![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 29, 2019, 5:31 AM IST
ನಾಗಮಂಗಲ: ‘ನಾನು ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯವರೆಗೂ ಯಾವುದೇ ಉಪಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ’ ಎಂದು ಮಾಜಿ ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಯಡಿಯೂರಪ್ಪ ನವರು ಬಹುಮತ ಸಾಬೀತು ಪಡಿಸುವ ಮೂಲಕ ಸೋಮವಾರ ವಿಶ್ವಾಸಮತವನ್ನು ಗೆಲ್ಲವುದು ನೂರಕ್ಕೆ ನೂರು ಸತ್ಯ ಎಂದರು. ರಾಜಕಾರಣ ದಲ್ಲಿ ಅಧಿಕಾರಗಳು ಸಿಗುವುದೇ ವಿರಳ. ಅದರಲ್ಲೂ ಸಂಪೂರ್ಣ ಅವಧಿ ಅಧಿಕಾರ ನಡೆಸುವ ಎಲ್ಲಾ ಅವಕಾಶಗಳಿದ್ದರೂ ಸುಲಭವಾಗಿ ಬಿಟ್ಟು ಬರುವಂತಹ ಕುಟುಂಬ ಯಾವುದಾದರೂ ಇದ್ದರೆ ಅದು ದೇವೇಗೌಡರ ಕುಟುಂಬ.
ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೂ ಇದೇ ರೀತಿ ಯಾಗಿದೆ. ಕಳೆದ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗಲೂ ಹೀಗೆಯೇ ಆಗಿತ್ತು. ಈಗಲೂ ಹೀಗೆಯೇ ಆಗಿದೆ. ಅದು ದೈವ ತೀರ್ಮಾನವೋ ಅಥವಾ ಅವರೇ ಹೊರ ಬರುತ್ತಾರೋ ಗೊತ್ತಿಲ್ಲ. ಕುಮಾರಸ್ವಾಮಿಯವರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ. ಇನ್ನಷ್ಟು ದಿನ ಅವರು ಆಡಳಿತ ನಡೆಸಿದ್ದರೆ ಸಂತೋಷಪಡುತ್ತಿದ್ದೆ. ನಾವು ಎಲ್ಲಿಯೂ ಸರ್ಕಾರ ಬೀಳಲಿ ಎಂದು ಹೇಳಿಲ್ಲ. ಸರ್ಕಾರದಿಂದಾಗುತ್ತಿದ್ದ ಲೋಪಗಳನ್ನು ತಿಳಿಸುತ್ತಿದ್ದೆ. ಸರ್ಕಾರ ಬೀಳುವುದರಿಂದ ನಮಗೇನೂ ಖುಷಿಯಿಲ್ಲ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.