ಸಿದ್ದರಾಮಯ್ಯ ನಾಳೆಯೇ ಸಿಎಂ ಆಗ್ಬೇಕಂತ ಯಾರೂ ಹೇಳ್ತಿಲ್ಲ


Team Udayavani, May 10, 2019, 4:24 PM IST

mand-1

ಮಂಡ್ಯ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್‌ನ ಹಲವು ಶಾಸಕರು, ಮುಖಂಡರು ಬಯಸಿರುವುದು ನಿಜ. ಆದರೆ, ನಾಳೆ ಬೆಳಗ್ಗೆಯೇ ಕುಮಾರಸ್ವಾಮಿ ಅವರನ್ನು ಬದಲಾಯಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಅವರ್ಯಾರೂ ಹೇಳಿಲ್ಲ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಮತ್ತೆ ಸಿದ್ದರಾಮಯ್ಯ ಸಿಎಂ ಆಗಬೇಕೆನ್ನು ವವರ ಪರ ಬ್ಯಾಟ್ ಬೀಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಬೇಕು ಎಂದು ಜಾತ್ಯತೀತವಾಗಿ, ಪಕ್ಷಾತೀತವಾಗಿ ಬಯಸಿದ್ದಾರೆ. ಅದನ್ನು ತಪ್ಪು ಅಂತ ಹೇಳಿದರೆ ಅಂತಹವರಿಗೆ ಏನು ಹೇಳಬೇಕೂಂತ ಗೊತ್ತಾಗುತ್ತಿಲ್ಲ. ನಮಗೆ ಮುಂದಿನ ದಿನಗಳಲ್ಲಿ ಒಳ್ಳೆ ನಾಯಕ ಮುಖ್ಯಮಂತ್ರಿ ಹುದ್ದೆಗೇರಬೇಕು, ಎಲ್ಲಾ ವರ್ಗದ ವರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕ ಬೇಕು ಅಂತ ಹೇಳಿದ್ದಾರೆ. ಅದರಲ್ಲೇನು ತಪ್ಪು ಎಂದು ಗುರುವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡುತ್ತಾ ಪ್ರಶ್ನಿಸಿದರು.

ಸಿದ್ದರಾಮಯ್ಯ ಎಲ್ಲರಿಗೂ ಇಷ್ಟ: ನಾಲ್ಕು ವರ್ಷಕ್ಕೆ ಚುನಾವಣೆಯಾಗಲೀ ಅಥವಾ ಒಂದು ವರ್ಷಕ್ಕೇ ಚುನಾವಣೆಯಾಗಲಿ ಸಿದ್ದರಾಮಯ್ಯ ಮುಂದೆ ಸಿಎಂ ಆಗಲಿ ಎಂದು ಬಯಸುವುದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯನವರನ್ನು ಎಲ್ಲಾ ಶೋಷಿತ ವರ್ಗದವರೂ ಇಷ್ಟಪಡುತ್ತಾರೆ. ಕಳೆದ ಚುನಾವಣಾ ಸಮಯದಲ್ಲಿ ಸಿದ್ದ ರಾಮಯ್ಯನವರ ಬಗ್ಗೆ ಕೆಲವು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದಲ್ಲಿ ಅಸ ಮಾಧಾನವಿತ್ತು. ಅವರಿಗೂ ಈಗ ಅದು ಅರ್ಥವಾಗಿದೆ. ಸಿದ್ದರಾಮಯ್ಯ ಯಾವುದೇ ಜಾತಿ ವಿರೋಧಿಯಲ್ಲ. ಎಲ್ಲಾ ಜಾತಿಗಳ ಬಡವರ ಪರ ಇದ್ದಾರೆ. ಅವರ ಆv‌ಳಿತ ಈಗಲೂ ರಾಜ್ಯಕ್ಕೆ ಅವಶ್ಯಕತೆ ಇದೆ ಎಂದು ಹೇಳಿದರು.

ಕಾಂಗ್ರೆಸ್‌ ಪ್ಲಾನ್‌ ಮಾಡಿಲ್ಲ: ಮಧ್ಯಂತರ ಚುನಾವಣೆಗೆ ಕಾಂಗ್ರೆಸ್‌ ಯಾವುದೇ ಪ್ಲಾನ್‌ ಮಾಡಿಕೊಂಡಿಲ್ಲ. ಸರ್ಕಾರ ನಡೆಸುವವರು ಸಹಾಯ ಮಾಡಿರುವವರ ಬಗ್ಗೆ ಕೃತಜ್ಞತಾ ಭಾವನೆ ಇಟ್ಟುಕೊಳ್ಳಬೇಕು. ಗೌರವದೊಂದಿಗೆ ವಿಶ್ವಾಸವಿಟುrಕೊಂಡು ಮುನ್ನಡೆದರೆ 5 ವರ್ಷ ಕುಮಾರಸ್ವಾಮಿ ಸಿಎಂ ಹುದ್ದೆ ಯಲ್ಲಿರುವುದಕ್ಕೆ ಅವಕಾಶವಿದೆ. ಆದರೆ, ಇರುವುದು, ಅದನ್ನು ಕಳೆದುಕೊಳ್ಳುವುದು, ಚುನಾವಣೆ ಘೋಷಣೆ ಮಾಡುವುದು ಎಲ್ಲವೂ ಕುಮಾರಸ್ವಾಮಿ ಅವರ ನಡತೆ ಮೇಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನವರನ್ನು ವಿಸ್ವಾಸಕ್ಕೆ ತೆಗೆದುಕೊಳ್ಳ ದಿದ್ದರೆ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂಬ ಸೂಚನೆಯನ್ನು ಪರೋಕ್ಷವಾಗಿ ನೀಡಿದರು.

ಮನ್‌ಮುಲ್ಗೆ ಚುನಾವಣೆ ನಡೆಸಿ: ಮಂಡ್ಯದಲ್ಲಿ ಈಗಾಗಲೇ ಮನ್‌ಮುಲ್ಗೆ ಚುನಾವಣೆ ನಡೆಯಬೇಕಿತ್ತು. ರಾಜ್ಯದ ಎಲ್ಲಾ ಕಡೆ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಚುನಾವಣೆ ನಡೆಯುತ್ತಿದೆ. ಆದರೆ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ಚುನಾವಣೆ ನಡೆಯಬಾರದು ಎಂದು ರಾಜ್ಯಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಪರವಾಗಿ ಕೆಲಸ ಮಾಡಬೇಕು. ಆದರೆ, ಒಂದು ಪಕ್ಷದವರ ಏಜೆಂಟರ ರೀತಿ ಕೆಲಸ ಮಾಡುತ್ತಿರುವ ಸಹಕಾರ ಕ್ಷೇತ್ರದ ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಮಾನ- ಮರ್ಯಾದೆ ಇದ್ದರೆ ಮೊದಲು ಮನ್‌ಮುಲ್ಗೆ ಚುನಾವಣೆ ನಡೆಸಲಿ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಚೆಲುವರಾಯಸ್ವಾಮಿ ಹೇಳಿದರು. ಮನ್‌ಮುಲ್ ಚುನಾವಣೆಗೆ ತಡೆ ಉಂಟು ಮಾಡಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿದರೆ ಜಿಲ್ಲೆಯ ಜನರು ಉಪವಾಸವಿರುವುದಿಲ್ಲ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಇತರೆ ಕಡೆಗಳಿಗಿಂತ ಉತ್ತಮವಾಗಿದೆ. ಈ ಆಡಳಿತ ಮಂಡಳಿಯಲ್ಲಿ ಕಾಂಗ್ರೆಸ್‌ ನಿರ್ದೇಶಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂಬ ಕಾರಣಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹೆಚ್‌ಡಿಕೆ ಸೂಚನೆ ಕೊಡುವುದು ಸರಿಯಲ್ಲ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದುಕೊಂಡು ಒಂದು ರಾಷ್ಟ್ರೀಯ ಪಕ್ಷದವರಿಗೆ ಸೂಚನೆ ನೀಡುವುದು ಎಷ್ಟರಮಟ್ಟಿಗೆ ಸರಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 37 ಸ್ಥಾನ ಗೆದ್ದು ಮುಖ್ಯಮಂತ್ರಿಯಾಗಿ 80 ಸ್ಥಾನ ಗೆದ್ದವರಿಗೆ ನೀವು ಹೀಗೆ ನಡೆದುಕೊಳ್ಳಬೇಕು, ಹಾಗೇ ನಡೆದುಕೊಳ್ಳಬೇಕು ಎಂದು ಸೂಚನೆ ಕೊಡುತ್ತಾರೆ. ಆದರೆ ಅವರ ನಡವಳಿಕೆಯಲ್ಲಿ ಮಾತ್ರ ಯಾವುದೇ ಬದಲಾವಣೆ ಮಾಡಿಕೊಳ್ಳುವುದಿಲ್ಲ. ಯಾವುದೇ ಮೈತ್ರಿ ಸರ್ಕಾರದಲ್ಲಿ ನಾವು ಈ ರೀತಿಯ ನಡವಳಿಕೆಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಅಸಮಾ ಧಾನ ಹೊರಹಾಕಿದರು.

ಹಣ ನುಂಗಿದವರು ಜೆಡಿಎಸ್‌ನವರು: ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ಭ್ರಷ್ಟಾಚಾರ ನಡೆಸಿ ಹಣ ನುಂಗಿದವರು ಶಿವಮೊಬ್ಬದ ಜೆಡಿಎಸ್‌ ಅಧ್ಯಕ್ಷ ಮಂಜುನಾಥ್‌ಗೌಡರು. ಈಗ ಅವರನ್ನು ವಿಚಾರಣೆಗೆ ಒಳಪಡಿಸಿದರೂ ಅವ್ಯವಹಾರ ಹೊರಗೆ ಬರುತ್ತದೆ ಎಂದು ಆರೋಪಿಸಿದ ಚಲುವರಾಯಸ್ವಾಮಿ, ಬ್ಯಾಂಕಿನ ಅಧ್ಯಕ್ಷರಾಗಿ ರಾಜಣ್ಣ ಅತ್ಯಂತ ಗೌರವಯುತವಾಗಿ ಆಡಳಿತ ನಡೆಸುತ್ತಿದ್ದಾರೆ. ಯಾವುದೇ ಅವ್ಯವಹಾರವಿಲ್ಲದೆ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದರೂ ಅದನ್ನು ಮುಚ್ಚಿಟ್ಟು ರಾಜಣ್ಣ ಅವರ ಮೇಲೆ ತಪ್ಪು ಹಾಕಬಹುದು. ಏಕೆಂದರೆ, ಕೋ-ಆಪರೇಟಿವ್‌ ಅಧಿಕಾರಿಗಳು ಹೆಣ್ಣನ್ನ, ಗಂಡು ಮಾಡ್ತಾರೆ, ಅವ್ವನ್ನ ಅಪ್ಪ ಮಾಡ್ತಾರೆ ಎಂದು ಟೀಕಿಸಿದರು.

ಮಂಡ್ಯ: ಚುನಾವಣೆಯಲ್ಲಿ ನಾವು ಯಾರ ಪÃವಾಗಿಯೂ ಕೆಲಸ ಮಾಡಿಲ್ಲ. ತಟಸ್ಥರಾಗಿ ಉಳಿದಿದ್ದೆವು. ನಾವು ಸೋತಿರುವವರು. ಜನ ನಮ್ಮನ್ನು ಬೇಡ ಎಂದು ತಿರಸ್ಕರಿಸಿದ್ದಾರೆ. ಅದರಿಂದ ನಮ್ಮ ಕೆಲಸ ಮಾಡಿಕೊಂಡು ಹೋಗ್ತಿದ್ದೇವೆ ಎಂದು ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ತಿಳಿಸಿದರು.

ನಾನು ನಮ್ಮ ಕಾರ್ಯಕರ್ತರನ್ನು ಕರೆದು ಸುಮಲತಾ ಪರ ಕೆಲಸ ಮಾಡಬೇಕು ಅಂತಾ ಸೂಚಿಸಿದ್ದಿರಿ ಅಂತ ಜೆಡಿಎಸ್‌ನವರು ಹೇಳುತ್ತಿದ್ದಾರೆ. ನಾನು ಯಾವ ರೀತಿ ಮುಕ್ತವಾಗಿ ಸುಮಲತಾ ಪರ ಚುನಾವಣೆ ಮಾಡಿದ್ದೇನೆ ಅಂತಾ ನೀವು ಹೇಳಬೇಕು. ನಮಗಾಗದವರು ಏನಾದ್ರೂ ಒಂದು ಹೇಳ್ತಾನೇ ಇರ್ತಾರೆ. ಮೊಸರಲ್ಲಿ ಕಲ್ಲು ಹುಡುಕೋದು ಅವರ ಸ್ವಭಾವ ಎಂದು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ತಟಸ್ಥವಾಗಿದ್ದೆವು: ಶ್ರೀರಂಗಪಟ್ಟಣದಲ್ಲಿ ಬಂಡಿಸಿದ್ದೇಗೌಡ ವಂಶಿಕರಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು. ಆ ವೇಳೆ ಕುಟುಂಬದ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಇಷ್ಟೆಲ್ಲಾ ಆದರೂ ಕೂಡ ಯಾಕೆ ಸುಮ್ಮನಿದ್ದೀರಿ. ನಮ್ಮನ್ನು ಸ್ವತಂತ್ರವಾಗಿ ಬಿಟ್ಟರೆ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದರು. ಆದರೂ ಚುನಾವಣೆಯಲ್ಲಿ ತಟಸ್ಥವಾಗಿದ್ದೆವು ಎಂದು ತಿಳಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರದಲ್ಲೂ ಜೆಡಿಎಸ್‌ನ ಎಂಟು ಜನ ಶಾಸಕರು, ಮೂರು ಜನ ಎಂಎಲ್ಸಿ ಇದ್ದಾರೆ. ಅವರಿಗಿಂತ ಚಿಕ್ಕವರು ನಾವು. ಅದರಲ್ಲೂ ಸೋತಿರೋರು. ಜನ ನಮ್ಮನ್ನು ಬೇಡ ಅಂತಾ ಹೇಳಿದ್ದಾರೆ. ಆದರಿಂದ ನಾವು ನಮ್ಮ ಕೆಲಸ ಮಾಡಿಕೊಂಡು ಹೋಗ್ತಿದ್ದೇವೆ ಎಂದರು.

ಕಾಂಗ್ರೆಸ್ಸಿಗರ ಟಾರ್ಗೆಟ್: ಮಂಡ್ಯ ಕಾಂಗ್ರೆಸ್ಸಿಗರನ್ನು ಸರ್ಕಾರ ಬಂದ ದಿನದಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಸ್ಥಳೀಯವಾಗಿ ನಡೆದ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ನಡೆದಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಕಷ್ಟು ಸೀರಿಯಸ್‌ ಆಗಿ ಚುನಾವಣೆ ಮಾಡುತ್ತಿದ್ದೇವೆ. ಈ ಚುನಾವಣೆಯಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು..

ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ಚುನಾವಣೆ ನಡೆದು ಮೂರು ತಿಂಗಳು ಆಗಬೇಕಿತ್ತು. ಈವರೆಗೆ ಚುನಾವಣೆ ನಡೆಸಿಲ್ಲ. ಸೋಲು – ಗೆಲುವನ್ನು ಜನ ತೀರ್ಮಾನ ಮಾಡಿದ ಮೇಲೆ ಒಪ್ಪಿಕೊಳ್ಳಬೇಕು ಎಂದು ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.