ಪಡಿತರ ಪಡೆಯಲು ಸರ್ವರ್‌ ತೊಡಕು


Team Udayavani, Nov 17, 2019, 2:54 PM IST

mandya-tdy-1

ಮಂಡ್ಯ: ಪಡಿತರ ಚೀಟಿದಾರರು ಸದ್ಯ ಪಡಿತರ ಪದಾರ್ಥಗಳಿಗಾಗಿ ಪರದಾಡುವ ಸನ್ನಿವೇಶ ಸೃಷ್ಟಿಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿರುವ ಬಯೋಮೆಟ್ರಿಕ್‌ ಯಂತ್ರಕ್ಕೆ ಅರ್ಹರು ಹೆಬ್ಬೆಟ್ಟು ಕೊಟ್ಟರೂ ಸ್ವೀಕರಿಸುತ್ತಿಲ್ಲ, ಪಡಿತರಕ್ಕಾಗಿ ದಿನಗಟ್ಟಲೆ ಕಾದು ಕೂರುವ ಪರಿಸ್ಥಿತಿ ಇದೆ. ಇದಕ್ಕೆ ಕಾರಣ ಸರ್ವರ್‌ ಡೌನ್‌.

ಒಂದು ದಿನಕ್ಕೆ ಮೂರರಿಂದ ನಾಲ್ಕು ಮಂದಿ ಹೆಬ್ಬೆಟ್ಟನ್ನು ಸ್ವೀಕರಿಸುವುದೇ ಹೆಚ್ಚು. ಉಳಿದಂತೆ ಸರ್ವರ್‌ ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತದೆ. ಪಡಿತರ ಪಡೆಯಲು ಸಿದ್ಧರಾಗಿ ಬರುವವರು ಸರ್ವರ್‌ ಇಲ್ಲದಿರುವುದನ್ನು ತಿಳಿದು ನಿರಾಸೆಯಿಂದ ವಾಪಸ್‌ ತೆರಳುತ್ತಿದ್ದಾರೆ.

ಪ್ರತಿ ತಿಂಗಳ ಮೊದಲ ವಾರದಲ್ಲೇ ಪಡಿತರ ಪದಾರ್ಥಗಳನ್ನು ನೀಡಿ ಮುಗಿಸಕು.ಆದರೆ, ಅಕ್ಟೋಬರ್‌ ತಿಂಗಳ ಪಡಿತರವನ್ನು ಹದಿನೈದು ದಿನಗಳಾದರೂ ಕೊಡಲು ಸಾಧ್ಯವಾಗಿಲ್ಲ. ಬಯೋಮೆಟ್ರಿಕ್‌ ಯಂತ್ರ ಅರ್ಹ ಪಡಿತರದಾರರ ಹೆಬ್ಬೆಟ್ಟು ಸ್ವೀಕರಿಸುವಲ್ಲಿ ವಿಫ‌ಲವಾಗುತ್ತಿದೆ. ಇದುನ್ಯಾಯಬೆಲೆ ಅಂಗಡಿಯವರು ಹಾಗೂ ಪಡಿತರ ಚೀಟಿದಾರರನ್ನು ಬೆಸ್ತು ಬೀಳುವಂತೆ ಮಾಡಿದೆ. ಅಲ್ಲದೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೂ ತೊಂದರೆ ತಂದೊಡ್ಡಿದೆ. ಪಡಿತರ ಪದಾರ್ಥಗಳನ್ನೇ ಜೀವನಾಧಾರ ಮಾಡಿಕೊಂಡಿರುವವರು ಕೆಲಸ ಬಿಟ್ಟು ದಿನಗಟ್ಟಲೆ ನ್ಯಾಯಬೆಲೆ ಅಂಗಡಿಗಳ ಎದುರು ಕಾದು ಕೂರುತ್ತಿದ್ದಾರೆ.

ದಿನವಿಡೀ ಕಾಯ್ದರೂ ಸರ್ವರ್‌ ಸರಿಹೋಗದೆ ವಾಪಸ್‌ ತೆರಳಿರುವ ನಿದರ್ಶನಗಳೂ ಇವೆ. ಕೆಲವು ನ್ಯಾಯಬೆಲೆ ಅಂಗಡಿಗಳ ಮಾಲೀಕರು ವಿಶ್ವಾಸ, ನಂಬಿಕೆ ಮೇಲೆ ಪಡಿತರ ಚೀಟಿದಾರರಿಂದ ಕಾರ್ಡ್‌ ಗಳು ಮತ್ತು ಅವರ ಫೋನ್‌ ನಂಬರ್‌ಗಳನ್ನು ಪಡೆದು ಪಡಿತರ ಪದಾರ್ಥಗಳನ್ನು ವಿತರಿಸುತ್ತಿದ್ದಾರೆ. ಸರ್ವರ್‌ ಸಿಕ್ಕ ಸಮಯದಲ್ಲಿ ಅವರಿಗೆ ದೂರವಾಣಿ ಕರೆ ಮಾಡಿ ಕರೆಸಿಕೊಂಡು ಹೆಬ್ಬೆಟ್ಟನ್ನು ಬಯೋಮೆಟ್ರಿಕ್‌ ಯಂತ್ರದಲ್ಲಿ ದಾಖಲಿಸಿಕೊಳ್ಳುತ್ತಿದ್ದಾರೆ. ಆದರೆ, ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಬ್ಬೆಟ್ಟು ದಾಖಲಾಗದೆ ಅರ್ಹರಿಗೆ ಪಡಿತರ ಪದಾರ್ಥಗಳನ್ನು ನೀಡುತ್ತಿಲ್ಲ. ಇದರಿಂದ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಿಗೆ ನಿತ್ಯವೂ ಅಲೆದಾಡುವ ಸ್ಥಿತಿ ಸಾಮಾನ್ಯವಾಗಿದೆ.

ಅಂಗಡಿ ಮಾಲೀಕರ ಅಸಹಾಯಕತೆ: ಕೆಲವು ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8 ಗಂಟೆಗೆ ಬಾಗಿಲು ತೆರೆದರೆ, ಬಹುತೇಕ ಅಂಗಡಿಗಳು ಬೆಳಗ್ಗೆ 10.30ರ ನಂತರ ತೆರೆಯುತ್ತಿವೆ.ಕೆಲವೊಮ್ಮೆ 8 ಗಂಟೆಯಿಂದ 10.30ರವರೆಗೆ ಸರ್ವರ್‌ ಸಿಗುವ ಸಾಧ್ಯತೆಯಿದೆ. ಅದನ್ನು ತಿಳಿದು ಎಲ್ಲಾ ಕೆಲಸ ಬಿಟ್ಟು ಪಡಿತರ ಚೀಟಿ ಕುಟುಂಬದ ಸದಸ್ಯರು ಬಂದರೂ ಆವೇಳೆಯಲ್ಲೂ ಸ್ಥಗಿತಗೊಂಡಿರುವುದು ಪಡಿತರದಾರರನ್ನು ಕಂಗೆಡಿಸುತ್ತಿದೆ. ಇನ್ನು ಬೆಳಗ್ಗೆ 10.30ರಿಂದ ಸಂಜೆ 7 ಗಂಟೆಯವರೆಗೆ ಸರ್ವರ್‌ ಸಿಗುವುದೇ ಇಲ್ಲ. ನ್ಯಾಯಬೆಲೆಅಂಗಡಿ ಮಾಲೀಕರು ಪಡಿತರ ಪದಾರ್ಥಗಳನ್ನು ನೀಡಲಾಗದೆ ಅಸಹಾಯಕತೆ ಪ್ರದರ್ಶಿಸುವುದು ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.