![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 10, 2018, 9:57 AM IST
ಮಂಡ್ಯ/ಬೆಂಗಳೂರು: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಮಾಜಿ ಸಚಿವ ಚೆಲುವರಾಯಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮಂಗಳವಾರ ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ಡೆಡ್ ಹಾರ್
ಇದ್ದಂತೆ. ನಾಗಮಂಗಲ ಕ್ಷೇತ್ರದ ಇತಿಹಾಸದಲ್ಲಿ 52 ಸಾವಿರ ಮತಗಳ ಅಂತರದಿಂದ ಯಾರಾದರೂ ಸೋತಿರುವುದನ್ನು ಕಂಡಿದ್ದೀರಾ? ಜನರು ಸೋಲಿಸಿ ಕಳುಹಿಸಿದ್ದಾರೆ ಬಾಯಿ ಮುಚ್ಚಿಕೊಂಡಿರಿ ಅಂತ. ಮೊದಲು ಅವರು ಆ ಕೆಲಸ ಮಾಡಲಿ.
ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ನಾವು ಯಾರನ್ನೂ ಗೋಗರೆಯುತ್ತಿಲ್ಲ. ಜನರು ಕೊಟ್ಟ ತೀರ್ಪಿನಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಅವರೆಲ್ಲರ ಸೂಚನೆಯಂತೆ ನಾನು ಮತ್ತು ಚೆಲುವರಾಯಸ್ವಾಮಿ ನಡೆಯಲೇಬೇಕಾಗುತ್ತದೆ ಎಂದಿದ್ದರು.
ಇದಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸಚಿವ ಪುಟ್ಟರಾಜು ತಲೆಯಲ್ಲಿ ಮೆದುಳು ಇಟ್ಟುಕೊಂಡು
ಮಾತನಾಡಬೇಕು. ಅವರು ನಮ್ಮನ್ನು ಸತ್ತ ಕುದುರೆಗಳು ಎಂದು ಕರೆದಿದ್ದಾರೆ. ನಮ್ಮನ್ನು ಜನರು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಆಡಿಕೊಂಡಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
ಪುಟ್ಟರಾಜು ವಿರುದಟಛಿ ಏಕವಚನದಲ್ಲಿಯೇ ಮಾತನಾಡಿದ ಚೆಲುವರಾಯಸ್ವಾಮಿ, ಚಿಕ್ಕಬಳ್ಳಾಪುರದಲ್ಲಿ ಕುಮಾರಸ್ವಾಮಿ ಎಷ್ಟು ಅಂತರದಲ್ಲಿ
ಸೋತಿದ್ದರು ಅನ್ನುವುದು ಗೊತ್ತಿಲ್ಲವಾ? ಅವನು ಚುನಾವಣೆಯಲ್ಲಿ ಸೋತಿಲ್ಲವೇನೊ ಗೊತ್ತಿಲ್ಲ. ಆದರೆ, ಅವನು ಯಾವ ರೀತಿ ಸಂಸದನಾದ
ಎನ್ನುವುದು ಎಲ್ಲರಿಗೂ ಗೊತ್ತಿದೆ. ದೇವೇಗೌಡರೂ ಕೂಡ ಅವನಿಗೆ “ಹೇಗೆ ಗೆದ್ದ’ ಎಂದು ನೇರವಾಗಿಯೇ ಹೇಳಿದ್ದಾರೆ ಎಂದರು.
ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನಾಯಕರ ಕೆಲಸಗಳು ಆಗುತ್ತಿಲ್ಲ. ಮೈತ್ರಿ ಕೇವಲ ವಿಧಾನಸೌಧಕ್ಕೆ ಮಾತ್ರ ಸೀಮಿತ ಅಂತ ದೇವೇಗೌಡರೇ ಹೇಳಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಿದರೆ ಈಗಲೂ ಪ್ರಬಲ ಪೈಪೋಟಿ ನೀಡುತ್ತೇವೆ. ಆದರೆ, ಮೈತ್ರಿ ಸರ್ಕಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.