ಮೋದಿ ರೋಡ್‌ ಶೋಗಾಗಿ ಮರದ ಕೊಂಬೆ ಕಟಾವು


Team Udayavani, Mar 9, 2023, 3:29 PM IST

tdy-22

ಮಂಡ್ಯ: ಮಾ.12ರಂದು ಪ್ರಧಾನಿ ಮೋದಿ ಜಿಲ್ಲೆಗೆ ಆಗಮಿಸುತ್ತಿದ್ದು, ರೋಡ್‌ ಶೋ ಹಿನ್ನೆಲೆಯಲ್ಲಿ ನಗರದ ಬೆಂಗಳೂರು -ಮೈಸೂರು ಹೆದ್ದಾರಿ ಇಕ್ಕೆಲಗಳಲ್ಲಿದ್ದ ಬೃಹತ್‌ ಮರಗಳ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿರಿವುದರಿಂದ ಸಾರ್ವಜನಿಕರು ಹಾಗೂ ಪರಿಸರವಾದಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ನಗರದ ಪಿಇಟಿ ಕ್ರೀಡಾಂಗಣದ ಹೆಲಿ ಪ್ಯಾಡ್‌ಗೆ ಬಂದಿಳಿಯುವ ಮೋದಿ, ಅಲ್ಲಿಂದ ಕಾರಿನ ಮೂಲಕ ಪ್ರವಾಸಿ ಮಂದಿರದ ವೃತ್ತದವರೆಗೆ ಬಂದು, ನಂತರ ನಂದ ವೃತ್ತದವರೆಗೂ ರೋಡ್‌ ಶೋ ನಡೆಸಲಿದ್ದಾರೆ. ಆದರೆ, ರೋಡ್‌ ಶೋ ನಡೆಯುವ 1.5 ಕಿ.ಮೀ ಉದ್ದದವರೆಗೂ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಮರಗಳ ಕೊಂಬೆಗಳನ್ನು ಕಡಿದು ಹಾಕಿದ್ದಾರೆ.

ಮರ ಕತ್ತರಿಸಿರುವುದು ಎಷ್ಟು ಸರಿ: ಹೆದ್ದಾರಿಗೆ ಬಾಗುವ ಕೊಂಬೆಗಳನ್ನು ಮಾತ್ರ ಕಡಿದಿ ರುವುದರಿಂದ ಮತ್ತೂಂದು ಭಾಗದ ಮೇಲೆ ಮರದ ಭಾರ ಬಿದ್ದು, ಮಳೆಗಾಲದಲ್ಲಿ ಬಿರುಗಾಳಿಗೆ ಬೀಳುವ ಸ್ಥಿತಿಗೆ ತಲುಪಿವೆ. ಇದು ಅಕ್ಕಪಕ್ಕದ ಕಟ್ಟಡ ಮಾಲೀಕರಿಗೆ ಆತಂಕ ತಂದೊಡ್ಡಿದೆ. ಪರಿಸರ ಉಳಿಸಿ, ಜಾಗತಿಕ ತಾಪಮಾನ ಕಡಿಮೆ ಮಾಡಲು ಮರಗಿಡಗಳನ್ನು ಬೆಳೆಸಿ ಎನ್ನುವ ಪ್ರಧಾನಿ ಮೋದಿ ಅವರು, ತಮ್ಮ ರೋಡ್‌ ಶೋಗಾಗಿ ಮರಗಳನ್ನು ಕತ್ತರಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.

ಪರಿಸರ ನಾಶ ಸರಿಯಲ್ಲ: ಮರಗಳ ಕೊಂಬೆಗಳನ್ನು ಕತ್ತರಿಸಿರುವುದರಿಂದ ಮಂಡ್ಯ ನಗರದ ಚಿತ್ರಣವೇ ಬದಲಾಗಿದೆ. ಹೆದ್ದಾರಿ ಸಂಪೂರ್ಣ ಹಸಿರುಮಯವಾಗಿತ್ತು. ಆದರೆ, ಈಗ ಸಂಪೂರ್ಣ ಬೋಳಾದಂತೆ ಕಂಡು ಬರುತ್ತಿದೆ. ಮೋದಿ ಅವರ ರೋಡ್‌ ಶೋ ಯಶಸ್ವಿಗೊಳಿಸಲು ಸರ್ಕಾರ ಈ ರೀತಿಯ ಪರಿಸರ ನಾಶ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಪರಿಸರವಾದಿಗಳು ಕಿಡಿಕಾರಿದ್ದಾರೆ.

ಇತ್ತೀಚೆಗೆ ಒಣಗಿದ ಮರದ ಕೊಂಬೆಯೊಂದು ಬಿದ್ದು ಪೌರ ಕಾರ್ಮಿಕನೊಬ್ಬ ಮೃತಪಟ್ಟಿದ್ದನು. ಇದರಿಂದ ಆತನ ಪತ್ನಿ, ಮಗು ಅನಾಥವಾಗಿದೆ. ಅಪಾಯದಲ್ಲಿರುವ ಒಣಗಿದ ಕೊಂಬೆಗಳನ್ನು ಕತ್ತರಿಸಲು ಮುಂದಾ ಗದ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಚುನಾವಣೆ ರೋಡ್‌ ಶೋಗಾಗಿ ಚೆನ್ನಾಗಿರುವ ಮರದ ಕೊಂಬೆಗಳನ್ನು ಕತ್ತರಿಸಿರುವುದು ಎಷ್ಟು ಸರಿ?. ಪಾದಚಾರಿಗಳು, ಬೀದಿಬದಿ ವ್ಯಾಪಾರಿಗಳಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆಗಳನ್ನು ಕಡಿದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಾಯದಲ್ಲಿರುವ ಒಣಗಿದ ಕೊಂಬೆಗಳನ್ನು ಕತ್ತರಿಸುವುದಕ್ಕೆ ನಮಗೆ ಅಭ್ಯಂತರವಿಲ್ಲ. ಆದರೆ, ಮೋದಿ ಬರುತ್ತಿರುವ ಹಿನ್ನೆಲೆ ರೋಡ್‌ ಶೋ ಯಶಸ್ವಿಗೊಳಿಸಲು ಹಸಿರುಮ ಯವಾಗಿದ್ದ ಮಂಡ್ಯ ನಗರವನ್ನು ಹಾಳು ಮಾಡಿದ್ದು ಸರಿಯಲ್ಲ. – ಎಂ.ಬಿ.ನಾಗಣ್ಣಗೌಡ, ಗೌರವಾಧ್ಯಕ್ಷ, ಕರುನಾಡು ಸೇವಕರು

ಸಂಘಟನೆ ಮರಗಳ ಕೊಂಬೆಗಳನ್ನು ಬೇಕಾಬಿಟ್ಟಿಯಾಗಿ ಕತ್ತರಿಸಿರು ವುದು ಸರಿಯಲ್ಲ. ಈ ಮರಗಳು ನಗರದ ಸೌಂದರ್ಯ ಹೆಚ್ಚಿಸಿದ್ದವು. ಅಲ್ಲದೆ, ಪಾದಚಾರಿಗಳಿಗೆ ನೆರಳು ನೀಡುತ್ತಿದ್ದವು. ಇಂತಹ ಮರಗಳನ್ನು ಅರ್ಧಂಬರ್ಧ ಕತ್ತರಿಸಿ ಹಾಕಿರುವುದು ಸರಿಯಲ್ಲ. – ಪ್ರೊ.ಜಿ.ಟಿ.ವೀರಪ್ಪ, ಮಾಜಿ ಅಧ್ಯಕ್ಷರು, ಕಸಾಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.