತ್ರಿಯಾಗಲೇಬೇಕು. ಇಂಥ ವ್ಯಕ್ತಿಗಳು ಇನ್ನೂ ಇರಬೇಕು. ರಾಜಕಾರಣದಲ್ಲಿ ಎಲ್ಲ ವಿದ್ಯೆಗಳು ಇರಬೇಕು. ನಾಯಕರ ಕಿವಿಗೆ ಚುಚ್ಚಬೇಕು. ಆಗ ಮಾತ್ರ ಎಲ್ಲ ಹುದ್ದೆಗಳು ಸಿಗಲಿವೆ ಎಂದು ಹೇಳಿದರು. ಸುಳ್ಳು ಹೇಳುವವರಿಗೆ ಪ್ರಾತಿನಿಧ್ಯ: ಇತ್ತೀಚಿನ ರಾಜಕಾರಣಿಗಳು ಅಧಿಕಾರ ಸಿಕ್ಕ ನಂತರ ಅವರ ಬೆಳವಣಿಗೆ ಶ್ರಮಿಸುತ್ತಿದ್ದವರಿಗೆ ಪ್ರಾತಿನಿಧ್ಯ ಕೊಡುವುದಿಲ್ಲ. ಸುಳ್ಳು ಹೇಳುವವರಿಗೆ ಹೆಚ್ಚು ಪ್ರಾತಿನಿಧ್ಯ ಕೊಡಲಾಗುತ್ತಿದೆ ಎಂದು ರಾಜಕೀಯ ವ್ಯವಸ್ಥೆ ಬಗ್ಗೆ ಟೀಕಿಸಿದರು.

ಕೆ.ವಿ.ಶಂಕರಗೌಡರ ಆದರ್ಶ ಪಾಲನೆ: ಶಾಸಕ ಶ್ರೀನಿವಾಸ್‌ ಅವರು ಕಷ್ಟದಿಂದ ಬಂದವರು. ರೈತ ಹೋರಾಟದಿಂದ ಸಮಾಜ ಸೇವೆ ಮಾಡಲು ರಾಜಕೀಯಕ್ಕೆ ಬಂದರು. ನೀರಾವರಿ ಪ್ರದೇಶ ಇಲ್ಲದೇ ಇರುವ ಕಾಲದಲ್ಲಿ ಬರಗಾಲದ ಅನುಭವವಾಗಿದೆ. ಸ್ವಂತ ಊರಿನಲ್ಲೇ ವಿದ್ಯಾಭ್ಯಾಸ ಮಾಡಿದರು. ಹೆಚ್ಚು ಮೆರಿಟ್‌ ಪಡೆದು ವೈದ್ಯರಾಗಲು ಬಂದಿದ್ದರು. ಆದರೆ ವಕೀಲರಾಗಿ ಶಿಕ್ಷಣ ಪಡೆದರು.  ವಿದ್ಯಾರ್ಥಿ ದಿಸೆಯಲ್ಲಿದ್ದಾಗಲೇ ಕೆ.ವಿ.ಶಂಕರಗೌಡರ ಆದರ್ಶ ನೋಡಿ ರಾಜಕೀಯಕ್ಕೆ ಬಂದರು. ಹಿರಿಯರ ಆದರ್ಶಗಳನ್ನು  ಗೂಡಿಸಿಕೊಂಡಿದ್ದರು ಎಂದರು.

ಕಾವೇರಿ, ಕಾರ್ಖಾನೆ ಹೋರಾಟ: ರೈತ ಹೋರಾಟದಲ್ಲಿ ಭಾಗಿಯಾಗಿ ಮೈಷುಗರ್‌ ಕಾರ್ಖಾನೆಯನ್ನು ಉಳಿಸಲು ಹೋರಾಟ,  ಕಾವೇರಿ ಹೋರಾಟ ಮಾಡಿದರು. ರೈತರ ಕಷ್ಟಗಳನ್ನು ಹತ್ತಿರದಿಂದ ಕಂಡಿದ್ದಾರೆ. ರೈತ ಹೋರಾಟಗಾರ ನಂಜುಂಡಸ್ವಾಮಿ ಅವರ ಜತೆ ಹೋರಾಟದಲ್ಲಿ ಭಾಗಿಯಾಗಿದ್ದರು. ವೈಜಾnನಿಕ ಹೋರಾಟಗಾರರಾಗಿದ್ದ ನಂಜುಂಡಸ್ವಾಮಿ ಅವರ ಜತೆ ಸೇರಿಕೊಂಡರು ಎಂದು ಹೇಳಿದರು.

 ಇದನ್ನೂ ಓದಿ :ಬಂಡವಾಳಶಾಹಿ ಪರ ಕೇಂದ್ರ ಬಜೆಟ್‌ : ಕೆಪಿಸಿಸಿ ವಕ್ತಾರ ಚಲುವರಾಯಸ್ವಾಮಿ

ಮೆಡಿಕಲ್‌ ಕಾಲೇಜು ತಂದವರು: ಮಂಡ್ಯ ವಿಶ್ವ ವಿದ್ಯಾಲಯ ಆಗಲಿಕ್ಕೆ ಬಹಳ ಕಷ್ಟಪಟ್ಟರು. ವಿಳಂಬವಾಗಿದ್ದ ವಿವಿಯನ್ನು ಶೀಘ್ರದಲ್ಲಿಯೇ ಮಾಡಬೇಕು ಎಂದು ಮಂಜೂರು ಮಾಡಿದರು. ಅಲ್ಲದೆ, ಮಂಡ್ಯಕ್ಕೆ ಮೆಡಿಕಲ್‌ ಕಾಲೇಜು ತಂದ ಕೀರ್ತಿ ಎಂ.ಶ್ರೀನಿವಾಸ್‌ ಅವರಿಗೆ ಸಲ್ಲುತ್ತದೆ. ಆದ್ದರಿಂದ ಅವರು ಕೆಲಸ ಮಾಡುತ್ತಾರೆ. ಇದರಿಂದ ಎಲ್ಲರಿಗೂ ಇಷ್ಟವಾಗುತ್ತಾರೆ. ಬಡವರು, ಹಿಂದುಳಿದ ವರ್ಗದವರಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸಿದ್ದಾರೆ. ಕಲಾ, ಶಿಕ್ಷಣ ಪ್ರೇಮಿಯಾಗಿ ವ್ಯಕ್ತಿತ್ವ ಹೊಂದಿದ್ದಾರೆ ಎಂದರು.

ಸಮಾರಂಭದಲ್ಲಿ ಶಾಸಕ ಎಂ.ಶ್ರೀನಿವಾಸ್‌  ಅವರನ್ನು ಅಭಿನಂದಿಸಲಾಯಿತು. ಕೆ.ಆರ್‌.ಪೇಟೆ ರೋಬೋ ಮಂಜೇಗೌಡ ಅವರಿಗೆ ಅರಸಮ್ಮ, ಮೆಣಸೇಗೌಡ ಕೃಷಿ ಪ್ರಶಸ್ತಿ, ಬೆಂಗಳೂರಿನ ಸಮಾಜ ಸೇವಕ ವಿ.ಲಕ್ಷ್ಮೀನಾರಾಯಣ್‌ ಅವರಿಗೆ ಎಂ.ಶ್ರೀನಿವಾಸ್‌ ಮಾಜ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಆಯುಕ್ತ ಕೆ.ಎ.ದಯಾನಂದ್‌, ಪ್ರತಿಷ್ಠಾನದ ಅಧ್ಯಕ್ಷ ಡಿ.ಶಿವರಾಜು ಕೀಲಾರ, ಕರ್ನಾಟಕ   ಘದ ಅದ್ಯಕ್ಷ ಪೊ›.ಜಯಪ್ರಕಾಶ್‌ ಗೌಡ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌, ಪ್ರತಿಷ್ಠಾನದ ಉಪಾಧ್ಯಕ್ಷ ಜಿ.ಎನ್‌. ಶಿವರುದ್ರಪ್ಪ, ಕಾರ್ಯದರ್ಶಿ ಎಚ್‌.ಬಿ.ನಾಗಪ್ಪ, ಖಜಾಂಚಿ ಎಚ್‌.ಎಂ.ರಾಮಚಂದ್ರ, ಪ್ರಧಾನ ಕಾರ್ಯದರ್ಶಿ. ಎಂ.ಕೃಷ್ಣೇಗೌಡ ಕೀಲಾರ ಹಾಜರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.