ಜನ ಸಂಪರ್ಕ ಸಭೆಗೆ ಬಾರದ ಜನ!


Team Udayavani, Dec 21, 2019, 3:30 PM IST

mandya-tdy-1

ನಾಗಮಂಗಲ: ಜನಸಾಮಾನ್ಯರ ಸಮಸ್ಯೆಗಳನ್ನು ಮನೆಬಾಗಿಲಲ್ಲೇ ಬಗೆಹರಿಸುವುದು, ಕಚೇರಿಗಳಿಗೆ ಅಲೆದಾಟ ತಪ್ಪಿಸುವುದು, ಮುಖ್ಯವಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಕೆಲಸ ಕಾರ್ಯಗಳನ್ನು ಶೀಘ್ರ ಮಾಡಿಕೊಡುವ ಉದ್ದೇಶದಿಂದ ಸರ್ಕಾರ “ಜನ ಸಂಪರ್ಕ ಸಭೆ’ಗಳನ್ನು ಆಯೋಜಿಸುತ್ತಿದೆ. ಆದರೆ, ಇಂತಹ ಸಭೆಗಳಿಗೆ ಜನಸಾಮಾನ್ಯರೇ ಬರಲ್ಲವೆಂದರೆ ಅಧಿಕಾರಿಗಳೇನು ಮಾಡಬೇಕು?

ಹೀಗೆಂದು ಜಿಲ್ಲಾ ಸೆಸ್ಕ್ ಅಧೀಕ್ಷಕ ಅಭಿಯಂತರ ಶ್ರೀನಿವಾಸಮೂರ್ತಿ ಪ್ರಶ್ನಿಸಿದರು. ಪಟ್ಟಣದಲ್ಲಿ ಶುಕ್ರವಾರ ಸೆಸ್ಕ್ ಗ್ರಾಹಕರಿಗಾಗಿ ಕುಂದು ಕೊರತೆಗಳ ಅಹವಾಲು ಸ್ವೀಕಾರಕ್ಕಾಗಿ ಆಯೋಜಿಸಿದ್ದ ಜನ ಸಂಪರ್ಕ ಸಭೆಗೆ ಇಡೀ ತಾಲೂಕಿನ ಕೇವಲ ಒಬ್ಬೇ ಒಬ್ಬ ರೈತ ಆಗಮಿಸದ್ದನ್ನು ಕಂಡು ಸೆಸ್ಕ್ ಅಧೀಕ್ಷರು ಸ್ಥಳೀಯ ಸೆಸ್ಕ್ ಕಚೇರಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಟಿಬಿ ಬಡಾವಣೆಯ ಸೆಸ್ಕ್ ಕಚೇರಿಯಲ್ಲಿ ಆಯೋಜಿಸಿದ್ದ ಸೆಸ್ಕ್ ತಾಲೂಕು ಮಟ್ಟದ ಜನ ಸಂಪರ್ಕ ಸಭೆಗೆ ಜನರಿಲ್ಲದ ಕಾರಣ ಅಧಿಕಾರಿ ಆಕ್ರೋಶಕ್ಕೆ ಕಾರಣವಾಯಿತು.

ವಿದ್ಯುತ್‌ ಸ್ಪರ್ಶಕ್ಕೆ ಬೆಳೆ ಭಸ್ಮ: ಜನಸಂಪರ್ಕ ಸಭೆಗೆ ತಾಲೂಕಿನ ಶ್ರೀರಘುರಾಂಪುರ ಗ್ರಾಮದ ಕೇವಲ ಒಬ್ಬೇ ರೈತ ಜವರೇಗೌಡ ಆಗಮಿಸಿ ಕಳೆದ 10 ತಿಂಗಳ ಹಿಂದೆ ತನ್ನ ಜಮೀನಿನ ಮೇಲೆ ಹಾದುಹೋಗಿದ್ದ ವಿದ್ಯುತ್‌ ತಂತಿಯಲ್ಲಿ ಬೆಂಕಿ ಉಂಟಾಗಿ ಎರಡು ಎಕರೆಯಲ್ಲಿ ಬೆಳೆದಿದ್ದ ಬಾಳೆ ಹಾಗೂ ತೆಂಗು ಸುಟ್ಟು ಸುಟ್ಟು ಭಸ್ಮವಾಗಿದೆ. ಇದರಿಂದ ಸುಮಾರು 10 ಲಕ್ಷ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಇದುವರೆಗೂ ಯಾರೂ ಅತ್ತ ಸುಳಿದಿಲ್ಲ. ಯಾವ ಪರಿಹಾರ ಕೊಟ್ಟಿಲ್ಲ. ನಾನು ಮತ್ತೆ ಸಾಲ ಮಾಡಿ ಬೆಳೆ ಬೆಳೆದು ಇದೇ ರೀತಿ ಸುಟ್ಟರೆ ಏನು ಮಾಡಬೇಕೆಂದು ಅಧೀಕ್ಷಕ ಅಭಿಯಂತರರ ಬಳಿ ತಮ್ಮ ಅಳಲು ತೋಡಿಕೊಂಡರು.

ಪರಿಹಾರ ನೀಡಲು ಸೂಚನೆ: ರೈತ ಜವರೇಗೌಡನ ಅಳಲಿಗೆ ಸ್ಪಂದಿಸಿದ ಅಧೀಕ್ಷಕರು ಕೂಡಲೇ ದೂರವಾಣಿ ಮೂಲಕ ಮಂಡ್ಯ ಕಚೇರಿಯ ಅಧಿಕಾರಿಯೊಂದಿಗೆ ಮಾತನಾಡಿ, ಪರಿಹಾರ ನೀಡುವಂತೆ ಸೂಚಿಸಿದರು. ಅಷ್ಟಲ್ಲದೆ ಸಭೆಯಲ್ಲಿದ್ದ ಆ ವಿಭಾಗದ ಎಂಜಿನಿಯರ್‌ರಿಂದ ಕಡತ ತರಿಸಿಕೊಂಡು ಪರಿಶೀಲಿಸಿ ಎಂಜಿನಿಯರ್‌ ಜೊತೆಯಲ್ಲೇ ರೈತ ಜವರೇಗೌಡರನ್ನು ಮಂಡ್ಯ ಕಚೇರಿಗೆ ಕಳುಹಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಎಇಇ ಮರಿಸ್ವಾಮಿ, ಎಇ ಕುಮಾರ್‌, ಪ್ರಭಾರ ಇಇ ಸೋಮರಾಜ್‌, ಎಇಇ ಜಗದೀಶ್‌ ಮತ್ತಿತರರು ಹಾಜರಿದ್ದರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.